ನವದೆಹಲಿ: ಇಂದು ಮಧ್ಯಾಹ್ನ ದೆಹಲಿ ಮತ್ತು ಎನ್ಸಿಆರ್ ಪ್ರದೇಶದಾದ್ಯಂತ ಪ್ರಬಲ ಭೂಕಂಪನದ ಅನುಭವವಾಗಿದ್ದು, ಸ್ಥಳೀಯ ನಿವಾಸಿಗಳಲ್ಲಿ ಭೀತಿಯನ್ನು ಉಂಟುಮಾಡಿದೆ. ಪ್ರಾಥಮಿಕ ವರದಿಗಳ ಪ್ರಕಾರ, ಮಧ್ಯಾಹ್ನ 2:30 ರ ಸುಮಾರಿಗೆ ಕಂಪನದನ ಅನುಭವವಾಗಿದೆ. ನೇಪಾಳದಲ್ಲಿ ಮಧ್ಯಾಹ್ನ 2.28ರ ಸುಮಾರಿಗೆ ಭೂಕಂಪ ಸಂಭವಿಸಿದ್ದು, ರಿಕ್ಟರ್ ಮಾಪಕದಲ್ಲಿ 5.8 ತೀವ್ರತೆ ದಾಖಲಾಗಿದೆ.
ಕಂಪನವು ಸುಮಾರು 10-15 ಸೆಕೆಂಡುಗಳ ಕಾಲ ನಡೆಯಿತು, ಅನೇಕ ಜನರು ಭಯಭೀತರಾಗಿ ತಮ್ಮ ಮನೆ ಮತ್ತು ಕಚೇರಿಗಳಿಂದ ಹೊರಕ್ಕೆ ಓಡಿ ಬಂದಿದ್ದಾರೆ. ರಾಷ್ಟ್ರ ರಾಜಧಾನಿ ಪ್ರದೇಶದಲ್ಲಿ ಕಂಪನದ ಅನುಭವವಾದ ನಂತರ ಹಲವಾರು ಮಂದಿ ಸೀಲಿಂಗ್ ಫ್ಯಾನ್ಗಳು ಮತ್ತು ಮನೆಯ ವಸ್ತುಗಳು ಅಲುಗಾಡುವ ವೀಡಿಯೊಗಳನ್ನು ಸಾಮಾಜಿಕ ಜಾಲತಾಣಗಳಲ್ಲಿ ಪೋಸ್ಟ್ ಮಾಡಿದ್ದಾರೆ.
ಉತ್ತರಾಖಂಡ್ನ ರಾಜಧಾನಿ ಡೆಹರಾಡೂನ್ ಮತ್ತು ಪಿಥೋರ್ಗಢ್ ಮತ್ತು ಅಲ್ಮೋರಾ ಸೇರಿದಂತೆ ಇತರ ಜಿಲ್ಲೆಗಳಲ್ಲೂ ಕಂಪನದ ಅನುಭವವಾಗಿದೆ. ಆದರೆ, ಇದುವರೆಗೆ ಯಾವುದೇ ಜೀವ ಮತ್ತು ಆಸ್ತಿಪಾಸ್ತಿ ಹಾನಿಯಾದ ಬಗ್ಗೆ ವರದಿಯಾಗಿಲ್ಲ.
ಭೂಕಂಪದ ಕೇಂದ್ರಬಿಂದುವು ನೇಪಾಳದಲ್ಲಿ ಕೇಂದ್ರೀಕೃತವಾಗಿದೆ ಎಂದು ರಾಷ್ಟ್ರೀಯ ಭೂಕಂಪಶಾಸ್ತ್ರ ಕೇಂದ್ರ ಹೇಳಿದೆ.
Earthquake of Magnitude:5.8, Occurred on 24-01-2023, 14:28:31 IST, Lat: 29.41 & Long: 81.68, Depth: 10 Km ,Location: Nepal for more information Download the BhooKamp App https://t.co/gSZOFnURgY@ndmaindia @Indiametdept @Dr_Mishra1966 @Ravi_MoES @OfficeOfDrJS @PMOIndia pic.twitter.com/y1Ak7VbvFB
— National Center for Seismology (@NCS_Earthquake) January 24, 2023
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.