ಲಕ್ನೋ: ಪ್ರಧಾನಿ ನರೇಂದ್ರ ಮೋದಿಯವರು ಶುಕ್ರವಾರ ತನ್ನ ಲೋಕಸಭಾ ಕ್ಷೇತ್ರ ವಾರಣಾಸಿಗೆ ತೆರಳಲಿದ್ದು, ಈ ವೇಳೆ ಅವರು ಅಪಾರ ಸಂಖ್ಯೆಯ ರಿಕ್ಷಾ ಚಾಲಕರು ಮತ್ತು ಬಂಡಿ ಎಳೆಯುವವರನ್ನು ಭೇಟಿಯಾಗಲಿದ್ದಾರೆ ಎಂದು ಮೂಲಗಳು ತಿಳಿಸಿವೆ.
ಈ ಸಂದರ್ಭ ಅವರು ಜನಧನ್ ಯೋಜನೆಯ ಅಡಿಯಲ್ಲಿ ಅವರು ಫಲಾನುಭವಿಗಳಿಗೆ 501 ಸೈಕಲ್ ರಿಕ್ಷಾ ಮತ್ತು 101 ಇ-ರಿಕ್ಷಾಗಳನ್ನು ಹಂಚಿಕೆ ಮಾಡಲಿದ್ದಾರೆ.
ಅಷ್ಟೇ ಅಲ್ಲದೇ 1 ಸಾವಿರ ಸೋಲಾರ್ ಲ್ಯಾಂಟರ್ನ್ಗಳನ್ನು ಬಡ ಮತ್ತು ಅಗತ್ಯವಿರುವವರಿಗೆ ನೀಡಲಿದ್ದಾರೆ.
ಜಿಲ್ಲಾಡಳಿತದ ಪ್ರಕಾರ, ಶುಕ್ರವಾರ ಬೆಳಿಗ್ಗೆ 10.50ರ ಸುಮಾರಿಗೆ ಮೋದಿ ವಾರಣಾಸಿ ವಿಮಾನನಿಲ್ದಾಣಕ್ಕೆ ಬಂದಿಳಿಯಲಿದ್ದಾರೆ. ಬಿಜೆಪಿ ನಾಯಕರನ್ನು, ಅಪಾರ ಕಾರ್ಯಕರ್ತರನ್ನು ಭೇಟಿಯಾಗಲಿದ್ದಾರೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.