News13 ವಾಟ್ಸ್ಯಾಪ್‌ ಗ್ರೂಪ್‌ಗೆ ಸೇರಿ


×
Home About Us Advertise With s Contact Us

ಧಾರವಾಡದಲ್ಲಿ ವಿಧಿವಿಜ್ಞಾನ ವಿಶ್ವವಿದ್ಯಾಲಯಕ್ಕೆ ಅಮಿತ್‌ ಶಾ ಶಿಲಾನ್ಯಾಸ

ಧಾರವಾಡ: ಕೇಂದ್ರ ಗೃಹ ಸಚಿವೆ ಅಮಿತ್‌ ಶಾ ಅವರು ಇಂದು ಧಾರವಾಡದಲ್ಲಿ ವಿಧಿವಿಜ್ಞಾನ ವಿಶ್ವವಿದ್ಯಾಲಯಕ್ಕೆ ಶಿಲಾನ್ಯಾಸ ನೆರವೇರಿಸಿದಾರೆ. ಇದು ಭಾರತದಲ್ಲಿ ಏಳನೇ ವಿಧಿವಿಜ್ಞಾನ ವಿಶ್ವವಿದ್ಯಾಲಯ ಕ್ಯಾಂಪಸ್ ಆಗಿದೆ.

ಈ ಸಂದರ್ಭದಲ್ಲಿ ಮಾತನಾಡಿದ ಅಮಿತ್‌ ಶಾ, “ವಿಧಿವಿಜ್ಞಾನ ಕ್ಷೇತ್ರದಲ್ಲಿ ಮಾನವಶಕ್ತಿಯನ್ನು ಸೃಷ್ಟಿಸಲು ವಿಧಿ ವಿಜ್ಞಾನ ವಿಶ್ವವಿದ್ಯಾಲಯಗಳು ಸಹಾಯ ಮಾಡಲಿವೆ” ಎಂದು ಹೇಳಿದರು.

ಭಾರತ ಈಗ ಉತ್ಪಾದನಾ ಕೇಂದ್ರವಾಗುವತ್ತ ಸಾಗುತ್ತಿದೆ. 2013-14ರಲ್ಲಿ ಸಂಶೋಧನೆಗಾಗಿ ಕೇವಲ 3000 ಅರ್ಜಿಗಳು ಬಂದಿದ್ದು, 211 ಪೇಟೆಂಟ್‌ಗಳನ್ನು ಮಾತ್ರ ಸ್ವೀಕರಿಸಲಾಗಿತ್ತು. ಆದರೆ ಇಂದು ಸಂಶೋಧನಾ ಅರ್ಜಿಗಳು ಒಂದು ಲಕ್ಷದವರೆಗೆ ಹೆಚ್ಚಿವೆ ಮತ್ತು 2021-22ರಲ್ಲಿ 24,000 ಪೇಟೆಂಟ್‌ಗಳನ್ನು ಸಲ್ಲಿಸಲಾಗಿದೆ ಎಂದರು.

ಭಾರತವು ಕೃತಕ ಬುದ್ಧಿಮತ್ತೆ, ಡ್ರೋನ್‌ಗಳು, ಸೆಮಿಕಂಡಕ್ಟರ್‌ಗಳು ಮತ್ತು ಬಾಹ್ಯಾಕಾಶದಲ್ಲಿ ದಾಪುಗಾಲು ಹಾಕುತ್ತಿದೆ. ಖೇಲೋ ಇಂಡಿಯಾ ಮತ್ತು ಫಿಟ್ ಇಂಡಿಯಾದಂತಹ ಕಾರ್ಯಕ್ರಮಗಳು ಕ್ರೀಡಾ ಕ್ಷೇತ್ರದಲ್ಲಿ ಸಾಧನೆ ಮಾಡಲು ಯುವಕರನ್ನು ಪ್ರೋತ್ಸಾಹಿಸುತ್ತಿವೆ. IIT ಗಳ ಸಂಖ್ಯೆ 16 ರಿಂದ 23 ಕ್ಕೆ ಏರಿದೆ, ಇಂದು 20 IIM ಗಳಿವೆ, AIIMS 7ರಿಂದ 22 ಕ್ಕೆ ಏರಿದೆ ಮತ್ತು ವಿಶ್ವವಿದ್ಯಾನಿಲಯಗಳ ಸಂಖ್ಯೆ 723 ರಿಂದ 1043 ಕ್ಕೆ ಬೆಳೆದಿದೆ. ವಿದೇಶಿ ವಿಶ್ವವಿದ್ಯಾಲಯಗಳು ತಮ್ಮ ಕ್ಯಾಂಪಸ್ ಅನ್ನು ಇಲ್ಲಿ ತೆರೆಯಲು ಅನುಮತಿ ನೀಡಲಾಗಿದೆ ಎಂದರು.

ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.

News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.

Recent News

Back To Top