News13 ವಾಟ್ಸ್ಯಾಪ್‌ ಗ್ರೂಪ್‌ಗೆ ಸೇರಿ


×
Home About Us Advertise With s Contact Us

ದೇಶದ ಭವಿಷ್ಯಕ್ಕೆ ಅಮೃತವಾಗಲಿದೆ ಅಮೃತಕಾಲದ ಬಜೆಟ್: ಸಿಟಿ ರವಿ

ಬೆಂಗಳೂರು: ಕೇಂದ್ರ ಹಣಕಾಸು ಸಚಿವೆ ಶ್ರೀಮತಿ ನಿರ್ಮಲಾ ಸೀತಾರಾಮನ್ ಅವರು ಈ ಬಾರಿ ಕೂಡ ದೂರದೃಷ್ಟಿ, ದೇಶದ ಹಿತದೃಷ್ಟಿಯುಳ್ಳ ಬಜೆಟ್ ಮಂಡಿಸಿದ್ದಾರೆ. ಬಜೆಟ್‍ನಲ್ಲಿ 7 ವಿಶೇಷಗಳಿಗೆ ಆದ್ಯತೆ ನೀಡಲಾಗಿದೆ. ಇದರಲ್ಲಿ ಕಟ್ಟಕಡೆಯ ಮನುಷ್ಯನಿಗೆ ತಲುಪುವ ಯೋಜನೆಗಳಿಗೆ ಆದ್ಯತೆ ನೀಡಲಾಗಿದೆ. ಹಾಗೆಯೇ ಬಡವರಿಗೆ ಬಲ ನೀಡುವ ಬಜೆಟ್ ಇದಾಗಿದೆ ಎಂದು ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ.ರವಿ ಅವರು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.

ರಾಜ್ಯದ ಭದ್ರಾ ಮೇಲ್ದಂಡೆ ಯೋಜನೆಗೆ ರೂ.5,300 ಕೋಟಿ ಅನುದಾನ ನೀಡಿದ್ದು, ಮನೆಮನೆಗೆ ನಳ್ಳಿ ನೀರು (ಹರ್ ಘರ್ ಜಲ್) ಯೋಜನೆಯ ವೇಗವರ್ಧನೆಗೆ ಕಾರಣ ಆಗಲಿದೆ ಎಂದು ತಿಳಿಸಿದ್ದಾರೆ. ಇದಕ್ಕಾಗಿ ಪ್ರಧಾನಿ ನರೇಂದ್ರ ಮೋದಿಜಿ ಮತ್ತು ಹಣಕಾಸು ಸಚಿವೆ ಶ್ರೀಮತಿ ನಿರ್ಮಲಾ ಸೀತಾರಾಮನ್ ಅವರಿಗೆ ಕೃತಜ್ಞತೆಗಳು ತಿಳಿಸಿದ್ದಾರೆ.

ಇಂದಿನ ಕೇಂದ್ರ ಬಜೆಟ್ ಯುವ ಸಮುದಾಯ, ಮೂಲಸೌಕರ್ಯ, ಪರಿಸರ ಸ್ನೇಹಿ ಬಜೆಟ್ ಆಗಿದೆ. ಆದಾಯ ತೆರಿಗೆ ರಿಯಾಯಿತಿ, ಭದ್ರಾ ಮೇಲ್ದಂಡೆ ಯೋಜನೆಗೆ ಅನುದಾನವನ್ನು ನೀಡಲಾಗಿದೆ. ಬಡವರಿಗೆ ಬಲ ನೀಡುವ ಬಜೆಟ್ ಇದಾಗಿದ್ದು, ಪ್ರಧಾನ ಮಂತ್ರಿಗಳಿಗೆ, ಕೇಂದ್ರ ಹಣಕಾಸು ಖಾತೆ ಸಚಿವೆಗೆ ಅಭಿನಂದನೆ ಸಲ್ಲಿಸುತ್ತೇನೆ ಎಂದು ಸಿ.ಟಿ ರವಿ ಅವರು ಹೇಳಿದ್ದಾರೆ.

ಒಬ್ಬ ಸ್ಟೇಟ್ಸ್ ಮ್ಯಾನ್ ಅಧಿಕಾರ ನಡೆಸುತ್ತಿರುವುದಕ್ಕೆ ಜಗತ್ತಿನಲ್ಲಿ ನಾವು ಗೌರವ ಸಂಪಾದಿಸುವ ಸ್ಥಿತಿಗೆ ಬಂದಿದ್ದೇವೆ. ಹಾಗೆ ಆಗದೇ ಇದ್ದಿದ್ದರೆ ನಾವು ಕೂಡ ಪಾಕಿಸ್ಥಾನದ ರೀತಿಯಲ್ಲಿ ಭಿಕ್ಷೆ ಎತ್ತುವ ಸ್ಥಿತಿಗೆ ಬರುತ್ತಿದ್ದೆವು ಎಂದು ಅವರು ಅಭಿಪ್ರಾಯಪಟ್ಟಿದ್ದಾರೆ.

ಸರ್ಕಾರದ ಕಳೆದ ಒಂಬತ್ತು ಬಜೆಟ್‍ಗಳನ್ನು ಗಮನಿಸಿದರೆ ದೂರದೃಷ್ಟಿ, ಆತ್ಮನಿರ್ಭರ ಭಾರತ್ ಕಡೆ ಹೆಜ್ಜೆ ಹಾಕುವ ಬಜೆಟ್ ಇದು, ಪ್ರಧಾನಿ ಮೋದಿಜಿ, ಸಚಿವೆ ನಿರ್ಮಲಾ ಸೀತಾರಾಮನ್ ಅವರನ್ನು ಅಭಿನಂದಿಸುತ್ತೇನೆ ಎಂದು ಸಿ.ಟಿ ರವಿ ಅವರು ಹೇಳಿದ್ದಾರೆ.

ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.

News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.

Recent News

Back To Top