News13 ವಾಟ್ಸ್ಯಾಪ್‌ ಗ್ರೂಪ್‌ಗೆ ಸೇರಿ


×
Home About Us Advertise With s Contact Us

ಗೋರಖನಾಥ ದೇಗುಲ ದಾಳಿ: ಆರೋಪಿ ಅಹ್ಮದ್ ಅಬ್ಬಾಸಿಗೆ ಗಲ್ಲು ಶಿಕ್ಷೆ ಪ್ರಕಟ

ನವದೆಹಲಿ: 2022ರಲ್ಲಿ ಲಕ್ನೋದ ಗೋರಖನಾಥ ದೇವಾಲಯದ ಮೇಲೆ ದಾಳಿ ನಡೆಸಿದ ಆರೋಪಿ ಅಹ್ಮದ್ ಮುರ್ತಾಜಾ ಅಬ್ಬಾಸಿಗೆ ವಿಶೇಷ ಎನ್‌ಐಎ ನ್ಯಾಯಾಲಯ ಇಂದು ಮರಣದಂಡನೆ ಶಿಕ್ಷೆಯನ್ನು ವಿಧಿಸಿದೆ.

ಅಬ್ಬಾಸಿ ಭಾರತೀಯ ದಂಡ ನ್ಯಾಯಾಲಯದ ಸೆಕ್ಷನ್ 121 ರಲ್ಲಿ ಮರಣದಂಡನೆ ಮತ್ತು ಸೆಕ್ಷನ್ 307 ರಲ್ಲಿ ಜೀವಾವಧಿ ಶಿಕ್ಷೆಯನ್ನು ಪಡೆದಿದ್ದಾನೆ.

ಇಂಡಿಯನ್ ಇನ್‌ಸ್ಟಿಟ್ಯೂಟ್ ಆಫ್ ಟೆಕ್ನಾಲಜಿ (ಐಐಟಿ) ಪದವೀಧರನಾಗಿರು ಅಹ್ಮದ್ ಮುರ್ತಾಜಾ ಅಬ್ಬಾಸಿ ದೋಷಿ ಎಂದು ನ್ಯಾಯಾಲಯ ಶನಿವಾರ ತೀರ್ಪು ನೀಡಿತ್ತು.

ಕಳೆದ ವರ್ಷ ಏಪ್ರಿಲ್ 3 ರಂದು, ಅಬ್ಬಾಸಿ ಗೋರಖನಾಥ ದೇವಾಲಯದ ಆವರಣಕ್ಕೆ ಬಲವಂತವಾಗಿ ಪ್ರವೇಶಿಸಲು ಪ್ರಯತ್ನಿಸಿ, ಅಲ್ಲಿ ನಿಯೋಜಿಸಲಾಗಿದ್ದ ಭದ್ರತಾ ಸಿಬ್ಬಂದಿ ಮೇಲೆ ದೊಣ್ಣೆಯಿಂದ ದಾಳಿ ಮಾಡಿದ್ದ, ಘಟನೆಯಲ್ಲಿ ಇಬ್ಬರು ಪಿಎಸಿ ಕಾನ್‌ಸ್ಟೆಬಲ್‌ಗಳು ಗಾಯಗೊಂಡಿದ್ದರು.

ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.

News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.

Recent News

Back To Top