ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಅವರು ಇಂದು 74ನೇ ಗಣರಾಜ್ಯೋತ್ಸವದ ಸಂದರ್ಭದಲ್ಲಿ ರಾಷ್ಟ್ರೀಯ ಯುದ್ಧ ಸ್ಮಾರಕದಲ್ಲಿ ಹುತಾತ್ಮರಾದ ವೀರಯೋಧರಿಗೆ ಪುಷ್ಪ ನಮನ ಸಲ್ಲಿಸಿದರು. ಮಾಲಾರ್ಪಣೆ ಮಾಡುವ ಮೂಲಕ ಶ್ರದ್ಧಾಂಜಲಿ ಸಲ್ಲಿಸುವ ಕಾರ್ಯದಲ್ಲಿ ರಾಷ್ಟ್ರವನ್ನು ಮುನ್ನಡೆಸಿದರು.
ರಾಷ್ಟ್ರೀಯ ಯುದ್ಧ ಸ್ಮಾರಕದಲ್ಲಿ ಗೌರವಾರ್ಪಣೆ ಸಮಾರಂಭದೊಂದಿಗೆ ಗಣರಾಜ್ಯೋತ್ಸವ ಆಚರಣೆಗಳು ಆರಂಭಗೊಂಡವು. ರಾಷ್ಟ್ರೀಯ ಯುದ್ಧ ಸ್ಮಾರಕಕ್ಕೆ ಆಗಮಿಸಿದ ಪ್ರಧಾನಿ ಮೋದಿ ಅವರನ್ನು ರಕ್ಷಣಾ ಸಚಿವ ರಾಜನಾಥ್ ಸಿಂಗ್ ಅವರು ಬರಮಾಡಿಕೊಂಡರು.
ಪ್ರಧಾನಮಂತ್ರಿಯವರು ಪುಷ್ಪಾರ್ಚನೆ ಮಾಡಿದಾಗ, ಸಲಾಮಿ ಶಾಸ್ತ್ರ ಮತ್ತು ಶೋಕ್ ಶಾಸ್ತ್ರವನ್ನು ಪ್ರಸ್ತುತಪಡಿಸಿದರು. ನಂತರ ಎರಡು ನಿಮಿಷಗಳ ಮೌನ ಆಚರಿಸಲಾಯಿತು.
ನಂತರ ಪ್ರಧಾನಮಂತ್ರಿಯವರು ಡಿಜಿಟಲ್ ವಿಸಿಟರ್ಸ್ ಬುಕ್ ಆಫ್ ದಿ ನ್ಯಾಷನಲ್ ವಾರ್ ಮೆಮೋರಿಯಲ್ ನಲ್ಲಿ ತಮ್ಮ ಅನಿಸಿಕೆಗಳನ್ನು ಬರೆದರು. ನಂತರ, ಪ್ರಧಾನಿ ಮೋದಿ ಮತ್ತು ಇತರ ಗಣ್ಯರು ಗಣರಾಜ್ಯೋತ್ಸವ ಪರೇಡ್ ಅನ್ನು ವೀಕ್ಷಿಸಲು ಕರ್ತವ್ಯ ಪಥದ ವಂದನಾ ವೇದಿಕೆಗೆ ತೆರಳಿದರು.
#RepublicDay | PM Modi leads the nation in paying homage to the fallen soldiers at the National War Memorial in Delhi pic.twitter.com/CE9B2CPZmB
— ANI (@ANI) January 26, 2023
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.