News13 ವಾಟ್ಸ್ಯಾಪ್‌ ಗ್ರೂಪ್‌ಗೆ ಸೇರಿ


×
Home About Us Advertise With s Contact Us

ರಾಷ್ಟ್ರಪತಿ ಭವನದ ಮೊಘಲ್ ಗಾರ್ಡನ್‌ಗೆ ʼಅಮೃತ್‌ ಉದ್ಯಾನ್‌ʼ ಎಂದು ಮರುನಾಮಕರಣ

ನವದೆಹಲಿ: ರಾಷ್ಟ್ರಪತಿ ಭವನದಲ್ಲಿರುವ ಮೊಘಲ್ ಗಾರ್ಡನ್ ಅನ್ನು ಅಮೃತ್ ಉದ್ಯಾನ್ ಎಂದು ಕೇಂದ್ರ ಸರ್ಕಾರ ಇಂದು ಮರುನಾಮಕರಣ ಮಾಡಿದೆ.

ಭಾರತದ ಸ್ವಾತಂತ್ರ್ಯದ 75 ವರ್ಷಗಳನ್ನು ಗುರುತಿಸುವ ‘ಅಮೃತ ಮಹೋತ್ಸವ’ದ ಥೀಮ್‌ಗೆ ಅನುಗುಣವಾಗಿ ಕೇಂದ್ರ ಸರ್ಕಾರವು ಮೊಘಲ್ ಗಾರ್ಡನ್ ಹೆಸರನ್ನು ಅಮೃತ್ ಉದ್ಯಾನ್ ಎಂದು ಬದಲಾಯಿಸಿದೆ.

ರಾಷ್ಟ್ರಪತಿ ದ್ರೌಪದಿ ಮುರ್ಮು ಅವರ ಉಪ ಪತ್ರಿಕಾ ಕಾರ್ಯದರ್ಶಿ ನಾವಿಕಾ ಗುಪ್ತಾ ಈ  ಬಗ್ಗೆ ಮಾತನಾಡಿ, ‘ಸ್ವಾತಂತ್ರ್ಯದ 75 ವರ್ಷಗಳನ್ನು ‘ಆಜಾದಿ ಕಾ ಅಮೃತ್ ಮಹೋತ್ಸವ’ ಎಂದು ಆಚರಿಸುವ ಸಂದರ್ಭದಲ್ಲಿ, ಭಾರತದ ರಾಷ್ಟ್ರಪತಿಗಳು ರಾಷ್ಟ್ರಪತಿ ಭವನದ ಉದ್ಯಾನಗಳಿಗೆ ಅಮೃತ್ ಉದ್ಯಾನ ಎಂದು  ಹೆಸರನ್ನು ನೀಡಿದ್ದಾರೆ” ಎಂದಿದ್ದಾರೆ.

ಅಮೃತ್ ಉದ್ಯಾನ್‌ ಅನ್ನು ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಜನವರಿ 29 ರಂದು ತೆರೆಯಲಿದ್ದು, ಜನವರಿ 31 ರಿಂದ ಮಾರ್ಚ್ 26 ರವರೆಗೆ ಎರಡು ತಿಂಗಳ ಕಾಲ ಸಾರ್ವಜನಿಕರಿಗೆ ಇದು ತೆರೆದಿರುತ್ತದೆ. ಸಾಮಾನ್ಯವಾಗಿ ಉದ್ಯಾನವು ಸಾರ್ವಜನಿಕ ವೀಕ್ಷಣೆಗೆ ಒಂದು ತಿಂಗಳು ತೆರೆದಿರುತ್ತದೆ. ಸಾಮಾನ್ಯವಾಗಿ ಫೆಬ್ರವರಿಯಿಂದ ಮಾರ್ಚ್ ಹೂವುಗಳು ಪೂರ್ಣವಾಗಿ ಅರಳುವ ಸಮಯ.

ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.

News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.

Recent News

Back To Top