News13 ವಾಟ್ಸ್ಯಾಪ್‌ ಗ್ರೂಪ್‌ಗೆ ಸೇರಿ


×
Home About Us Advertise With s Contact Us

ಭದ್ರತಾ ವಿಷಯವನ್ನು ರಾಜಕೀಯಗೊಳಿಸದಂತೆ ದಿಗ್ವಿಜಯ್‌ಗೆ ಕಿವಿಮಾತು

ನವದೆಹಲಿ: ಸಶಸ್ತ್ರ ಪಡೆಗಳ ಕುರಿತು ಕಾಂಗ್ರೆಸ್ ಸದಸ್ಯ ದಿಗ್ವಿಜಯ ಸಿಂಗ್ ಅವರ ವಿವಾದಾತ್ಮಕ ಹೇಳಿಕೆಗೆ ಭಾರೀ ಆಕ್ರೋಶಗಳು ವ್ಯಕ್ತವಾಗಿದೆ. ಪುಲ್ವಾಮಾ ಭಯೋತ್ಪಾದಕ ದಾಳಿಯ ಹುತಾತ್ಮ ಯೋಧನ ಪತ್ನಿ ಭದ್ರತಾ ಪಡೆಗಳಿಗೆ ಸಂಬಂಧಿಸಿದ ವಿಷಯಗಳನ್ನು ರಾಜಕೀಯಗೊಳಿಸಬಾರದು ಎಂದು ದಿಗ್ವಿಜಯ್ ಅವರಿಗೆ ಕಿವಿಮಾತು ಹೇಳಿದ್ದಾರೆ.

ಜಮ್ಮು ಮತ್ತು ಕಾಶ್ಮೀರದಲ್ಲಿ ಭಾರತ್ ಜೋಡೋ ಯಾತ್ರೆಯ ವೇಳೆ ಸಾರ್ವಜನಿಕ ಸಭೆಯನ್ನು ಉದ್ದೇಶಿಸಿ ಮಾತನಾಡಿದ ಸಿಂಗ್, ಶ್ರೀನಗರದಿಂದ ತನ್ನ ಸಿಬ್ಬಂದಿಯನ್ನು ಏರ್ ಲಿಫ್ಟ್ ಮಾಡುವ ಸಿಆರ್‌ಪಿಎಫ್ ಮನವಿಯನ್ನು ಕೇಂದ್ರ ಸರ್ಕಾರ ಒಪ್ಪಲಿಲ್ಲ, ಹೀಗಾಗಿ 40 ಸೈನಿಕರು ಪುಲ್ವಾಮ ದಾಳಿಯಲ್ಲಿ ಪ್ರಾಣ ತ್ಯಾಗ ಮಾಡಬೇಕಾಯಿತು ಎಂದು ಆರೋಪಿಸಿದ್ದರು.

ಅಲ್ಲದೇ ಸರ್ಜಿಕಲ್ ಸ್ಟ್ರೈಕ್‌ಗಳ ಬಗ್ಗೆ ಮಾತನಾಡಿ, ಕೇಂದ್ರದ ನಾಯಕರು ಹಲವಾರು ಜನರನ್ನು ಕೊಂದಿರುವುದಾಗಿ ಹೇಳಿಕೊಳ್ಳುತ್ತಾರೆ ಆದರೆ ಯಾವುದೇ ಪುರಾವೆಗಳನ್ನು ನೀಡಲಾಗಿಲ್ಲ. ಅವರು ಸುಳ್ಳಿನ ಕಂತೆ ಕಟ್ಟಿಕೊಂಡು ಆಡಳಿತ ನಡೆಸುತ್ತಿದ್ದಾರೆ ಎಂದಿದ್ದರು.

ಅವರ ಈ ಹೇಳಿಕೆಗೆ ಭಾರೀ ವಿರೋಧ ವ್ಯಕ್ತವಾಗಿದ್ದು, ರಾಜಕೀಯದಿಂದ ರಾಷ್ಟ್ರೀಯ ಭದ್ರತೆಯ ವಿಷಯವನ್ನು ಹೊರಗಿಡಿ ಎಂದಿ ಅವರಿಗೆ ಜನರು ಬುದ್ಧಿಮಾತು ಹೇಳುತ್ತಿದ್ದಾರೆ.

ಪುಲ್ವಾಮಾ ದಾಳಿಯಲ್ಲಿ ಹುತಾತ್ಮರಾದ ಸಿಆರ್‌ಪಿಎಫ್ ಹವಾಲ್ದಾರ್ ನಸೀರ್ ಅಹ್ಮದ್ ಅವರ ಪತ್ನಿ ಶಾಜಿಯಾ ಕೌಸರ್, “ಹಲವು ಸೈನಿಕರು ತಮ್ಮ ಪ್ರಾಣವನ್ನು ತ್ಯಾಗ ಮಾಡಿದ್ದಾರೆ, ಅವರ ಕುಟುಂಬಕ್ಕೆ ಮಾತ್ರ ಅವರು ಈಗ ಹೇಗೆ ಬದುಕುತ್ತಿದ್ದಾರೆಂದು ತಿಳಿದಿದೆ, ರಾಜಕಾರಣಿಗಳು ಇದನ್ನು ರಾಜಕೀಯಗೊಳಿಸಬಾರದು, ಇಂತಹ ಪ್ರಶ್ನೆಗಳು ಬೆಳೆಸಬಾರದು, ಆ ಸೈನಿಕರ ಬಗ್ಗೆ ನಮಗೆ ಹೆಮ್ಮೆ ಇದೆ” ಎಂದಿದ್ದಾರೆ.

ಮೇಜರ್ ಜನರಲ್ ಕೆಕೆ ಸಿನ್ಹಾ (ನಿವೃತ್ತ) ಅವರು ಪ್ರತಿಕ್ರಿಯಿಸಿ, “ನಮ್ಮ ಹಿರಿಯ ರಾಜಕಾರಣಿ ದಿಗ್ವಿಜಯ ಸಿಂಗ್ ಈಗ ಸಶಸ್ತ್ರ ಪಡೆಗಳನ್ನು ಪ್ರಶ್ನಿಸುತ್ತಿದ್ದಾರೆ. ಅವರು ರಾಜಕೀಯ ಕ್ಷೇತ್ರದಲ್ಲಿ ಏನು ಬೇಕಾದರೂ ಮಾಡಬಹುದು ಆದರೆ ಅವರು ಭದ್ರತಾ ಪಡೆಗಳನ್ನು ಗುರಿಯಾಗಿಸಿಕೊಂಡಿದ್ದಾರೆ, ಇದು ಕೆಟ್ಟ ಅಭ್ಯಾಸ. ಅವರು ಪಾಕಿಸ್ತಾನದ ಪರವಾಗಿ ನಿಂತಿದ್ದಾರೆ” ಎಂದಿದ್ದಾರೆ.

ನಿವೃತ್ತ ಮೇಜರ್ ಜನರಲ್ GD ಬಕ್ಷಿ ಅವರು ಸಿಂಗ್ ಅವರ ಟೀಕೆಗಳು ಸಶಸ್ತ್ರ ಪಡೆಗಳ ವಿಶ್ವಾಸಾರ್ಹತೆಯನ್ನು ನಾಶಮಾಡುವ ಅನಗತ್ಯ ಪ್ರಯತ್ನ ಎಂದಿದ್ದಾರೆ.

ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.

News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.

Recent News

Back To Top