News13 ವಾಟ್ಸ್ಯಾಪ್‌ ಗ್ರೂಪ್‌ಗೆ ಸೇರಿ


×
Home About Us Advertise With s Contact Us

ವೀರ್ ಗಾಥಾ 2.0 ನ 25 ವಿಜೇತರನ್ನು ಅಭಿನಂದಿಸಿದ ರಾಜನಾಥ್‌ ಸಿಂಗ್

ನವದೆಹಲಿ: ರಕ್ಷಣಾ ಸಚಿವ ರಾಜನಾಥ್ ಸಿಂಗ್ ಅವರು ಗಣರಾಜ್ಯೋತ್ಸವದ ಮುನ್ನಾದಿನವಾದ ಇಂದು ನವದೆಹಲಿಯಲ್ಲಿ ನಡೆದ ಕಾರ್ಯಕ್ರಮದಲ್ಲಿ ವೀರ್ ಗಾಥಾ 2.0 ನ 25 ವಿಜೇತರನ್ನು ಅಭಿನಂದಿಸಿದ್ದಾರೆ. ವಿಜೇತರಿಗೆ ಹತ್ತು ಸಾವಿರ ರೂಪಾಯಿ ನಗದು, ಪದಕ, ಪ್ರಮಾಣಪತ್ರವನ್ನು ಪ್ರದಾನಿಸಿದ್ದಾರೆ.

ವಿಜೇತರನ್ನು ಅಭಿನಂದಿಸಿದ  ಸಿಂಗ್ ಅವರ  ಉತ್ಸಾಹ ಮತ್ತು ಸೃಜನಶೀಲತೆಯನ್ನು ಶ್ಲಾಘಿಸಿದರು. ಯುವ ಪೀಳಿಗೆ ತಮಗೆ ಮಾತ್ರವಲ್ಲದೆ ಸಮಾಜ ಮತ್ತು ರಾಷ್ಟ್ರಕ್ಕೂ ಹೊಸ ಮತ್ತು ಉತ್ತಮ ನಿರ್ದೇಶನವನ್ನು ನೀಡುತ್ತದೆ ಎಂದು ಅವರು ವಿಶ್ವಾಸ ವ್ಯಕ್ತಪಡಿಸಿದರು.

ವಿದ್ಯಾರ್ಥಿಗಳಲ್ಲಿ ಶಿಕ್ಷಣದ ಜೊತೆಗೆ ನೈತಿಕತೆ ಮತ್ತು ಶೌರ್ಯದ ಮೌಲ್ಯಗಳನ್ನು ತುಂಬುವಲ್ಲಿ ಈ ರೀತಿಯ ಯೋಜನೆ ನಿರ್ಣಾಯಕ ಪಾತ್ರ ವಹಿಸುತ್ತದೆ ಎಂದಿದ್ದಾರೆ.

ಕಾರ್ಯಕ್ರಮದ ಜನಪ್ರಿಯತೆಯನ್ನು ಉಲ್ಲೇಖಿಸಿದ ಅವರು, ಭಾಗಿದಾರರ ಸಂಖ್ಯೆ ಕಳೆದ ವರ್ಷ ಎಂಟು ಲಕ್ಷಕ್ಕೆ ಹೋಲಿಸಿದರೆ ಈ ವರ್ಷ 19 ಲಕ್ಷವನ್ನು ದಾಟಿದೆ ಎಂದು ತಿಳಿಸಿದರು.

ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಮತ್ತು ರಕ್ಷಣಾ ಖಾತೆ ರಾಜ್ಯ ಸಚಿವ ಅಜಯ್ ಭಟ್ ಅವರು ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು.

ಭಾರತ ಸರ್ಕಾರವು ಆಜಾದಿ ಕಾ ಅಮೃತ್ ಮಹೋತ್ಸವದ ಭಾಗವಾಗಿ “ವೀರ್ ಗಾಥಾ ಪ್ರಾಜೆಕ್ಟ್” ಅನ್ನು ಪ್ರಾರಂಭಿಸಿತು, ಇದರ ಅಡಿಯಲ್ಲಿ ಸರ್ಕಾರವು ಭಾರತದ ಸ್ವಾತಂತ್ರ್ಯದ 75 ನೇ ವರ್ಷವನ್ನು ಗುರುತಿಸಲು ಹಲವಾರು ಕಾರ್ಯಕ್ರಮಗಳನ್ನು ಪರಿಚಯಿಸುತ್ತಿದೆ. ವೀರ ಗಾಥಾ ಯೋಜನೆಯು ಶಾಲಾ ಮಕ್ಕಳನ್ನು  ಯುದ್ಧ ವೀರರು ಮತ್ತು ನಾಯಕರ ಕಥೆಗಳನ್ನು ಬರೆಯಲು ಪ್ರೇರೇಪಿಸುತ್ತದೆ.

ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.

News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.

Recent News

Back To Top