News13 ವಾಟ್ಸ್ಯಾಪ್‌ ಗ್ರೂಪ್‌ಗೆ ಸೇರಿ


×
Home About Us Advertise With s Contact Us

ಸಚಿವರ ಭರವಸೆ ಬಳಿಕ ಪ್ರತಿಭಟನೆ ಹಿಂಪಡೆದ ಕುಸ್ತಿಪಟುಗಳು

ನವದೆಹಲಿ: ಭಾರತದ ಕುಸ್ತಿ ಫೆಡರೇಶನ್ ಅಧ್ಯಕ್ಷ ಬ್ರಿಜ್ ಭೂಷಣ್ ಶರಣ್ ಸಿಂಗ್ ವಿರುದ್ಧ ಕಳೆದ ಮೂರು ದಿನಗಳಿಂದ ನಡೆಸುತ್ತಿದ್ದ ಪ್ರತಿಭಟನೆಯನ್ನು ಕುಸ್ತಿಪಟುಗಳು ಕೊನೆಗೂ ಅಂತ್ಯಗೊಳಿಸಿದ್ದಾರೆ.

ಕೇಂದ್ರ ಕ್ರೀಡಾ ಸಚಿವ ಅನುರಾಗ್ ಠಾಕೂರ್ ಅವರೊಂದಿಗೆ ಶನಿವಾರ ಮಧ್ಯರಾತ್ರಿಯವರೆಗೆ ನಡೆಸಿದ ಮಾತುಕತೆಯ ನಂತರ ಪ್ರತಿಭಟನಾನಿರತ ಕುಸ್ತಿಪಟುಗಳು ಜಂತರ್ ಮಂತರ್‌ನಲ್ಲಿ ಮೂರು ದಿನಗಳಿಂದ ನಡೆಸುತ್ತಿದ್ದ ಧರಣಿಯನ್ನು ಹಿಂಪಡೆಯಲು ನಿರ್ಧರಿಸಿದ್ದಾರೆ.

ನಾಲ್ಕು ವಾರಗಳ ಕಾಲ ಹುದ್ದೆಯಿಂದ ಹಿಂದೆ ಸರಿಯುವಂತೆ ಬ್ರಿಜ್‌ ಭೂಷಣ್‌ ಸಿಂಗ್‌ ಅವರಿಗೆ ಸೂಚನೆ ನೀಡಲಾಗಿದೆ.

ಈ ನಾಲ್ಕು ವಾರಗಳ ಅವಧಿಯಲ್ಲಿ ಮೇಲುಸ್ತುವಾರಿ ಸಮಿತಿಯು ಸಿಂಗ್ ವಿರುದ್ಧದ ಲೈಂಗಿಕ ಕಿರುಕುಳ ಮತ್ತು ಹಣಕಾಸಿನ ಅವ್ಯವಹಾರದ ಆರೋಪಗಳನ್ನು ತನಿಖೆ ಮಾಡುತ್ತದೆ ಮತ್ತು ಫೆಡರೇಶನ್‌ನ ದೈನಂದಿನ ವ್ಯವಹಾರಗಳನ್ನು ನೋಡಿಕೊಳ್ಳುತ್ತದೆ. ಸಮಿತಿಯಲ್ಲಿ ಮೂವರು ಮಾಜಿ ಕ್ರೀಡಾ ಪಟುಗಳು, ಇಬ್ಬರು ಮಹಿಳಾ ಅಥ್ಲೀಟ್‌ಗಳು ಇರಲಿದ್ದಾರೆ ಎಂದು ಮೂಲಗಳು ತಿಳಿಸಿವೆ.

“ಮೇಲ್ವಿಚಾರಣಾ ಸಮಿತಿಯು ತನ್ನ ವರದಿಯನ್ನು ನೀಡಲು ನಾಲ್ಕು ವಾರಗಳ ಕಾಲಮಿತಿಯನ್ನು ಹೊಂದಿರುತ್ತದೆ. ಸಮಿತಿಯು ಅಸ್ತಿತ್ವದಲ್ಲಿ ಇರುವವರೆಗೆ, WFI ಅಧ್ಯಕ್ಷ ಬ್ರಿಜ್ ಭೂಷಣ್ ಸಿಂಗ್ ಅವರು ಸ್ಥಾನದಿಂದ ಹಿಂದೆ ಸರಿಯುತ್ತಾರೆ. ಅವರು ತನಿಖೆಗೆ ಸಮಿತಿಗೆ ಸಹಾಯ ಮಾಡುತ್ತಾರೆ” ಎಂದು ಠಾಕೂರ್ ಹೇಳಿದ್ದಾರೆ.

ಪ್ರಮುಖ ಪ್ರತಿಭಟನಾಕಾರರಲ್ಲಿ ಒಬ್ಬರಾದ ಒಲಿಂಪಿಕ್ ಪದಕ ವಿಜೇತ ಬಜರಂಗ್ ಪುನಿಯಾ ಈ ಬಗ್ಗೆ ಪ್ರತಿಕ್ರಿಯೆ ನೀಡಿದ್ದು, “ಸಚಿವರು ಘೋಷಿಸಿದಂತೆ ಸಮಿತಿಯಲ್ಲಿ ನಮಗೆ ಸಂಪೂರ್ಣ ನಂಬಿಕೆ ಇದೆ. ತನಿಖೆಯನ್ನು ಘೋಷಿಸಿರುವುದು ನಮಗೆ ಖುಷಿ ತಂದಿದೆ. ಸದ್ಯಕ್ಕೆ ನಮ್ಮ ಪ್ರತಿಭಟನೆಯನ್ನು ಹಿಂಪಡೆಯುತ್ತಿದ್ದೇವೆ” ಎಂದಿದ್ದಾರೆ.

ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.

News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.

Recent News

Back To Top