News13 ವಾಟ್ಸ್ಯಾಪ್‌ ಗ್ರೂಪ್‌ಗೆ ಸೇರಿ


×
Home About Us Advertise With s Contact Us

ವೈಜ್ಞಾನಿಕ ಕಾರ್ಯಕ್ರಮ, ಯೋಜನೆಗಳನ್ನು ಪ್ರೋತ್ಸಾಹಿಸುತ್ತದೆ ಮೋದಿ ಸರ್ಕಾರ

ನವದೆಹಲಿ:  ಪ್ರಧಾನಮಂತ್ರಿ ನರೇಂದ್ರ ಮೋದಿಯವರ ನೇತೃತ್ವದಲ್ಲಿ ಕೇಂದ್ರ ಸರ್ಕಾರವು ವೈಜ್ಞಾನಿಕ ಕಾರ್ಯಕ್ರಮಗಳು ಮತ್ತು ಯೋಜನೆಗಳನ್ನು ಪ್ರೋತ್ಸಾಹಿಸುವುದಲ್ಲದೆ ಹೊಸ ಪ್ರಯೋಗಗಳನ್ನು ನಿರಂತರವಾಗಿ ಉತ್ತೇಜಿಸುತ್ತಿದೆ ಎಂದು ಕೇಂದ್ರ ವಿಜ್ಞಾನ ಮತ್ತು ತಂತ್ರಜ್ಞಾನ ಮತ್ತು ಭೂ ವಿಜ್ಞಾನಗಳ  ರಾಜ್ಯ ಸಚಿವ ಡಾ. ಡಾ.ಜಿತೇಂದ್ರ ಸಿಂಗ್ ಹೇಳಿದ್ದಾರೆ.

ಭೋಪಾಲ್‌ನಲ್ಲಿ ಇಂದು ನಡೆದ 8ನೇ ಭಾರತ ಅಂತಾರಾಷ್ಟ್ರೀಯ ವಿಜ್ಞಾನ ಉತ್ಸವದ ಉದ್ಘಾಟನಾ ಸಮಾರಂಭವನ್ನು ಉದ್ದೇಶಿಸಿ ಮಾತನಾಡಿದ ಅವರು, ನಮ್ಮ ದೇಶದಲ್ಲಿ ಯಾವತ್ತೂ ಪ್ರತಿಭೆಗಳಿಗೆ ಕೊರತೆ ಇರಲಿಲ್ಲ. ಜನರ ಸಾಮರ್ಥ್ಯ ಮತ್ತು ಉತ್ಸಾಹ ಕೂಡ ಕಡಿಮೆ ಇರಲಿಲ್ಲ, ಆದರೆ ಬಹುಶಃ ಆಗ ಹೆಚ್ಚು ಅನುಕೂಲಕರ ವಾತಾವರಣ ಇರಲಿಲ್ಲ ಆದರೆ ಈಗ ವಾತಾವರಣ ಬದಲಾಗಿದೆ ಎಂದರು.

8ನೇ ಭಾರತ ಅಂತಾರಾಷ್ಟ್ರೀಯ ವಿಜ್ಞಾನ ಉತ್ಸವವನ್ನು ಭೋಪಾಲ್‌ನ ಮೌಲಾನಾ ಆಜಾದ್ ನ್ಯಾಷನಲ್ ಇನ್‌ಸ್ಟಿಟ್ಯೂಟ್ ಆಫ್ ಟೆಕ್ನಾಲಜಿಯಲ್ಲಿ ಆಯೋಜಿಸಲಾಗಿದೆ. 8000 ಕ್ಕೂ ಹೆಚ್ಚು ವಿಜ್ಞಾನಿಗಳು, ಶಿಕ್ಷಕರು, ಸಂಶೋಧಕರು ಮತ್ತು ವಿದ್ಯಾರ್ಥಿಗಳು ಉತ್ಸವದಲ್ಲಿ ಭಾಗವಹಿಸುತ್ತಿದ್ದಾರೆ.

ವಿದ್ಯಾರ್ಥಿ ವಿಜ್ಞಾನ ಗ್ರಾಮ, ಯುವ ವಿಜ್ಞಾನಿ ಸಮ್ಮೇಳನ ಮತ್ತು ಮೆಗಾ ಸ್ಟಾರ್ಟ್‌ಅಪ್ ಎಕ್ಸ್‌ಪೋ ಮುಂತಾದವುಗಳು ಉತ್ಸವದಲ್ಲಿ ಜರುಗಲಿದೆ.

ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.

News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.

Recent News

Back To Top