ನವದೆಹಲಿ: ಗುಜರಾತ್ ಹಿಂಸಾಚಾರದ ಬಗ್ಗೆ ಪ್ರಧಾನಿ ನರೇಂದ್ರ ಮೋದಿಯವರನ್ನು ಗುರಿಯಾಗಿಸಿ ಸಾಕ್ಷ್ಯಚಿತ್ರ ನಿರ್ಮಾಣ ಮಾಡಿದ ಬಿಬಿಸಿ ವಿರುದ್ಧ ಸಾಕಷ್ಟು ಟೀಕೆಗಳು ವ್ಯಕ್ತವಾಗುತ್ತಿದೆ. ಇದೀಗ ಸುಪ್ರೀಂಕೋರ್ಟ್ ವಕೀಲರೊಬ್ಬರು ಬಿಬಿಸಿ ವಿರುದ್ಧ ದೂರು ದಾಖಲಿಸಿದ್ದಾರೆ.
ಮೋದಿ ವಿರುದ್ಧದ ಸಾಕ್ಷ್ಯಚಿತ್ರಕ್ಕೆ ಪ್ರತಿಕ್ರಿಯೆಯಾಗಿ ಸುಪ್ರೀಂಕೋರ್ಟ್ನ ವಕೀಲ ಮತ್ತು ಸಾಮಾಜಿಕ ಕಾರ್ಯಕರ್ತ ವಿನೀತ್ ಜಿಂದಾಲ್ ಇಂದು ಬ್ರಿಟಿಷ್ ಬ್ರಾಡ್ಕಾಸ್ಟಿಂಗ್ ಕಾರ್ಪೊರೇಷನ್ (ಬಿಬಿಸಿ) ವಿರುದ್ಧ ದೂರು ದಾಖಲಿಸಿದ್ದಾರೆ.
2002 ರಲ್ಲಿ ಗೋಧ್ರಾದಲ್ಲಿ ಹಿಂದೂ ಯಾತ್ರಿಕರನ್ನು ಹೊತ್ತೊಯ್ಯುತ್ತಿದ್ದ ರೈಲಿಗೆ ಬೆಂಕಿ ಹಚ್ಚಿದ ನಂತರ ಸೃಷ್ಟಿಯಾದ ಗಲಭೆಗೆ ಮೋದಿಯನ್ನು ಕಾರಣರನ್ನಾಗಿಸಿ ಬಿಬಿಸಿ ಡಾಕ್ಯಮೆಂಟರಿ ಪ್ರಸಾರ ಮಾಡಿದೆ. ಇದಕ್ಕೆ ಭಾರೀ ವಿರೋಧಗಳು ವ್ಯಕ್ತವಾಗಿದ್ದು, ಯುಕೆ ಪ್ರಧಾನಿ ರಿಷಿ ಸುನಕ್ ಕೂಡ ಮೋದಿಯನ್ನು ಸಮರ್ಥಿಸಿಕೊಂಡು ಬಿಬಿಸಿ ಧೋರಣೆಯನ್ನು ಖಂಡಿಸಿದ್ದಾರೆ. ಇದೀಗ ಬಿಬಿಸಿ ವಿರುದ್ಧ ಭಾರತದಲ್ಲಿ ದೂರು ದಾಖಲಿಸಲಾಗಿದೆ.
‘ದೇಶದ ಜನರು ಪ್ರಧಾನಿ ಮೋದಿ ಅವರನ್ನು ಆಯ್ಕೆ ಮಾಡಿದ್ದಾರೆ. ದೇಶದಲ್ಲಿ ಸಾಂವಿಧಾನಿಕ ಸರ್ಕಾರವಿದೆ ಮತ್ತು ಬಿಬಿಸಿ ನ್ಯೂಸ್ನ ಈ ಕೃತ್ಯವು ಭಾರತದಲ್ಲಿ ಮಾತ್ರವಲ್ಲದೆ ವಿಶ್ವದ ಹಿಂದೂಗಳ ವಿರುದ್ಧ ಮುಸ್ಲಿಮರನ್ನು ಎತ್ತಿಕಟ್ಟುವ ಸಂಚು. ಆದ್ದರಿಂದ, ಇದು ಅಪಾಯಕಾರಿ ಮತ್ತು ಅದರ ವಿರುದ್ಧ ಕ್ರಮ ತೆಗೆದುಕೊಳ್ಳಬೇಕು” ಜಿಂದಾಲ್ ಟ್ವಿಟ್ ಮಾಡಿದ್ದಾರೆ..
देश की जानता ने मोदी जी को चुना देश में संविधानिक सरकार है और @BBCNews का ये कृत्य देश ही नहीं विश्व में मुसलमानों को हिन्दूओ के ख़िलाफ़ भड़काने की अंतरराष्ट्रीय साज़िश है जो बहुत घातक हो सकती है इसलिए कारवाही होनी चाहिए_:-विनीत जिन्दल @PTI_News @ANI @IANSKhabar pic.twitter.com/gR3ChlnLKP
— Adv.Vineet Jindal (@vineetJindal19) January 20, 2023
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.