ನವದೆಹಲಿ: ಇಂದು ರಾಷ್ಟ್ರಪಿತ ಮಹಾತ್ಮ ಗಾಂಧಿ ಅವರ 75 ನೇ ಪುಣ್ಯತಿಥಿಯಂದು ರಾಷ್ಟ್ರವು ಅವರಿಗೆ ಗೌರವ ಸಲ್ಲಿಸುತ್ತಿದೆ. ಈ ದಿನವನ್ನು ಹುತಾತ್ಮರ ದಿನವನ್ನಾಗಿಯೂ ಆಚರಿಸಲಾಗುತ್ತದೆ.
ಜನವರಿ 30, 1948 ರಂದು ಸಂಜೆ ಪ್ರಾರ್ಥನೆಯ ಸಮಯದಲ್ಲಿ ಬಿರ್ಲಾ ಹೌಸ್ನಲ್ಲಿ ಗಾಂಧಿ ಸ್ಮೃತಿಯಲ್ಲಿ ನಾಥುರಾಮ್ ಗೋಡ್ಸೆ ಗಾಂಧೀಜಿಯವರನ್ನು ಹತ್ಯೆ ಮಾಡಿದನು. ಗಾಂಧೀ ಸ್ಮರಣಾರ್ಥ ಈ ದಿನವನ್ನು ಹುತಾತ್ಮರ ದಿನ ಅಥವಾ ಶಹೀದ್ ದಿವಸ್ ಆಗಿ ಗೌರವಿಸಲಾಗುತ್ತದೆ. ಈ ದಿನದಂದು ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳು ಸ್ವಾತಂತ್ರ್ಯ ಹೋರಾಟದ ಸಂದರ್ಭದಲ್ಲಿ ಮಡಿದ ನಾಯಕರು ಮತ್ತು ಹೋರಾಟಗಾರರನ್ನು ಗೌರವಿಸಲು ಬೆಳಿಗ್ಗೆ 11 ಗಂಟೆಗೆ ಎರಡು ನಿಮಿಷಗಳ ಮೌನಾಚರಣೆ ಮಾಡಬೇಕೆಂದು ಕೇಂದ್ರ ಸರ್ಕಾರ ಆದೇಶಿಸಿದೆ.
ನವದೆಹಲಿಯ ರಾಜ್ಘಾಟ್ನಲ್ಲಿರುವ ಗಾಂಧಿ ಸಮಾಧಿಯಲ್ಲಿ ಸರ್ವಧರ್ಮೀಯ ಪ್ರಾರ್ಥನಾ ಸಭೆಯನ್ನು ಆಯೋಜಿಸಲಾಗುತ್ತಿದೆ.
“ನಾನು ಬಾಪು ಅವರ ಪುಣ್ಯ ತಿಥಿಯಂದು ಅವರಿಗೆ ನಮಸ್ಕರಿಸುತ್ತೇನೆ ಮತ್ತು ಅವರ ಚಿಂತನೆಗಳನ್ನು ಸ್ಮರಿಸಿಕೊಳ್ಳುತ್ತೇನೆ. ನಮ್ಮ ರಾಷ್ಟ್ರದ ಸೇವೆಯಲ್ಲಿ ಹುತಾತ್ಮರಾದ ಎಲ್ಲರಿಗೂ ನಾನು ಈ ದಿನ ಗೌರವ ಸಲ್ಲಿಸುತ್ತೇನೆ. ಅವರ ತ್ಯಾಗವನ್ನು ಎಂದಿಗೂ ಮರೆಯಲಾಗುವುದಿಲ್ಲ ಮತ್ತು ಅವರ ತ್ಯಾಗ ಅಭಿವೃದ್ಧಿ ಹೊಂದಿದ ಭಾರತಕ್ಕಾಗಿ ಕೆಲಸ ಮಾಡುವ ನಮ್ಮ ಸಂಕಲ್ಪವನ್ನು ಬಲಪಡಿಸುತ್ತದೆ” ಎಂದು ಪ್ರಧಾನಿ ನರೇಂದ್ರ ಮೋದಿ ಟ್ವಿಟ್ ಮಾಡಿದ್ದಾರೆ.
ಮಹಾತ್ಮ ಗಾಂಧಿಯವರು 75 ವರ್ಷಗಳ ಹಿಂದೆ ನಿಧನರಾಗಿದ್ದರೂ, ಅವರು ಮುಂದಿನ ಪೀಳಿಗೆಗೆ ಸ್ಫೂರ್ತಿ ನೀಡುತ್ತಿದ್ದಾರೆ. ಅವರ ಜೀವನ ಆದರ್ಶಗಳು ಮತ್ತು ಬುದ್ಧಿವಂತಿಕೆಯು ಅಸಂಖ್ಯಾತ ಜನರಿಗೆ ಸ್ಫೂರ್ತಿ ನೀಡಿದೆ.
I bow to Bapu on his Punya Tithi and recall his profound thoughts. I also pay homage to all those who have been martyred in the service of our nation. Their sacrifices will never be forgotten and will keep strengthening our resolve to work for a developed India.
— Narendra Modi (@narendramodi) January 30, 2023
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.