News13 ವಾಟ್ಸ್ಯಾಪ್‌ ಗ್ರೂಪ್‌ಗೆ ಸೇರಿ


×
Home About Us Advertise With s Contact Us

ತ್ರಿವರ್ಣಕ್ಕೆ ರಾಹುಲ್‌ ಅವಮಾನ: ಬಿಜೆಪಿ ಆಕ್ರೋಶ

ಶ್ರೀನಗರ: ಶ್ರೀನಗರದ ಲಾಲ್ ಚೌಕ್ ಬಳಿಯ ಐಕಾನಿಕ್ ಕ್ಲಾಕ್ ಟವರ್‌ನಲ್ಲಿ ಭಾನುವಾರ ತ್ರಿವರ್ಣ ಧ್ವಜವನ್ನು ಹಾರಿಸುವಾಗ ಧ್ವಜ ಸಂಹಿತೆ ಉಲ್ಲಂಘಿಸಿದ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರನ್ನು ಆಡಳಿತಾರೂಢ ಬಿಜೆಪಿ ತರಾಟೆಗೆ ತೆಗೆದುಕೊಂಡಿದೆ.

ರಾಹುಲ್ ವಿರುದ್ಧ ವಾಗ್ದಾಳಿ ನಡೆಸಿದ ಕೇಂದ್ರ ಸಚಿವ ರಾಜೀವ್ ಚಂದ್ರಶೇಖರ್, ಕಾಂಗ್ರೆಸ್ ನಾಯಕ ತ್ರಿವರ್ಣ ಧ್ವಜದ‌ ಸಮೀಪ ತನ್ನ ದೊಡ್ಡ ಕಟೌಟ್ ಹಾಕುವ ಮೂಲಕ ರಾಷ್ಟ್ರಧ್ವಜಕ್ಕೆ ಅವಮಾನ ಮಾಡಿದ್ದಾರೆ ಎಂದು ಆರೋಪಿಸಿದ್ದಾರೆ.

“ ರಾಷ್ಟ್ರಧ್ವಜವನ್ನು ಹಾರಿಸುವಾಗಲೂ ನೀವು ಆ ಧ್ವಜವನ್ನು ಅತಿಕ್ರಮಿಸಲು ಬಯಸುತ್ತೀರಿ ಮತ್ತು ಧ್ವಜದ ಹಿಂದೆ ನಿಮ್ಮದೇ ಕಟೌಟ್ ಹಾಕುವ ಮೂಲಕ ಧ್ವಜ ಸಂಹಿತೆಯನ್ನು ಉಲ್ಲಂಘಿಸುವುದು ಕುಟುಂಬ ರಾಜಕೀಯ ಪಕ್ಷದ ಡಿಎನ್‌ಎಯಲ್ಲಿದೆ ಎಂದು ನಾನು ಭಾವಿಸುತ್ತೇನೆ” ಎಂದು ಕೇಂದ್ರ ಸಚಿವ ರಾಜೀವ್ ಚಂದ್ರಶೇಖರ್ ಹೇಳಿದ್ದಾರೆ.

“ಒಂದು ರೀತಿಯಲ್ಲಿ, ಇದು ಕುಟುಂಬ ರಾಜಕರಣದ ಮನಸ್ಥಿತಿಯ ಪ್ರದರ್ಶನವಾಗಿದೆ, ಪ್ರತಿ ಯೋಜನೆಗಳಲ್ಲಿ ಅವರ ಹೆಸರು ಅಥವಾ  ತಂದೆಯ ಹೆಸರು ಅಥವಾ ಅವನ ಅಜ್ಜಿಯ ಹೆಸರು ಇಡುವುದು ಕುಟುಂಬ ರಾಜಕೀಯದಲ್ಲಿ ಸಾಮಾನ್ಯ. ವ್ಯಕ್ತಿ ತ್ರಿವರ್ಣ ಧ್ವಜಕ್ಕಿಂತಲೂ ದೊಡ್ಡವ ಎಂದು ಅವರು ಭಾವಿಸುತ್ತಾರೆ” ಎಂದಿದ್ದಾರೆ.

ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.

News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.

Recent News

Back To Top