News13 ವಾಟ್ಸ್ಯಾಪ್‌ ಗ್ರೂಪ್‌ಗೆ ಸೇರಿ


×
Home About Us Advertise With s Contact Us

ಭಾರತ ಮಾತ್ರವಲ್ಲ, ಇಡೀ ವಿಶ್ವವೇ ನಮ್ಮ ಬಜೆಟ್ ಮೇಲೆ ಕಣ್ಣಿಟ್ಟಿದೆ: ಮೋದಿ

ನವದೆಹಲಿ: ಆರ್ಥಿಕ ಜಗತ್ತಿನ ಮಹತ್ವದ ಧ್ವನಿಗಳು ಸಕಾರಾತ್ಮಕ ಸಂಕೇತಗಳನ್ನು ನೀಡುತ್ತಿವೆ ಎಂದು ಪ್ರಧಾನಿ ನರೇಂದ್ರ ಮೋದಿ ಅವರು ಇಂದು ಬಜೆಟ್ ಅಧಿವೇಶನಕ್ಕೆ ಸಂಸತ್ತಿಗೆ ಆಗಮಿಸಿದ ಸಂದರ್ಭದಲ್ಲಿ ಹೇಳಿದ್ದಾರೆ.

“ಈ ಬಜೆಟ್ ಅಸ್ಥಿರವಾದ ಜಾಗತಿಕ ಆರ್ಥಿಕತೆಗೆ ಉಜ್ವಲ ತಾಣವಾಗಲಿದೆ. ನಿರ್ಮಲಾ ಸೀತಾರಾಮನ್ ಎಲ್ಲಾ ನಿರೀಕ್ಷೆಗಳನ್ನು ಪೂರೈಸುತ್ತಾರೆ ಎಂದು ನನಗೆ ಖಾತ್ರಿಯಿದೆ” ಎಂದು ಪ್ರಧಾನಿ ಹೇಳಿದರು.

“ನಮಗೆ ಒಂದೇ ಒಂದು ಧ್ಯೇಯವಿದೆ, ಅದುವೇ ದೇಶ ಮೊದಲು. ಬಜೆಟ್ ಅಧಿವೇಶನದಲ್ಲಿ ನಾವು ಜಗಳವಾಡುತ್ತೇವೆ, ಚರ್ಚಿಸುತ್ತೇವೆ. ಸದನದಲ್ಲಿ ನಾವು ಪ್ರತಿ ವಿಷಯದ ಬಗ್ಗೆಯೂ  ಉತ್ತಮ ರೀತಿಯಲ್ಲಿ ಚರ್ಚೆ ಮಾಡುತ್ತೇವೆ. ಎಲ್ಲಾ ಸಂಸದರು ಈ ಅಧಿವೇಶನದಲ್ಲಿ ಸಂಪೂರ್ಣ ಸಿದ್ಧತೆಯೊಂದಿಗೆ ಭಾಗವಹಿಸುತ್ತಾರೆ. ಈ ಅಧಿವೇಶನವು ನಮಗೆಲ್ಲರಿಗೂ ಮಹತ್ವದ್ದಾಗಿದೆ”ಎಂದು ಮೋದಿ ವಿಶ್ವಾಸ ವ್ಯಕ್ತಪಡಿಸಿದ್ದಾರೆ.

ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಮೊದಲ ಬಾರಿಗೆ ಉಭಯ ಸದನಗಳನ್ನು ಉದ್ದೇಶಿಸಿ ಇಂದು ಮಾತನಾಡಲಿದ್ದಾರೆ, ಇದು ಬುಡಕಟ್ಟು ಸಮಾಜಕ್ಕೆ ಹೆಮ್ಮೆಯ ದಿನವಾಗಿದೆ ಎಂದು ಮೋದಿ ಹೇಳಿದ್ದಾರೆ.

ಸಂಸತ್ತಿನಲ್ಲಿ ಮೊದಲ ಬಾರಿಗೆ ಹೊಸ ಸಂಸದರು ಮಾತನಾಡುವಾಗ ಇಡೀ ಸಂಸತ್ತು ಅವರಿಗೆ ಗೌರವವನ್ನು ನೀಡಿ ವಿಶ್ವಾಸವನ್ನು ನೀಡುವ ವಾತಾವರಣವನ್ನು ಸೃಷ್ಟಿಸುವುದು ಸಂಸತ್ತಿನಲ್ಲಿ ಸಂಪ್ರದಾಯವಾಗಿದೆ, ಅದೇ ರೀತಿ ಇಂದಿನ ಭಾಷಣವು ರಾಷ್ಟ್ರಪತಿಯವರ ಮೊದಲ ಭಾಷಣವಾಗಿದೆ ಎಂದಿದ್ದಾರೆ.

ನಾಳೆ ಕೇಂದ್ರ ಬಜೆಟ್ ಮಂಡಿಸಲಿರುವ ವಿತ್ತ ಸಚಿವರೂ ಒಬ್ಬ ಮಹಿಳೆಯಾಗಿದ್ದು, ಭಾರತ ಮಾತ್ರವಲ್ಲ, ಇಡೀ ವಿಶ್ವವೇ ನಮ್ಮ ಬಜೆಟ್ ಮೇಲೆ ಕಣ್ಣಿಟ್ಟಿದೆ ಎಂದು ಪ್ರಧಾನಿ ಹೇಳಿದರು.

ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.

News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.

Recent News

Back To Top