ನವದೆಹಲಿ: ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಇಂದು 74 ನೇ ಗಣರಾಜ್ಯೋತ್ಸವದ ಮುನ್ನಾದಿನದಂದು ರಾಷ್ಟ್ರವನ್ನು ಉದ್ದೇಶಿಸಿ ಮಾತನಾಡಲಿದ್ದಾರೆ. ಇದು ಮುರ್ಮು ಅವರ ಮೊದಲ ಗಣರಾಜ್ಯೋತ್ಸವ ಭಾಷಣವಾಗಿದೆ.
ಇಂದು ಸಂಜೆ 7ಕ್ಕೆ ಅವರ ಭಾಷಣ ಎಲ್ಲಾ ಮಧ್ಯಮಗಳಲ್ಲಿ ನೇರ ಪ್ರಸಾರವಾಗಲಿದೆ.
ಮೊದಲು ಭಾಷಣ ದೂರದರ್ಶನದ ಎಲ್ಲಾ ಚಾನೆಲ್ಗಳಲ್ಲಿ ಹಿಂದಿಯಲ್ಲಿ ಪ್ರಸಾರವಾಗುತ್ತದೆ ಮತ್ತು ನಂತರ ಇಂಗ್ಲಿಷ್ ಆವೃತ್ತಿಯಲ್ಲಿ ಪ್ರಸಾರವಾಗುತ್ತದೆ. ಬಳಿಕ ದೂರದರ್ಶನದ ಪ್ರಾದೇಶಿಕ ಚಾನೆಲ್ಗಳು ಪ್ರಾದೇಶಿಕ ಭಾಷೆಗಳಲ್ಲಿ ಪ್ರಸಾರ ಮಾಡುತ್ತವೆ.
ಗಣರಾಜ್ಯೋತ್ಸವದ ಮುನ್ನಾ ದಿನದಂದು ರಾಷ್ಟ್ರಪತಿಗಳು ದೇಶವನ್ನು ಉದ್ದೇಶಿಸಿ ಮಾತನಾಡುವುದು ಪ್ರತಿವರ್ಷದ ವಾಡಿಕೆಯಾಗಿದೆ.
ನಾಳೆ ಗಣರಾಜ್ಯೋತ್ಸವ ನಡೆಯಲಿದ್ದು, ಕರ್ತವ್ಯಪಥದಲ್ಲಿ ಆಕರ್ಷಕ ಪರೇಡ್ ನಡೆಯಲಿದೆ. ಈಜಿಪ್ಟ್ ಅಧ್ಯಕ್ಷರು ಮುಖ್ಯ ಅತಿಥಿಯಾಗಿ ಇದರಲ್ಲಿ ಭಾಗಿಯಾಗಲಿದ್ದಾರೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.