News13 ವಾಟ್ಸ್ಯಾಪ್‌ ಗ್ರೂಪ್‌ಗೆ ಸೇರಿ


×
Home About Us Advertise With s Contact Us

ಸಿರಿಧಾನ್ಯಕ್ಕೆ ʼಶ್ರೀ ಅನ್ನʼ ಎಂಬ ಹೊಸ ಗುರುತು: ಬೆಳೆ ಉತ್ತೇಜನಕ್ಕೆ ಹಲವು ಕ್ರಮ

ನವದೆಹಲಿ: ಭಾರತದಲ್ಲಿ ಸಿರಿಧಾನ್ಯಗಳ ಉತ್ಪಾದನೆ ಮತ್ತು ಕೃಷಿಯನ್ನು ಉತ್ತೇಜಿಸಲು  ಕೇಂದ್ರ ಬಜೆಟ್ 2023-24ರಲ್ಲಿ ಕೇಂದ್ರ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಮಹತ್ವದ ಕ್ರಮ ಕೈಗೊಂಡಿದ್ದಾರೆ.

ಸಿರಿಧಾನ್ಯಕ್ಕೆ ʼಶ್ರೀ ಅನ್ನʼ ಎಂಬ ಹೊಸ ಗುರುತನ್ನು ಅವರು ಬಜೆಟ್‌ ಮೂಲಕ ನೀಡಿದ್ದಾರೆ.

“ಭಾರತವು ಸಿರಿಧಾನ್ಯ ಅಥವಾ ಶ್ರೀ ಅನ್ನಕ್ಕೆ ಜಾಗತಿಕ ಕೇಂದ್ರವಾಗಿದೆ. ಸಿರಿಧಾನ್ಯವನ್ನು ಜನಪ್ರಿಯಗೊಳಿಸುವಲ್ಲಿ ಭಾರತವು ಮುಂಚೂಣಿಯಲ್ಲಿದೆ, ಅದರ ಸೇವನೆಯು ಪೌಷ್ಟಿಕಾಂಶ, ಆಹಾರ ಭದ್ರತೆ ಮತ್ತು ರೈತರ ಕಲ್ಯಾಣವನ್ನು ಹೆಚ್ಚಿಸುತ್ತದೆ ಎಂದು ಪ್ರಧಾನಿ ಹೇಳಿದ್ದಾರೆ” ಎಂದು ಸೀತಾರಾಮನ್‌ ಹೇಳಿದ್ದಾರೆ.

“ನಾವು ವಿಶ್ವದಲ್ಲಿ ಶ್ರೀ ಅನ್ನದ ಅತಿದೊಡ್ಡ ಉತ್ಪಾದಕ ಮತ್ತು ಎರಡನೇ ಅತಿದೊಡ್ಡ ರಫ್ತುದಾರರಾಗಿದ್ದೇವೆ. ನಾವು ಜೋಳ, ರಾಗಿ, ಬಾಜ್ರ, ಕುತ್ತುಗಳಂತಹ ಹಲವಾರು ವಿಧದ ಶ್ರೀ ಅನ್ನವನ್ನು ಬೆಳೆಯುತ್ತೇವೆ. ಇವುಗಳು ಹಲವಾರು ಆರೋಗ್ಯ ಪ್ರಯೋಜನಗಳನ್ನು ಹೊಂದಿವೆ ಮತ್ತು ಶತಮಾನಗಳಿಂದ ನಮ್ಮ ಆಹಾರದ ಅವಿಭಾಜ್ಯ ಅಂಗವಾಗಿದೆ ”ಎಂದರು.

‘ಭಾರತವು ಇಡೀ ವಿಶ್ವಕ್ಕೆ ಸಿರಿಧಾನ್ಯಗಳನ್ನು ಮಹತ್ವದ ಕೊಡುಗೆಯನ್ನಾಗಿ ನೀಡಿದೆ. ಭಾರತವು ಸಿರಿಧಾನ್ಯಗಳನ್ನು ಉತ್ಪಾದನೆ ಮಾಡುವ ಜಗತ್ತಿನ ರಾಷ್ಟ್ರಗಳಲ್ಲಿ ಮುಂಚೂಣಿಯಲ್ಲಿದೆ. ಭಾರತದ ಪ್ರಯತ್ನದಿಂದ 2023ರ ವರ್ಷವನ್ನು ಸಿರಿಧಾನ್ಯಗಳ ವರ್ಷವೆಂದು ವಿಶ್ವಸಂಸ್ಥೆ ಘೋಷಿಸಿದೆ. ಇದರ ಸದುಪಯೋಗವನ್ನು ಪಡೆದುಕೊಳ್ಳಲು ಕೇಂದ್ರ ಸರ್ಕಾರ, ಭಾರತೀಯ ರೈತರಿಗೆ ಅಪೂರ್ವವಾದ ಅವಕಾಶವನ್ನು ಕೊಟ್ಟಿದೆ. ಸಿರಿಧಾನ್ಯಗಳನ್ನು ಬೆಳೆಸಲು ಅನೇಕ ಯೋಜನೆಗಳ ಮೂಲಕ ನೆರವು ನೀಡಲಾಗುತ್ತದೆ” ಎಂದು ಅವರು ತಿಳಿಸಿದರು.

“ಈ ಶ್ರೀ ಅನ್ನವನ್ನು ಬೆಳೆಸುವ ಮೂಲಕ ಸಹ ನಾಗರಿಕರ ಆರೋಗ್ಯಕ್ಕೆ ಕೊಡುಗೆ ನೀಡುವಲ್ಲಿ ಸಣ್ಣ ರೈತರು ಮಾಡಿದ ದೊಡ್ಡ ಸೇವೆಯನ್ನು ನಾನು ಹೆಮ್ಮೆಯಿಂದ ಒಪ್ಪಿಕೊಳ್ಳುತ್ತೇನೆ” ಎಂದು ನಿರ್ಮಲಾ ಸೀತಾರಾಮನ್ ಹೇಳಿದ್ದಾರೆ.

“ಈಗ ಭಾರತವನ್ನು ಶ್ರೀ ಅನ್ನಕ್ಕೆ ಜಾಗತಿಕ ಕೇಂದ್ರವನ್ನಾಗಿ ಮಾಡಲು, ಹೈದರಾಬಾದ್‌ನಲ್ಲಿರುವ ಇಂಡಿಯನ್ ಇನ್‌ಸ್ಟಿಟ್ಯೂಟ್ ಆಫ್ ಮಿಲೆಟ್ಸ್ ರಿಸರ್ಚ್ ಅಂತರಾಷ್ಟ್ರೀಯ ಮಟ್ಟದಲ್ಲಿ ಅತ್ಯುತ್ತಮ ಅಭ್ಯಾಸಗಳು, ಸಂಶೋಧನೆ ಮತ್ತು ತಂತ್ರಜ್ಞಾನಗಳನ್ನು ಹಂಚಿಕೊಳ್ಳಲು ಶ್ರೇಷ್ಠತೆಯ ಕೇಂದ್ರವಾಗಿ ಬೆಂಬಲಿಸಲಾಗುವುದು” ಎಂದು ಅವರು ಒತ್ತಿ ಹೇಳಿದರು.

ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.

News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.

Recent News

Back To Top