News13 ವಾಟ್ಸ್ಯಾಪ್‌ ಗ್ರೂಪ್‌ಗೆ ಸೇರಿ


×
Home About Us Advertise With s Contact Us

ಪ್ರವೀಣ್‌ ನೆಟ್ಟಾರು ಹತ್ಯೆ ಪ್ರಕರಣ: ಇಬ್ಬರು ಆರೋಪಿಗಳ ಮಾಹಿತಿ ನೀಡಿದವರಿಗೆ ಬಹುಮಾನ ಘೋಷಣೆ

ನವದೆಹಲಿ: ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣದಡಿ ಬೇಕಾಗಿರುವ ಇಬ್ಬರು ಪಾಪ್ಯುಲರ್ ಫ್ರಂಟ್ ಆಫ್ ಇಂಡಿಯಾ (ಪಿಎಫ್‌ಐ) ಸದಸ್ಯರ ಮಾಹಿತಿ ನೀಡಿದವರಿಗೆ ರಾಷ್ಟ್ರೀಯ ತನಿಖಾ ಸಂಸ್ಥೆ (ಎನ್‌ಐಎ) ಬಹುಮಾನ ಘೋಷಿಸಿದೆ.

ಎನ್ಐಎಯ ವಾಂಟೆಡ್ ಪೋಸ್ಟರ್ ಪ್ರಕಾರ, ಇಬ್ಬರೂ ಭಯೋತ್ಪಾದಕ ಸಹಚರರು ಕರ್ನಾಟಕದ ನಿವಾಸಿಗಳು.

ಇಬ್ಬರು ಪಿಎಫ್‌ಐ ಸದಸ್ಯರಾದ ಕೊಡಾಜೆ ಮೊಹಮ್ಮದ್ ಶೆರೀಫ್ 53 ವರ್ಷ ಮತ್ತು ಮಸೂದ್ ಕೆಎ 40 ವರ್ಷ ಎನ್‌ಐಎ ವಾಂಟೆಡ್‌ ಲಿಸ್ಟ್‌ನಲ್ಲಿ ಇದ್ದಾರೆ. ಇವರ ಬಗ್ಗೆ ಮಾಹಿತಿ ನೀಡಿದವರಿಗೆ ಎನ್‌ಐಎ ತಲಾ 5 ಲಕ್ಷ ರೂಪಾಯಿಗಳ ಬಹುಮಾನವನ್ನು ಘೋಷಿಸಿದೆ.

ಎನ್‌ಐಎ ಈ ಕುರಿತು ಪೋಸ್ಟರ್‌ ಹಾಕಿದ್ದು, “ಮೇಲೆ ತಿಳಿಸಿದ ಆರೋಪಿಗಳ ಬಂಧನಕ್ಕೆ ಕಾರಣವಾಗುವ ಯಾವುದೇ ಮಾಹಿತಿಯನ್ನು ಒದಗಿಸುವವರಿಗೆ ಬಹುಮಾನ ನೀಡಲಾಗುವುದು. ಮಾಹಿತಿ ನೀಡಿದವರ ಗುರುತನ್ನು ಗೌಪ್ಯವಾಗಿಡಲಾಗುವುದು ಎಂದು ತಿಳಿಸಿದೆ

ಬಿಜೆಪಿ ಯುವ ಮೋರ್ಚಾ ಕಾರ್ಯಕರ್ತ ಪ್ರವೀಣ್ ನೆಟ್ಟಾರು ಜುಲೈ 26, 2022 ರಂದು  ಅಪರಿಚಿತ ದುಷ್ಕರ್ಮಿಗಳಿಂದ ಕೊಲ್ಲಲ್ಪಟ್ಟರು.  ಬೈಕ್ ನಲ್ಲಿ ಬಂದ ಅಪರಿಚಿತ ದುಷ್ಕರ್ಮಿಗಳು ನೆಟ್ಟಾರು ಎಂಬಲ್ಲಿ ಹರಿತವಾದ ಆಯುಧಗಳಿಂದ ದಾಳಿ ನಡೆಸಿ ಅವರ ಹತ್ಯೆ ಮಾಡಿದ್ದರು.

ಈ ನಡುವೆ, ಕಾಶ್ಮೀರ ಮತ್ತು ಅಫ್ಘಾನಿಸ್ತಾನದ ಖೊರಾಸಾನ್‌ಗೆ ಭಯೋತ್ಪಾದಕ ತರಬೇತಿಗೆ ಒಳಗಾಗಲು ಯುವಕರನ್ನು ಕಳುಹಿಸಲು ಸಂಚು ರೂಪಿಸಿದ ಪ್ರಕರಣದಲ್ಲಿ ಅಲ್-ಖೈದಾದೊಂದಿಗೆ ಸಂಬಂಧ ಹೊಂದಿರುವ ಇಬ್ಬರು ಆರೋಪಿಗಳ ವಿರುದ್ಧ ಚಾರ್ಜ್‌ಶೀಟ್ ಸಲ್ಲಿಸುವುದಾಗಿ ಎನ್‌ಐಎ ಹೇಳಿಕೊಂಡಿದೆ.

ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.

News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.

Recent News

Back To Top