News13 ವಾಟ್ಸ್ಯಾಪ್‌ ಗ್ರೂಪ್‌ಗೆ ಸೇರಿ


×
Home About Us Advertise With s Contact Us

ಪದ್ಮವಿಭೂಷಣ ಗೌರವ: ಎಸ್‌.ಎಂ ಕೃಷ್ಣ ನಿವಾಸಕ್ಕೆ ತೆರಳಿ ಅಭಿನಂದಿಸಿದ ಸಿಎಂ

ಬೆಂಗಳೂರು: ಪದ್ಮವಿಭೂಷಣ ಪ್ರಶಸ್ತಿಗೆ ಪಾತ್ರರಾಗಿರುವ ಮಾಜಿ ಮುಖ್ಯಮಂತ್ರಿ ಎಸ್.ಎಂ ಕೃಷ್ಣ ಅವರಿಗೆ ಅವರ ನಿವಾಸದಲ್ಲಿ ಸಿಎಂ ಬಸವರಾಜ ಬೊಮ್ಮಾಯಿ ಹೂಗುಚ್ಛ ನೀಡಿ ಅಭಿನಂದನೆ ತಿಳಿಸಿದರು. ಈ ಸಂದರ್ಭದಲ್ಲಿ ಸಚಿವರಾದ ಆರ್‌. ಅಶೋಕ್‌, ಡಾ.ಕೆ.ಸುಧಾಕರ್‌ ಉಪಸ್ಥಿತರಿದ್ದರು.

“ಪದ್ಮವಿಭೂಷಣ ಪ್ರಶಸ್ತಿ ಪುರಸ್ಕೃತರಾದ ನಾಡಿನ ಹಿರಿಯ ರಾಜಕೀಯ ಮುತ್ಸದ್ದಿ ಶ್ರೀ ಎಸ್.ಎಂ.ಕೃಷ್ಣರವರ ನಿವಾಸಕ್ಕೆ ಭೇಟಿ ನೀಡಿ, ರಾಜ್ಯದ ಸಮಸ್ತ ಜನತೆಯ ಪರವಾಗಿ ಅವರನ್ನು ಅಭಿನಂದಿಸಿದೆ. ಶ್ರೀಯುತರಿಗೆ ಪದ್ಮವಿಭೂಷಣ ಪ್ರಶಸ್ತಿ ಲಭಿಸಿರುವುದು ನಾಡಿಗೆ ಹೆಮ್ಮೆಯ ವಿಚಾರವಾಗಿದೆ” ಎಂದು ಸಿಎಂ ಟ್ವಿಟ್‌ ಮಾಡಿದ್ದಾರೆ.

ಗುಣರಾಜ್ಯೋತ್ಸವದ ಮುನ್ನಾ ದಿನ ಕೇಂದ್ರ ಸರ್ಕಾರ ಪದ್ಮ ಪ್ರಶಸ್ತಿಗಳನ್ನು ಘೋಷಣೆ ಮಾಡಿದೆ. ಎಸ್‌.ಎಂ ಕೃಷ್ಣ ಅವರಿಗೆ ಸಾರ್ವಜನಿಕ ಸೇವೆಗಾಗಿ ಪದ್ಮವಿಭೂಷಣ ಒಲಿದು ಬಂದಿದೆ.

ಸೋಮನಹಳ್ಳಿ ಮಲ್ಲಯ್ಯ ಕೃಷ್ಣ ಭಾರತದ ಪ್ರಭಾವಿ ರಾಜಕಾರಣಿಯಾಗಿದ್ದವರು. ಇವರು 2009 ರಿಂದ ಅಕ್ಟೋಬರ್ 2012 ರವರೆಗೆ ಭಾರತದ ವಿದೇಶಾಂಗ ವ್ಯವಹಾರಗಳ ಸಚಿವರಾಗಿ ಸೇವೆ ಸಲ್ಲಿಸಿದರು.  1999 ರಿಂದ 2004 ರವರೆಗೆ ಕರ್ನಾಟಕದ 16 ನೇ ಮುಖ್ಯಮಂತ್ರಿಯಾಗಿ ಸೇವೆ ಸಲ್ಲಿಸಿದರು. 2004 ರಿಂದ 2008 ರವರೆಗೆ ಮಹಾರಾಷ್ಟ್ರದ 19 ನೇ ರಾಜ್ಯಪಾಲರಾಗಿದ್ದರು.

ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.

News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.

Recent News

Back To Top