ಬೆಂಗಳೂರು: ಕರ್ನಾಟಕ ವಿಧಾನ ಚುನಾವಣೆಗೆ ರಾಜಕೀಯ ಪಕ್ಷಗಳು ಭರದ ಸಿದ್ಧತೆಯನ್ನು ಆರಂಭಿಸಿವೆ. ಅದರಲ್ಲೂ ಬಿಜೆಪಿ ಕ್ಷಿಪ್ರ ವೇಗದಲ್ಲಿ ಚುನಾವಣಾ ಪ್ರಚಾರಕ್ಕೆ ಬೇಕಾದ ವ್ಯವಸ್ಥೆಗಳನ್ನು ಮಾಡಿಕೊಳ್ಳುತ್ತಿದೆ. ಚುನಾವಣೆ ಸಂದರ್ಭದಲ್ಲಿ ಬಿಜೆಪಿಯ ಸಂಘಟನಾ ಉಸ್ತುವಾರಿಗಳು ಯಾರು ಎಂಬುದನ್ನು ಇಂದು ಅದು ಪ್ರಕಟಿಸಿದೆ.
ಕರ್ನಾಟಕ ರಾಜ್ಯಕ್ಕೆ ಚುನಾವಣಾ ಉಸ್ತುವಾರಿಯಾಗಿ ಕೇಂದ್ರ ಸಚಿವ ಧರ್ಮೇಂದ್ರ ಪ್ರಧಾನ್ ಮತ್ತು ಚುನಾವಣಾ ಸಹ ಉಸ್ತುವಾರಿಯಾಗಿ ತಮಿಳುನಾಡು ಬಿಜೆಪಿ ರಾಜ್ಯ ಅಧ್ಯಕ್ಷ ಕೆ. ಅಣ್ಣಾಮಲೈ ಅವರನ್ನು ಬಿಜೆಪಿಯ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡಾ ಅವರು ನೇಮಕ ಮಾಡಿದ್ದಾರೆ.
ಧರ್ಮೇಂದ್ರ ಪ್ರಧಾನ್ ಅವರು ಕರ್ನಾಟಕದ ನಾಯಕರು ಮತ್ತು ಕಾರ್ಯಕರ್ತರೊಂದಿಗೆ ಈ ಹಿಂದೆಯೂ ಕೆಲಸ ಮಾಡಿದ ಅನುಭವವನ್ನು ಹೊಂದಿದ್ದಾರೆ. ಸಹ ಪ್ರಭಾರಿಯಾಗಿ ನೇಮಕವಾಗಿರುವ ಕೆ. ಅಣ್ಣಾಮಲೈ ಅವರು ಕರ್ನಾಟಕದಲ್ಲಿ ಪೊಲೀಸ್ ಅಧಿಕಾರಿಯಾಗಿ ಸೇವೆ ಸಲ್ಲಿಸಿದವರು. ಹೀಗಾಗಿ ಕರ್ನಾಟಕದ ಒಡನಾಟ ಅವರಿಗೆ ಹಿಂದಿನಿಂದಲೂ ಇದೆ.
ಬಿಜೆಪಿ ರಾಷ್ಟ್ರೀಯ ಅಧ್ಯಕ್ಷರಾದ ಶ್ರೀ @JPNadda ಅವರು ಕರ್ನಾಟಕ ರಾಜ್ಯಕ್ಕೆ ಚುನಾವಣಾ ಉಸ್ತುವಾರಿಯಾಗಿ ಕೇಂದ್ರ ಸಚಿವರಾದ ಶ್ರೀ @dpradhanbjp ಮತ್ತು ಚುನಾವಣಾ ಸಹ ಉಸ್ತುವಾರಿಯಾಗಿ ತಮಿಳುನಾಡು ಬಿಜೆಪಿ ರಾಜ್ಯಾಧ್ಯಕ್ಷರಾದ ಶ್ರೀ @annamalai_k ಅವರನ್ನು ನೇಮಕ ಮಾಡಿದ್ದಾರೆ. pic.twitter.com/WQ84I1dndG
— BJP Karnataka (@BJP4Karnataka) February 4, 2023
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.