News13 ವಾಟ್ಸ್ಯಾಪ್‌ ಗ್ರೂಪ್‌ಗೆ ಸೇರಿ


×
Home About Us Advertise With s Contact Us

ವಾಜಪೇಯಿ ರಾಜತಾಂತ್ರಿಕ ಪರಿಸ್ಥಿತಿಗಳನ್ನು ಸಮರ್ಥವಾಗಿ ನಿಭಾಯಿಸಿದ್ದರು: ಜೈಶಂಕರ್

ನವದೆಹಲಿ: ಮಾಜಿ ಪ್ರಧಾನಿ ಅಟಲ್ ಬಿಹಾರಿ ವಾಜಪೇಯಿ ಅವರು ಸಮಕಾಲೀನ ಪ್ರಪಂಚದ ಬಗ್ಗೆ ಬಹಳ ಸೂಕ್ಷ್ಮ ಮತ್ತು ವಿಕಸಿತ ತಿಳುವಳಿಕೆಯನ್ನು ಹೊಂದಿದ್ದರು ಮತ್ತು ಭಾರತವು ಅಮೆರಿಕಾದೊಂದಿಗಿನ ಸಂಬಂಧವನ್ನು ಬದಲಾಯಿಸಲು ಸಹಾಯ ಮಾಡಿದರು ಎಂದು ವಿದೇಶಾಂಗ ವ್ಯವಹಾರಗಳ ಸಚಿವ ಡಾ. ಎಸ್ ಜೈಶಂಕರ್ ಹೇಳಿದ್ದಾರೆ.

ನಿನ್ನೆ, ಜನವರಿ 23 ರಂದು ನವದೆಹಲಿಯಲ್ಲಿ ನಡೆದ 3ನೇ ಅಟಲ್ ಬಿಹಾರಿ ವಾಜಪೇಯಿ ಸ್ಮಾರಕ ಉಪನ್ಯಾಸದಲ್ಲಿ ಡಾ. ಜೈಶಂಕರ್ ಅವರು ಈ ಮಾತುಗಳನ್ನಾಡಿದ್ದಾರೆ.

“ವಾಜಪೇಯಿ ಅವರು ದೇಶದ ಮಹಾನ್ ಪ್ರಧಾನಿಗಳಲ್ಲಿ ಒಬ್ಬರು ಎಂದು ಎಲ್ಲರಿಗೂ ತಿಳಿದಿದೆ.  ವಾಜಪೇಯಿ ಅವರು ರಷ್ಯಾದೊಂದಿಗೆ ಭಾರತದ ಬಾಂಧವ್ಯಕ್ಕೆ ನಿರಂತರತೆ ಮತ್ತು ಸ್ಥಿರತೆಯನ್ನು ನೀಡಿದರು” ಎಂದಿದ್ದಾರೆ.

1998ರ ಪೋಖ್ರಾನ್ ಪರಮಾಣು ಪರೀಕ್ಷೆಯ ನಂತರದ ರಾಜತಾಂತ್ರಿಕ ಪರಿಸ್ಥಿತಿಯನ್ನು ಅಂದಿನ ಪ್ರಧಾನಿ ಅಟಲ್ ಬಿಹಾರಿ ವಾಜಪೇಯಿ ಅವರು ನಿಭಾಯಿಸಿದ್ದನ್ನು ಸೋಮವಾರ ಶ್ಲಾಘಿಸಿದ ಜೈಶಂಕರ್, ಎರಡು ವರ್ಷಗಳ ಅಂತರದಲ್ಲಿ ಭಾರತವು ವಿಶ್ವದ ಎಲ್ಲಾ ಪ್ರಮುಖ ದೇಶಗಳೊಂದೊಗೆ ತೊಡಗಿಸಿಕೊಂಡಿತು. ಇದಕ್ಕೆ ವಾಜಪೇಯಿ ಅವರ ರಾಜತಾಂತ್ರಿಕತೆ ಕಾರಣ ಎಂದು ಹೇಳಿದ್ದಾರೆ.

ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.

News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.

Recent News

Back To Top