News13 ವಾಟ್ಸ್ಯಾಪ್‌ ಗ್ರೂಪ್‌ಗೆ ಸೇರಿ


×
Home About Us Advertise With s Contact Us

ಜನಪರವಾದ ಬಜೆಟ್ ಮಂಡಿಸುತ್ತೇವೆ: ಸಿಎಂ ಭರವಸೆ

ಬೆಂಗಳೂರು: ಮಹಾತ್ಮ ಗಾಂಧೀಜಿಯವರ ಪುಣ್ಯತಿಥಿಯ ಅಂಗವಾಗಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಇಂದು ವಿಧಾನಸೌಧ ಮತ್ತು ವಿಕಾಸಸೌಧದ ನಡುವಿನ ಮಹಾತ್ಮ ಗಾಂಧೀಜಿಯವರ ಪ್ರತಿಮೆಗೆ ಮಾಲಾರ್ಪಣೆ ಮಾಡಿದರು.

ಈ ಸಂದರ್ಭದಲ್ಲಿ ಮಾತನಾಡಿದ ಬೊಮ್ಮಾಯಿ, “ಮಹಾತ್ಮ ಗಾಂಧೀಜಿಯವರ ಸ್ಮರಣೆ ಮಾಡಿಕೊಂಡು ಮೌನಚಾರಣೆ ಮಾಡಿದ್ದೇವೆ. ಗಾಂಧೀಜಿಯವರ ಜೀವನವೇ ಒಂದು ಸಂದೇಶದಂತಿದ್ದು, ಜೀವನದುದ್ದಕ್ಕೂ ಸತ್ಯ ಮತ್ತು ಅಹಿಂಸೆಯನ್ನೇ ಪ್ರತಿಪಾದಿಸಿದವರು. ಅಹಿಂಸೆಯಲ್ಲಿ ದೇಶಕ್ಕೆ ಸ್ವಾತಂತ್ರ ಕೊಡಿಸಿದವರು. ಗಾಂಧೀಜಿ ತತ್ವ ಆದರ್ಶ ಮೇಲೆ ಸಾರ್ವಜನಿಕ ಜೀವನದಲ್ಲಿ ನೈತಿಕತೆ ಬರಬೇಕು. ಸ್ವಾತಂತ್ರ್ಯಕ್ಕಾಗಿ ಸುಭಾಶ್ ಚಂದ್ರ ಬೋಸ್ ಸೇರಿದಂತೆ ಅನೇಕ ಮಹನೀಯರು ಪ್ರಾಣತ್ಯಾಗ” ಮಾಡಿದ್ದಾರೆ ಎಂದರು.

“ಈ ಬಾರಿ ಜನಪರವಾದ ಬಜೆಟ್ ಮಂಡನೆಯಾಗುತ್ತದೆ. ರೈತರು, ದೀನದಲಿತರು ಹಾಗೂ ದುಡಿಯುವ ವರ್ಗಕ್ಕೆ ಆರ್ಥಿಕವಾಗಿ ಹೆಚ್ಚು ಗಮನ ನೀಡಲಾಗುತ್ತದೆ”ಎಂದಿದ್ದಾರೆ.

ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.

News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.

Recent News

Back To Top