News13 ವಾಟ್ಸ್ಯಾಪ್‌ ಗ್ರೂಪ್‌ಗೆ ಸೇರಿ


×
Home About Us Advertise With s Contact Us

ನಿಮ್ಮ ನಾಯಕನನ್ನು ತಿಳಿಯಿರಿ ಕಾರ್ಯಕ್ರಮದಡಿ ಯುವಕರೊಂದಿಗೆ ಮೋದಿ ಸಂವಾದ

ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಅವರು ಸಂಸತ್ತಿನ ಸೆಂಟ್ರಲ್ ಹಾಲ್‌ನಲ್ಲಿ ನೇತಾಜಿ ಸುಭಾಷ್ ಚಂದ್ರ ಬೋಸ್ ಅವರ ಗೌರವಾರ್ಥ ನಡೆಸಲಾದ ‘ನಿಮ್ಮ ನಾಯಕನನ್ನು ತಿಳಿಯಿರಿ’ ಕಾರ್ಯಕ್ರಮದಡಿ ಆಯ್ಕೆಯಾದ ಯುವಕರೊಂದಿಗೆ ಇಂದು ಸಂವಾದ ನಡೆಸಿದರು. ನವದೆಹಲಿಯ ಮೋದಿಯವರ ಅಧಿಕೃತ ನಿವಾಸದಲ್ಲಿ ಈ ಸಂವಾದ ನಡೆದಿದೆ.

ಮೋದಿಯವರು ಯುವಕರೊಂದಿಗೆ ಮುಕ್ತ ಸಂವಾದದಲ್ಲಿ ತೊಡಗಿದ್ದು, ನೇತಾಜಿ ಸುಭಾಷ್ ಚಂದ್ರ ಬೋಸ್ ಅವರ ಜೀವನದ ವಿವಿಧ ಅಂಶಗಳನ್ನು ಚರ್ಚಿಸಿದರು. ಯುವಕರು ತಮ್ಮ ಜೀವನದಲ್ಲಿ ಯಾವ ರೀತಿಯ ಸವಾಲುಗಳನ್ನು ಎದುರಿಸಿದರು ಮತ್ತು ಅವರು ಈ ಸವಾಲುಗಳನ್ನು ಹೇಗೆ ಎದುರಿಸಿದರು ಎಂಬುದನ್ನು ತಿಳಿದುಕೊಳ್ಳಲು ಐತಿಹಾಸಿಕ ವ್ಯಕ್ತಿಗಳ ಜೀವನಚರಿತ್ರೆಗಳನ್ನು ಓದಲು ಪ್ರಧಾನಿ ಸಲಹೆ ನೀಡಿದರು.

ಸಂವಾದದ ಸಮಯದಲ್ಲಿ, ಯುವಕರು ಪ್ರಧಾನ ಮಂತ್ರಿಯನ್ನು ಭೇಟಿಯಾದ ಮತ್ತು ಸಂಸತ್ತಿನ ಸೆಂಟ್ರಲ್ ಹಾಲ್‌ನಲ್ಲಿ ಕುಳಿತುಕೊಳ್ಳಲು ಅನನ್ಯ ಅವಕಾಶವನ್ನು ಪಡೆದ ಬಗ್ಗೆ ತಮ್ಮ ಉತ್ಸಾಹವನ್ನು ಹಂಚಿಕೊಂಡರು. ಈ ಕಾರ್ಯಕ್ರಮವು ದೇಶದ ಮೂಲೆ ಮೂಲೆಗಳಿಂದ ಬಂದ ಹಲವಾರು ವ್ಯಕ್ತಿಗಳನ್ನು ಭೇಟಿ ಮಾಡುವ ಮೂಲಕ ವಿವಿಧತೆಯಲ್ಲಿ ಏಕತೆ ಎಂದರೇನು ಎಂಬುದರ ಬಗ್ಗೆ ತಿಳುವಳಿಕೆಯನ್ನು ಪಡೆದಿರುವುದಾಗಿ ಹೇಳಿದ್ದಾರೆ.

ಈ ಹಿಂದೆ, ಸಂಸತ್ತಿನಲ್ಲಿ ರಾಷ್ಟ್ರೀಯ ನಅಯಕರಿಗೆ ಪುಷ್ಪ ನಮನ ಸಲ್ಲಿಸಲು ಗಣ್ಯರನ್ನು ಮಾತ್ರ ಆಹ್ವಾನಿಸಲಾಗುತ್ತಿತ್ತು. ಆದರೆ ಈ ಪದ್ಧತಿಯನ್ನು ಬದಲಾಯಿಸಲಾಗಿದೆ. ಸಂಸತ್ತಿನಲ್ಲಿ ನಡೆದ ಪುಷ್ಪ ನಮನ ಕಾರ್ಯಕ್ರಮದಲ್ಲಿ ಭಾಗವಹಿಸಲು ಈ 80 ಯುವಕರನ್ನು ದೇಶಾದ್ಯಂತ ಆಯ್ಕೆ ಮಾಡಲಾಗಿದೆ. ಅವರಲ್ಲಿ ಮೂವತ್ತೊಂದು ಮಂದಿಗೆ ಪುಷ್ಪ ನಮನ ಕಾರ್ಯಕ್ರಮದಲ್ಲಿ ನೇತಾಜಿಯವರ ಕೊಡುಗೆಗಳ ಕುರಿತು ಮಾತನಾಡಲು ಅವಕಾಶ ಸಿಕ್ಕಿದೆ.

ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.

News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.

Recent News

Back To Top