News13 ವಾಟ್ಸ್ಯಾಪ್‌ ಗ್ರೂಪ್‌ಗೆ ಸೇರಿ


×
Home About Us Advertise With s Contact Us

ನೇಪಾಳದಿಂದ ಅಯೋಧ್ಯೆ ತಲುಪಿದ ಎರಡು ಪವಿತ್ರ ಸಾಲಿಗ್ರಮ ಬಂಡೆಗಳು

ನವದೆಹಲಿ: ರಾಮಮಂದಿರದ ಗರ್ಭಗುಡಿಯಲ್ಲಿ ಭಗವಾನ್ ರಾಮ ಮತ್ತು ಜಾನಕಿ ದೇವಿಯ ವಿಗ್ರಹವನ್ನು ಕೆತ್ತಲಾಗುವ ಎರಡು ಅಪರೂಪದ ಬಂಡೆಗಳು ಇಂದು ನೇಪಾಳದಿಂದ ಉತ್ತರ ಪ್ರದೇಶದ ಅಯೋಧ್ಯೆಗೆ ಬಂದು ತಲುಪಿವೆ.

ವಿಶ್ವ ಹಿಂದೂ ಪರಿಷತ್‌ನ ರಾಷ್ಟ್ರೀಯ ಕಾರ್ಯದರ್ಶಿ ರಾಜೇಂದ್ರ ಸಿಂಗ್ ಪಂಕಜ್ ಅವರು ನೇಪಾಳದ ಮುಸ್ತಾಂಗ್ ಜಿಲ್ಲೆಯಿಂದ ಎರಡು ಪವಿತ್ರ ಬಂಡೆಗಳ ರವಾನೆಯನ್ನು ಭಾರತಕ್ಕೆ ತಂದಿದ್ದಾರೆ.

ಈ ಸಾಲಿಗ್ರಾಮ ಬಂಡೆಗಳು 60 ಮಿಲಿಯನ್ ವರ್ಷಗಳಷ್ಟು ಹಳೆಯವು ಎಂದು ಹೇಳಲಾಗಿದೆ. ನೇಪಾಳದಿಂದ ಎರಡು ವಿಭಿನ್ನ ಟ್ರಕ್‌ಗಳಲ್ಲಿ ಅಯೋಧ್ಯೆಯನ್ನು ಇವು ಬಂದು ತಲುಪಿವೆ. ಒಂದು ಬಂಡೆಯ ತೂಕ 26 ಟನ್‌ಗಳಾಗಿದ್ದರೆ, ಇನ್ನೊಂದು 14 ಟನ್‌ಗಳಷ್ಟು ತೂಗುತ್ತದೆ ಎಂದು ವರದಿಗಳು ತಿಳಿಸಿವೆ.

ಶ್ರೀರಾಮ ಜನ್ಮಭೂಮಿ ತೀರ್ಥ ಕ್ಷೇತ್ರ ಟ್ರಸ್ಟ್‌ಗೆ ಹಸ್ತಾಂತರಿಸುವ ಮೊದಲು  ಭಗವಾನ್ ರಾಮನ ಜನ್ಮಸ್ಥಳದಲ್ಲಿ ಪವಿತ್ರ ಕಲ್ಲುಗಳನ್ನು ಪುರೋಹಿತರು ಮತ್ತು ಸ್ಥಳೀಯರು ಬಂಡೆಗಳನ್ನು ಹೂಮಾಲೆಯಿಂದ ಅಲಂಕರಿಸಿ ಧಾರ್ಮಿಕ ವಿಧಿಗಳನ್ನು ಅರ್ಪಿಸಿ ಸ್ವಾಗತಿಸಿದರು.

ಈ ಕಲ್ಲಿನಿಂದ ಕೆತ್ತಿದ ಮಗುವಿನ ರೂಪದಲ್ಲಿರುವ ಶ್ರೀರಾಮನ ವಿಗ್ರಹವನ್ನು ರಾಮಮಂದಿರದ ಗರ್ಭಗುಡಿಯಲ್ಲಿ ಇರಿಸಲಾಗುವುದು, ಮುಂದಿನ ವರ್ಷ ಜನವರಿಯಲ್ಲಿ ಮಕರ ಸಂಕ್ರಾಂತಿ ಹಬ್ಬದ ವೇಳೆಗೆ ಇದು ಸಿದ್ಧವಾಗುವ ನಿರೀಕ್ಷೆಯಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ನೇಪಾಳದ ಮುಸ್ತಾಂಗ್ ಜಿಲ್ಲೆಯ ಸಾಲಿಗ್ರಾಮ ಅಥವಾ ಮುಕ್ತಿನಾಥ (ಮೋಕ್ಷದ ಸ್ಥಳ) ಸಮೀಪವಿರುವ ಸ್ಥಳದಲ್ಲಿ ಗಂಡಕಿ ನದಿಯಲ್ಲಿ ಎರಡು ಬಂಡೆಗಳು ಕಂಡುಬಂದಿವೆ ಎಂದು ಅವರು ಹೇಳಿದ್ದಾರೆ.

“ನೇಪಾಳದಲ್ಲಿ ಕಾಳಿ ಗಂಡಕಿ ಎಂಬ ಹೆಸರಿನ ಜಲಪಾತವಿದೆ. ಇದು ದಾಮೋದರ್ ಕುಂಡ್‌ನಿಂದ ಹುಟ್ಟುತ್ತದೆ ಮತ್ತು ಗಣೇಶ್ವರ ಧಾಮ್ ಗಂಡ್ಕಿಯಿಂದ ಉತ್ತರಕ್ಕೆ 85 ಕಿಮೀ ದೂರದಲ್ಲಿದೆ. ಈ ಎರಡೂ ಬಂಡೆಗಳನ್ನು ಅಲ್ಲಿಂದ ತರಲಾಗಿದೆ. ಈ ಸ್ಥಳವು ಸಮುದ್ರ ಮಟ್ಟದಿಂದ 6,000 ಅಡಿ ಎತ್ತರದಲ್ಲಿದೆ” ಎಂದು ಶ್ರೀರಾಮ ಜನ್ಮಭೂಮಿ ತೀರ್ಥ ಕ್ಷೇತ್ರದ ಪ್ರಧಾನ ಕಾರ್ಯದರ್ಶಿ ಚಂಪತ್ ರಾಯ್ ತಿಳಿಸಿದ್ದಾರೆ.

ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.

News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.

Recent News

Back To Top