News13 ವಾಟ್ಸ್ಯಾಪ್‌ ಗ್ರೂಪ್‌ಗೆ ಸೇರಿ


×
Home About Us Advertise With s Contact Us

ಭಾರತ ಇಂದು ಸುರಕ್ಷಿತ, ಸುಭದ್ರವಾಗಿದೆ: ಅಮಿತ್‌ ಶಾ

ನವದೆಹಲಿ: ಪ್ರಧಾನಮಂತ್ರಿ ನರೇಂದ್ರ ಮೋದಿಯವರ ನೇತೃತ್ವದಲ್ಲಿ ಭಾರತೀಯ ಭದ್ರತಾ ಸಂಸ್ಥೆಗಳು ತಮ್ಮ ಪ್ರಬಲ ಪ್ರಾಬಲ್ಯವನ್ನು ಸ್ಥಾಪಿಸುವಲ್ಲಿ ಯಶಸ್ವಿಯಾಗಿದೆ ಎಂದು ಕೇಂದ್ರ ಗಞರಹ ಸಚಿವ ಅಮಿತ್ ಶಾ ಹೇಳಿದ್ದಾರೆ.

ಶುಕ್ರವಾರ ನವದೆಹಲಿಯಲ್ಲಿ ಆರಂಭಗೊಂಡ ಮೂರು ದಿನಗಳ ಡೈರೆಕ್ಟರ್ ಜನರಲ್ ಇನ್ಸ್‌ಪೆಕ್ಟರ್ ಜನರಲ್ ಆಫ್ ಪೊಲೀಸ್ 2022 ರ ಅಖಿಲ ಭಾರತ ಸಮ್ಮೇಳನದ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ಭಾರತ ಇಂದು ಸುರಕ್ಷಿತ, ಸುಭದ್ರ ಮತ್ತು ಉತ್ತಮ ನೆಲೆಯಲ್ಲಿ ನಿಂತಿದೆ ಎಂದಿದ್ದಾರೆ.

ಪ್ರಧಾನಮಂತ್ರಿಯವರ ನೇತೃತ್ವದ ಕಾರಣ ಇಂದು ಯಾರೂ ಯಾವುದೇ ಕ್ಷೇತ್ರದಲ್ಲಿ ಭಾರತವನ್ನು ಕಡೆಗಣಿಸುವುದಿಲ್ಲ ಎಂದು  ಶಾ ಹೇಳಿದರು.

ಮೊದಲ ದಿನವಾದ ನಿನ್ನೆ ಸಮ್ಮೇಳನದಲ್ಲಿ, ನೇಪಾಳ ಮತ್ತು ಮ್ಯಾನ್ಮಾರ್‌ನೊಂದಿಗಿನ ಭೂ ಗಡಿಯಲ್ಲಿನ ಭದ್ರತಾ ಸವಾಲುಗಳು, ಭಾರತದಲ್ಲಿ ಅತಿಯಾಗಿ ನೆಲೆಸಿರುವ ವಿದೇಶಿಯರನ್ನು ಗುರುತಿಸುವ ತಂತ್ರಗಳು ಮತ್ತು ಮಾವೋವಾದಿ ಭದ್ರಕೋಟೆಗಳನ್ನು ಗುರಿಯಾಗಿಸುವಂತಹ ವಿಷಯಗಳ ಕುರಿತು ಚರ್ಚೆ ನಡೆದಿದೆ.

ಇಂದು ಮತ್ತು ನಾಳೆ ದೇಶದ ಉನ್ನತ ಪೊಲೀಸ್ ನಾಯಕತ್ವವು ಉದಯೋನ್ಮುಖ ಭದ್ರತಾ ಸವಾಲುಗಳು ಮತ್ತು ಅವಕಾಶಗಳ ಕುರಿತು ತಜ್ಞರು, ಕ್ಷೇತ್ರ ಕಾರ್ಯನಿರ್ವಾಹಕರು ಮತ್ತು ಶಿಕ್ಷಣತಜ್ಞರೊಂದಿಗೆ  ಚರ್ಚೆ ನಡೆಸಲಿದೆ.

ಈ ಸಂದರ್ಭದಲ್ಲಿ ಗೃಹ ಸಚಿವರು ಪ್ರತಿಭಾನ್ವಿತ ಸೇವೆಗಾಗಿ ಪೊಲೀಸ್ ಪದಕವನ್ನು ವಿತರಿಸಿದರು ಮತ್ತು ದೇಶದ ಪ್ರಮುಖ ಮೂರು ಪೊಲೀಸ್ ಠಾಣೆಗಳಿಗೆ ಟ್ರೋಫಿಗಳನ್ನು ವಿತರಿಸಿದರು.

ಪ್ರಧಾನಿ ನರೇಂದ್ರ ಮೋದಿ ಅವರು ಇಂದು ಸಮಾವೇಶದಲ್ಲಿ ಪಾಲ್ಗೊಳ್ಳಲಿದ್ದಾರೆ. ಸಮ್ಮೇಳನವನ್ನು ಹೈಬ್ರಿಡ್ ಮಾದರಿಯಲ್ಲಿ ನಡೆಸಲಾಗುತ್ತಿದೆ.

ರಾಜ್ಯಗಳು ಮತ್ತು ಕೇಂದ್ರಾಡಳಿತಗಳ ಡಿಜಿಪಿ ಮತ್ತು ಕೇಂದ್ರ ಸಶಸ್ತ್ರ ಪೊಲೀಸ್ ಪಡೆಗಳು ಮತ್ತು ಕೇಂದ್ರ ಪೊಲೀಸ್ ಸಂಸ್ಥೆಗಳ ಮುಖ್ಯಸ್ಥರು ಸೇರಿದಂತೆ ಸುಮಾರು ನೂರು ಆಹ್ವಾನಿತರು ಭೌತಿಕವಾಗಿ ಸಮ್ಮೇಳನದಲ್ಲಿ ಭಾಗವಹಿಸಲಿದ್ದಾರೆ. ಉಳಿದ ಆಹ್ವಾನಿತರು ದೇಶದಾದ್ಯಂತ ವರ್ಚುವಲ್‌ ಆಗಿ ಭಾಗವಹಿಸುತ್ತಾರೆ.

ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.

News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.

Recent News

Back To Top