ನವದೆಹಲಿ: ಪುಲ್ವಾಮಾ ದಾಳಿ ಮತ್ತು ಸರ್ಜಿಕಲ್ ಸ್ಟ್ರೈಕ್ ಕುರಿತು ಹಿರಿಯ ಕಾಂಗ್ರೆಸ್ ನಾಯಕ ದಿಗ್ವಿಜಯ ಸಿಂಗ್ ಹೇಳಿಕೆ ರಾಜಕೀಯ ವಲಯದಲ್ಲಿ ಕೋಲಾಹಲ ಉಂಟಾಗಿದೆ. ಈ ಬಗ್ಗೆ ರಾಜಕೀಯ ವಾಗ್ದಾಳಿಗಳು ನಡೆಯುತ್ತಿದೆ.
ಮಧ್ಯಪ್ರದೇಶ ಮುಖ್ಯಮಂತ್ರಿ ಶಿವರಾಜ್ ಸಿಂಗ್ ಚೌಹಾಣ್ ಕಾಂಗ್ರೆಸ್, ರಾಹುಲ್ ಗಾಂಧಿ ಮತ್ತು ದಿಗ್ವಿಜಯ ಸಿಂಗ್ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಸೇನೆಯ ನೈತಿಕ ಸ್ಥೈರ್ಯ ಕುಗ್ಗಿಸುವ ಪ್ರಯತ್ನ ಇದಾಗಿದೆ ಎಂದಿದ್ದಾರೆ.
“ಕಾಂಗ್ರೆಸ್ನ ಡಿಎನ್ಎ ಪಾಕಿಸ್ತಾನದ ಪರವಾಗಿದೆ. ಅವರು ಸರ್ಜಿಕಲ್ ಸ್ಟ್ರೈಕ್ಗೆ ಪುರಾವೆ ಕೇಳುತ್ತಿದ್ದಾರೆ. ಇದು ಸೇನೆಯ ಧೈರ್ಯವನ್ನು ಕುಗ್ಗಿಸುವ ಪ್ರಯತ್ನವಾಗಿದೆ. ರಾಹುಲ್ ಗಾಂಧಿ ಅವರೇ ಇದು ಯಾವ ರೀತಿಯ ಭಾರತ್ ಜೋಡೋ ಯಾತ್ರೆ? ತುಕ್ಡೆ-ತುಕ್ಡೆ ಗ್ಯಾಂಗ್ ನಿಮ್ಮೊಂದಿಗೆ ನಡೆಯುತ್ತಿದೆ” ಎಂದಿದ್ದಾರೆ.
ಕಾಂಗ್ರೆಸ್ ನಾಯಕ ದಿಗ್ವಿಜಯ ಸಿಂಗ್ ವಿರುದ್ಧ ವಾಗ್ದಾಳಿ ನಡೆಸಿದ ಚೌಹಾಣ್, “ಒಂದು ಕಾಲದಲ್ಲಿ ದಿಗ್ವಿಜಯ ಸಿಂಗ್ ಆಳ್ವಿಕೆಯಲ್ಲಿ ಮಧ್ಯಪ್ರದೇಶ ಸಿಮಿ ಸಂಘಟನೆಯ ಭದ್ರಕೋಟೆಯಾಗಿತ್ತು. ಕನಿಷ್ಠ ಪಕ್ಷ ಸೇನೆಯ ನೈತಿಕ ಸ್ಥೈರ್ಯ ಕುಗ್ಗಿಸುವ ಪಾಪಕ್ಕೆ ಕಾಂಗ್ರೆಸ್ ಮುಂದಾಗಬಾರದು” ಎಂದಿದ್ದಾರೆ.
#WATCH | Congress's DNA is in favour of Pakistan. They are asking for proof of surgical strike. It's an attempt to demoralize Army. Rahul Gandhi ji what kind of Bharat Jodo yatra is this? Tukde-tukde gang is walking with you: Madhya Pradesh CM Shivraj Singh Chouhan pic.twitter.com/m5QByTHwbW
— ANI (@ANI) January 24, 2023
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.