News13 ವಾಟ್ಸ್ಯಾಪ್‌ ಗ್ರೂಪ್‌ಗೆ ಸೇರಿ


×
Home About Us Advertise With s Contact Us

ಪಾಕಿಸ್ಥಾನದ ಸಮೃದ್ಧಿ ಅಲ್ಲಾಹುವಿನ ಜವಾಬ್ದಾರಿ ಎಂದು ಟ್ರೋಲ್‌ ಆಗುತ್ತಿರುವ ಪಾಕ್‌ ಸಚಿವ

ಇಸ್ಲಾಮಾಬಾದ್: ಅಲ್ಲಾಹುವಿಗೆ ಪಾಕಿಸ್ಥಾನವನ್ನು ಸೃಷ್ಟಿಸಲು ಸಾಧ್ಯವಾಗಿದೆ ಎಂದಾದರೆ ಅವನೇ ಅದನ್ನು ಸಮೃದ್ಧಪಡಿಸುತ್ತಾನೆ. ಅದು ಆತನ ಜವಾಬ್ದಾರಿ ಎಂಬ ಪಾಕಿಸ್ಥಾನದ ಹಣಕಾಸು ಸಚಿವ ಇಶಾಕ್ ದಾರ್ ಅವರ ಹೇಳಿಕೆ ಈಗ ದೊಡ್ಡ ಮಟ್ಟದಲ್ಲಿ ಟ್ರೋಲ್‌ಗೆ ಒಳಗಾಗುತ್ತಿದೆ.

ಪಾಕಿಸ್ಥಾನ ತೀವ್ರ ಆರ್ಥಿಕ ಬಿಕ್ಕಟ್ಟು ಮತ್ತು ಆಹಾರದ ಕೊರತೆಯನ್ನು ಎದುರಿಸುತ್ತಿರುವ ಸಮಯದಲ್ಲಿ ಇಶಾಕ್ ದಾರ್ ಅವರ ಹೇಳಿಕೆಯು ವಿವಿಧ ವಲಯಗಳಿಂದ ತೀವ್ರ ಟೀಕೆಗಳನ್ನು ಎದುರಿಸುತ್ತಿದೆ.

ಪಾಕಿಸ್ತಾನದಲ್ಲಿ ಕಾರ್ಯಕ್ರಮವೊಂದರಲ್ಲಿ ಮಾತನಾಡುತ್ತಿದ್ದ ದಾರ್, ತನ್ನ ದೇಶವನ್ನು ಇಸ್ಲಾಂ ಹೆಸರಿನಲ್ಲಿ ರಚಿಸಲಾಗಿದೆ ಮತ್ತು ಅದನ್ನು ಸಮೃದ್ಧಗೊಳಿಸುವುದು ಅಲ್ಲಾನ ಜವಾಬ್ದಾರಿಯಾಗಿದೆ ಎಂದು ಹೇಳುವ ಮೂಲಕ ವಿವಾದವನ್ನು ಹುಟ್ಟುಹಾಕಿದ್ದಾರೆ.

“ಅಲ್ಲಾಹನು ಪಾಕಿಸ್ತಾನವನ್ನು ರಚಿಸಬಹುದಾದರೆ, ಅವನು ಅದನ್ನು ರಕ್ಷಿಸಬಹುದು, ಅಭಿವೃದ್ಧಿಪಡಿಸಬಹುದು ಮತ್ತು ಅಭಿವೃದ್ಧಿಗೊಳಿಸಬಹುದು” ಎಂದು ದಾರ್ ಹೇಳಿದ್ದಾರೆ ಎಂದು ಪಾಕಿಸ್ಥಾನಿ ಪತ್ರಿಕೆಗಳು ವರದಿ ಮಾಡಿವೆ.

ಪ್ರಧಾನಿ ಶೆಹಬಾಜ್ ಷರೀಫ್ ಅವರ ನಾಯಕತ್ವದಲ್ಲಿ ಪಾಕಿಸ್ತಾನದ ಸ್ಥಿತಿಯನ್ನು ಸುಧಾರಿಸಲು  ತಮ್ಮ ಕೈಲಾದಷ್ಟು ಪ್ರಯತ್ನಿಸುತ್ತಿದ್ದೇನೆ ಎಂದು ದಾರ್‌ ಹೇಳಿದ್ದಾರೆ.

ಅವರ ಹೇಳಿಕೆಗಳು ದೊಡ್ಡ ಮಟ್ಟದಲ್ಲಿ ಸುದ್ದಿಯಾಗಿದ್ದು, ಜನರು ಅವರನ್ನು ಹಿಗ್ಗಾಮುಗ್ಗಾ ತರಾಟೆಗೆ ತೆಗೆದುಕೊಳ್ಳುತ್ತಿದ್ದಾರೆ.

ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.

News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.

Recent News

Back To Top