News13 ವಾಟ್ಸ್ಯಾಪ್‌ ಗ್ರೂಪ್‌ಗೆ ಸೇರಿ


×
Home About Us Advertise With s Contact Us

ಜೋಶಿಮಠ ಹೊರತುಪಡಿಸಿ ಉತ್ತರಾಖಂಡದ ಎಲ್ಲಾ ಪ್ರವಾಸಿ ಸ್ಥಳಗಳು ಸುರಕ್ಷಿತ

ನವದೆಹಲಿ: ಜೋಶಿಮಠ ಹೊರತುಪಡಿಸಿ ರಾಜ್ಯದ ಎಲ್ಲಾ ಪ್ರವಾಸಿ ಸ್ಥಳಗಳು ಸುರಕ್ಷಿತವಾಗಿವೆ ಎಂದು ಉತ್ತರಾಖಂಡದ ಪ್ರವಾಸೋದ್ಯಮ ಮತ್ತು ಸಂಸ್ಕೃತಿ ಸಚಿವ ಸತ್ಪಾಲ್ ಮಹಾರಾಜ್ ಹೇಳಿದ್ದಾರೆ.

ಡೆಹ್ರಾಡೂನ್‌ನಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಜೋಶಿಮಠದ ಪರಿಸ್ಥಿತಿಯನ್ನು ನಿಭಾಯಿಸಲು ಸರ್ಕಾರ ಎಲ್ಲಾ ರೀತಿಯ ಪ್ರಯತ್ನಗಳನ್ನು ಮಾಡುತ್ತಿದೆ. ಮುಂಬರುವ ಚಾರ್ ಧಾಮ್ ಯಾತ್ರೆ ಸುಗಮವಾಗಿ ನಡೆಯಲಿದೆ ಎಂದರು.

ಇದೇ ವೇಳೆ ಮುಖ್ಯಮಂತ್ರಿಗಳ ವಿಶೇಷ ಪ್ರತಿನಿಧಿ ಅಜೇಂದ್ರ ಅಜಯ್ ಅವರು ಜೋಶಿಮಠದಲ್ಲಿ ಅಧಿಕಾರಿಗಳೊಂದಿಗೆ ಪರಿಹಾರ ಕಾಮಗಾರಿಗಳ ಪರಿಶೀಲನಾ ಸಭೆ ನಡೆಸಿದರು. ಶಿಬಿರದಲ್ಲಿರುವ ಸಂತ್ರಸ್ತರಿಗೆ ಸಾಧ್ಯವಿರುವ ಎಲ್ಲ ನೆರವು ನೀಡುವಂತೆ ಎಲ್ಲ ನೋಡಲ್ ಅಧಿಕಾರಿಗಳಿಗೆ ಸೂಚಿಸಿದರು.

ಚಾರ್ ಧಾಮ್ ಯಾತ್ರೆ ಮತ್ತು ಚಳಿಗಾಲದ ಪ್ರವಾಸೋದ್ಯಮ ರಾಜ್ಯದ ಬೆನ್ನೆಲುಬು ಎಂದ ಅಜಯ್, ಜೋಶಿಮಠದಲ್ಲಿ ವಿಪತ್ತು ಸಂತ್ರಸ್ತರಿಗೆ ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ಎಲ್ಲ ರೀತಿಯ ನೆರವು ನೀಡುತ್ತಿವೆ ಎಂದರು.

ರಾಜ್ಯ ವಿಪತ್ತು ನಿರ್ವಹಣಾ ಕಾರ್ಯದರ್ಶಿ ರಂಜಿತ್ ಕುಮಾರ್ ಸಿನ್ಹಾ ಮಾತನಾಡಿ, ಜೋಶಿಮಠದ ಢಾಕ್ ಗ್ರಾಮದಲ್ಲಿ ಪ್ರೀ ಫ್ಯಾಬ್ರಿಕೇಟೆಡ್ ಕಟ್ಟಡಗಳ ನಿರ್ಮಾಣಕ್ಕಾಗಿ ಭೂಮಿ ಸಮತಟ್ಟು ಮತ್ತು ಲೇಔಟ್ ಯೋಜನೆಗೆ ಚಾಲನೆ ನೀಡಲಾಗಿದೆ. ಮುಖ್ಯಮಂತ್ರಿ ಪುಷ್ಕರ್ ಸಿಂಗ್ ಧಾಮಿ ಅವರ ಸೂಚನೆಯಂತೆ ಸಂಪೂರ್ಣ ಪ್ರಕ್ರಿಯೆಯನ್ನು ನಡೆಸಲಾಗುತ್ತಿದೆ ಎಂದು ಹೇಳಿದರು.

ಜೋಶಿಮಠದಲ್ಲಿ ಬಿರುಕು ಬಿಟ್ಟಿರುವ ಕಟ್ಟಡಗಳ ಸಂಖ್ಯೆಯಲ್ಲಿ ಯಾವುದೇ ಹೆಚ್ಚಳವಾಗಿಲ್ಲ. ಇಲ್ಲಿಯವರೆಗೆ 863 ಕಟ್ಟಡಗಳಲ್ಲಿ ಬಿರುಕು ಕಂಡುಬಂದಿದೆ. 218 ಕುಟುಂಬಗಳ 933 ಸದಸ್ಯರು ಸ್ಥಳಾಂತರಗೊಂಡಿದ್ದಾರೆ ಎಂದರು.

ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.

News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.

Recent News

Back To Top