News13 ವಾಟ್ಸ್ಯಾಪ್‌ ಗ್ರೂಪ್‌ಗೆ ಸೇರಿ


×
Home About Us Advertise With s Contact Us

3 ದಿನಗಳ ‘ಅಂತರರಾಷ್ಟ್ರೀಯ ಸಿರಿಧಾನ್ಯ, ಸಾವಯವ ಮೇಳ’ ಕ್ಕೆ ಸಿಎಂ ಚಾಲನೆ 

ಬೆಂಗಳೂರು: ಕೃಷಿ ಇಲಾಖೆಯು ಬೆಂಗಳೂರಿನಲ್ಲಿಆಯೋಜಿಸಿರುವ  ಮೂರು ದಿನಗಳ ‘ಅಂತರರಾಷ್ಟ್ರೀಯ ಸಿರಿಧಾನ್ಯ, ಸಾವಯವ ಮೇಳ- 2023’ ಕ್ಕೆ  ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಇಂದು ಚಾಲನೆ ನೀಡಿದರು. ಈ ಸಂದರ್ಭದಲ್ಲಿ ಕೇಂದ್ರ ಕೃಷಿ ಖಾತೆ ರಾಜ್ಯ  ಸಚಿವರಾದ ಕೈಲಾಸ್‌ನಾಥ್ ಚೌಧರಿ, ಶೋಭಾ ಕರಂದ್ಲಾಜೆ, ರಾಜ್ಯ ಕೃಷಿ ಸಚಿವ ಬಿ.ಸಿ. ಪಾಟೀಲ್ ಮತ್ತಿತರರು ಉಪಸ್ಥಿತರಿದ್ದರು.

ನಂತರ ಮಾತನಾಡಿದ ಮುಖ್ಯಮಂತ್ರಿಗಳು, ಇಂದಿನ ಒತ್ತಡಯುಕ್ತ ಜೀವನಶೈಲಿ ನಿಭಾಯಿಸಲು, ಮಾನವನಿಗೆ ಸಿರಿಧಾನ್ಯ ಆಹಾರ ಪದಾರ್ಥಗಳು ಸಂಜೀವಿನಿಯಂತೆ ದೊರೆತಿವೆ ಎಂದರು.

ಸಿರಿಧಾನ್ಯಗಳಿಂದ ಸ್ಥೂಲಕಾಯತೆ ಮತ್ತು ಮಧುಮೇಹದಂತಹ ರೋಗಗಳನ್ನು ನಿಯಂತ್ರಿಸಲು ಸಾಧ್ಯ ಎಂದರು.

ಸಚಿವ ಬಿ.ಸಿ. ಪಾಟೀಲ್ ಮಾತನಾಡಿ, ಹಿಂದೆ ಸಿರಿಧಾನ್ಯವೆಂದರೆ ಬಡವರ ಆಹಾರವೆಂದಾಗಿತ್ತು.ಈಗ ಸಿರಿಧಾನ್ಯವೆನ್ನುವುದು ಸಿರಿವಂತರ ಆಹಾರವಾಗಿದೆ‌.ಇದಕ್ಕೆ ಜನರ ಆರೋಗ್ಯದ ಬಗ್ಗೆ ಹೆಚ್ಚು ಕಾಳಜಿ ವಹಿಸುತ್ತಿರುವುದು ಪ್ರಮುಖ ಕಾರಣವಾಗಿದೆ ಎಂದರು.

ಸಿರಿಧಾನ್ಯ ತಿಂದವರು ಬುಲೇಟ್‌ನಂತೆ ಶಕ್ತಿವಂತರಾಗುತ್ತಾರೆ ಎಂದು ತಿಳಿಸಿದರು.

ಪ್ರತಿ ಹೆಕ್ಟೇರ್‌ಗೆ 10 ಸಾವಿರ ರೂಪಾಯಿ ಪ್ರೋತ್ಸಾಹ ಧನ ಸಿರಿಧಾನ್ಯ ರೈತರಿಗೆ ನೀಡಲಾಗುತ್ತಿದೆ. ಸಿರಿಧಾನ್ಯ ಬಳಕೆ ಹೆಚ್ಚುತ್ತಿದ್ದು ಒಂದು ಕಾಲದಲ್ಲಿ ಫುಡ್ ಸೆಕ್ಯೂರಿಟಿ ಬಗ್ಗೆ ಗಮನಕೊಡುತ್ತಿದ್ದೆವು. ಈಗ ನ್ಯೂಟ್ರಿಷಿಯನ್ ಬಗ್ಗೆ ಹೆಚ್ಚು ಗಮನ ಹರಿಸಲಾಗುತ್ತಿದೆ. ಕೇಂದ್ರ ಸೇರಿದಂತೆ‌ ರಾಜ್ಯ ಸರ್ಕಾರ ಜನರ ಆರೋಗ್ಯದ ಬಗ್ಗೆ ಹೆಚ್ಚು‌ ಗಮನ ಹರಿಸುತ್ತಿವೆ ಎಂದರು.

ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.

News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.

Recent News

Back To Top