ನವದೆಹಲಿ: ಗಣರಾಜ್ಯೋತ್ಸದ ಅಂಗವಾಗಿ ದೆಹಲಿಯ ಕರ್ತವ್ಯ ಪಥದಲ್ಲಿ ನಡೆದ ಪರೇಡ್ನಲ್ಲಿ ದೇಶದ ವಿವಿಧ ರಾಜ್ಯಗಳ ಸ್ತಬ್ಧಚಿತ್ರಗಳು ಗಮನಸೆಳೆದವು. ನಾರಿಶಕ್ತಿ ವಿಷಯಾಧಾರಿತ ಟ್ಯಾಬ್ಲೋಗಳು ಈ ಬಾರಿಯ ವಿಶೇಷತೆಯಾಗಿತ್ತು.
ಕರ್ನಾಟಕದ ನಾರಿಶಕ್ತಿಯನ್ನು ಬಿಂಬಿಸುವ ವಿಶೇಷ ಸ್ತಬ್ಧಚಿತ್ರದ ಪ್ರದರ್ಶನ ಎಲ್ಲರ ಗಮನ ಸೆಳೆದಿದ್ದು, ರಾಜ್ಯದ ಹೆಮ್ಮೆಯ ಸ್ತ್ರೀಯರಾದ ಸೂಲಗಿತ್ತಿ ನರಸಮ್ಮ, ತುಳಸಿ ಗೌಡ ಹಾಗೂ ಸಾಲು ಮರದ ತಿಮ್ಮಕ್ಕ ಅವರ ಕಲಾಕೃತಿಗಳನ್ನು ಇದರಲ್ಲಿ ಅಳವಡಿಸಲಾಗಿತ್ತು
8,000 ಗಿಡಗಳನ್ನು ನೆಟ್ಟಿರುವ ತುಮಕೂರಿನ ಗುಬ್ಬಿಯ ಹಸಿರು ಯೋಧೆ ಸಾಲುಮರದ ತಿಮ್ಮಕ್ಕ, 30,000ಕ್ಕೂ ಹೆಚ್ಚು ಸಸಿಗಳನ್ನು ನೆಟ್ಟ ಉತ್ತರ ಕನ್ನಡದ ಅಂಕೋಲಾದ ತುಳಸಿಗೌಡ ಹಾಗೂ 70 ವರ್ಷದಿಂದ 2,000ಕ್ಕೂ ಹೆಚ್ಚು ಸಾಂಪ್ರದಾಯಿಕ ಹೆರಿಗೆ ಮಾಡಿಸಿರುವ ಸೂಲಗಿತ್ತಿ ಪಾವಗಡದ ನರಸಮ್ಮ ಅವರ ಸಾಧನೆಯನ್ನು ಈ ಟ್ಯಾಬ್ಲೋ ಪ್ರದರ್ಶಿಸಿದೆ.
ಇಷ್ಟೇ ಅಲ್ಲದೇ ಸೇನೆಯ ಟ್ಯಾಂಕುಗಳು, ಕ್ಷಿಪಣಿಗಳು ಭಾರತದ ಮಿಲಿಟರಿ ಶಕ್ತಿ ಮತ್ತು ವೈವಿಧ್ಯತೆಯನ್ನು ಸಾರಿವೆ.
#RepublicDay | Karnataka's tableau symbolically unveils exceptional achievements of state's 3 women achievers.
Sulagitti Narasamma – a midwife, Tulsi Gowda Halakki – known as 'Vruksha Maate' & Saalumarada Thimmakka are noted names due to their selfless contribution to society. pic.twitter.com/AYHBdwj48k
— ANI (@ANI) January 26, 2023
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.