News13 ವಾಟ್ಸ್ಯಾಪ್‌ ಗ್ರೂಪ್‌ಗೆ ಸೇರಿ


×
Home About Us Advertise With s Contact Us

ಬಿಹಾರ: ಮತ್ತೆ ನಿತೀಶ್‌ ಜೊತೆ ಮೈತ್ರಿ ಮಾಡಿಕೊಳ್ಳದಿರುವ ನಿರ್ಣಯ ಅಂಗೀಕರಿಸಿದ ಬಿಜೆಪಿ

ಪಾಟ್ನಾ: ಇನ್ನು ಮುಂದೆ ಬಿಹಾರದಲ್ಲಿ ಜೆಡಿಯು ನಾಯಕ ನಿತೀಶ್ ಕುಮಾರ್ ಅವರ ಜೊತೆಗೆ ಮೈತ್ರಿ ಮಾಡಿಕೊಳ್ಳದೆ ಇರುವ ನಿರ್ಣಯವನ್ನು ಬಿಜೆಪಿ ಅಂಗೀಕರಿಸಿದೆ.

ಭಾನುವಾರದಿಂದ ದರ್ಭಾಂಗಾದಲ್ಲಿ ನಡೆದ ಎರಡು ದಿನಗಳ ಸಭೆಯಲ್ಲಿ ಬಿಜೆಪಿಯ ಬಿಹಾರ ಘಟಕವು “ಜನತಾ ದಳ-ಯುನೈಟೆಡ್ ನಾಯಕ ನಿತೀಶ್ ಕುಮಾರ್ ಅವರೊಂದಿಗೆ ಮತ್ತೆ ಎಂದಿಗೂ ಹೊಂದಾಣಿಕೆ ಮಾಡಿಕೊಳ್ಳುವುದಿಲ್ಲ” ಎಂಬ ನಿರ್ಣಯವನ್ನು ಅಂಗೀಕರಿಸಿದೆ.

ರಾಜ್ಯಸಭಾ ಸಂಸದ ಮತ್ತು ಬಿಜೆಪಿ ನಾಯಕ ಸುಶೀಲ್ ಕುಮಾರ್ ಮೋದಿ ಅವರು ನಿರ್ಣಯವನ್ನು ದೃಢಪಡಿಸಿದ್ದು, “ನಿತೀಶ್ ಕುಮಾರ್ ಅವರೊಂದಿಗೆ ಪಕ್ಷವು ಎಂದಿಗೂ ಮೈತ್ರಿ ಮಾಡಿಕೊಳ್ಳುವುದಿಲ್ಲ ಎಂಬುದು ಪ್ರಧಾನಿ ನರೇಂದ್ರ ಮೋದಿ ಮತ್ತು ಕೇಂದ್ರ ಗೃಹ ಸಚಿವ ಅಮಿತ್ ಶಾ ಸೇರಿದಂತೆ ಕೇಂದ್ರ ಬಿಜೆಪಿ ನಾಯಕತ್ವದ ನಿರ್ಧಾರವಾಗಿದೆ” ಎಂದಿದ್ದಾರೆ.

“ಬಿಜೆಪಿ ಮತ್ತು ಜನಾದೇಶಕ್ಕೆ ಪದೇ ಪದೇ ದ್ರೋಹ ಬಗೆದಿರುವ ನಿತೀಶ್ ಕುಮಾರ್ ಬಿಹಾರದ ರಾಜಕೀಯಕ್ಕೆ ಹೊರೆಯಾಗಿದ್ದಾರೆ. ಅವರಿಗೆ ಜನಬಲವಾಗಲಿ ಅಥವಾ ಸ್ವ‌ಬಲದಿಂದ ಮತಗಳನ್ನು ಪಡೆಯುವ ಸಾಮರ್ಥ್ಯವಾಗಲಿ ಇಲ್ಲ. ಇನ್ನು ಮುಂದೆ 10-15 ಸ್ಥಾನಗಳನ್ನು ಗೆಲ್ಲುವ ಸ್ಥಿತಿಯೂ ಅವರಲ್ಲಿ ಇಲ್ಲ” ಎಂದು ಸುಶೀಲ್ ಕುಮಾರ್ ಮೋದಿ ಹೇಳಿದ್ದಾರೆ.

2020ರ ಅಸೆಂಬ್ಲಿ ಚುನಾವಣೆಯಲ್ಲಿ ಜೆಡಿಯು 43 ಸ್ಥಾನಗಳನ್ನು ಗೆಲ್ಲಲು ಸಾಧ್ಯವಾಯಿತು ಏಕೆಂದರೆ ಬಿಜೆಪಿ ತನ್ನ ಎಲ್ಲಾ ಶಕ್ತಿಯನ್ನು ಹಾಕಿತ್ತು, ಪ್ರಧಾನಿ ನರೇಂದ್ರ ಮೋದಿ ಸ್ವತಃ ಬಿಹಾರಕ್ಕೆ ಹೋಗಿ ಪಕ್ಷದ ಪ್ರಚಾರ ಮಾಡಿದರು ಎಂದಿದ್ದಾರೆ.

ನಿತೀಶ್ ಕುಮಾರ್ ಮತ್ತು ಜೆಡಿಯು ಎನ್‌ಡಿಎಗೆ ಮರಳುವ ವದಂತಿಗಳು ಸುಳ್ಳು ಎಂದಿದ್ದಾರೆ.

ಉತ್ತಮ ಸಂಖ್ಯೆಯ ಸ್ಥಾನಗಳನ್ನು ಪಡೆಯದಿದ್ದರೂ, ಜೆಡಿಯು ಮುಖ್ಯಸ್ಥರಿಗೆ ಮುಖ್ಯಮಂತ್ರಿ ಸ್ಥಾನವನ್ನು ನೀಡಲಾಯಿತು. ಆದರೂ ಅವರು ದ್ರೋಹ ಬಗೆದರು ಎಂದಿದ್ದಾರೆ.

ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.

News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.

Recent News

Back To Top