News13 ವಾಟ್ಸ್ಯಾಪ್‌ ಗ್ರೂಪ್‌ಗೆ ಸೇರಿ


×
Home About Us Advertise With s Contact Us

ಹಣದ ಕೊರತೆಯಿಂದ ಕ್ರೀಡಾಪಟು ಹಿಂದೆ ಬೀಳದಂತೆ ಕ್ರಮ: ಮೋದಿ

ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಅವರು ಇಂದು ಜೈಪುರ ಮಹಾಖೇಲ್‌ ಅನ್ನು ಉದ್ದೇಶಿಸಿ ವಿಡಿಯೋ ಕಾನ್ಫರೆನ್ಸಿಂಗ್ ಮೂಲಕ ಮಾತನಾಡಿದರು. ಇಂತಹ ಕಾರ್ಯಕ್ರಮಗಳು ಕ್ರೀಡಾ ಪ್ರತಿಭೆಗಳನ್ನು ಬಳಸಿಕೊಳ್ಳಲು ಸಹಕಾರಿಯಾಗುತ್ತವೆ. ಹಣದ ಕೊರತೆಯಿಂದ ಯಾವೊಬ್ಬ ಕ್ರೀಡಾಪಟುವೂ ಹಿಂದುಳಿಯಬಾರದು ಎಂಬುದು ಸರ್ಕಾರದ ಪ್ರಯತ್ನವಾಗಿದೆ ಎಂದಿದ್ದಾರೆ.

ಆಟಗಳಲ್ಲಿ ಹೆಣ್ಣು ಮಕ್ಕಳ ಹೆಚ್ಚುತ್ತಿರುವ ಭಾಗವಹಿಸುವಿಕೆಯನ್ನ ಶ್ಲಾಘಿಸಿದ ಮೋದಿ, ಕೇಂದ್ರ ಬಜೆಟ್‌ನಲ್ಲಿ ಕ್ರೀಡೆಗೆ ಸಂಬಂಧಿಸಿದ ಎಂಎಸ್‌ಎಂಇಗಳನ್ನು ಬಲಪಡಿಸಲು ಕ್ರಮ ಕೈಗೊಳ್ಳಲಾಗಿದೆ ಎಂದು ಹೇಳಿದರು.

ಇಂದಿನ ಯುವಕರು ಬಹುಮುಖ ಪ್ರತಿಭೆಗಳಾಗಿದ್ದು, ಯಾವುದೇ ನಿರ್ದಿಷ್ಟ ಕ್ಷೇತ್ರಕ್ಕೆ ಸೀಮಿತವಾಗಲು ಬಯಸುವುದಿಲ್ಲ. ದೇಶಾದ್ಯಂತ ಆಯೋಜಿಸಲಾಗುತ್ತಿರುವ ಕ್ರೀಡಾಕೂಟಗಳ ಸರಣಿಯು ದೊಡ್ಡ ಬದಲಾವಣೆಯನ್ನು ಪ್ರತಿಬಿಂಬಿಸುತ್ತದೆ ಮತ್ತು ಹೊಸ ಪ್ರತಿಭೆಗಳನ್ನು ಗುರುತಿಸಲು ಸಹಾಯ ಮಾಡುತ್ತದೆ ಎಂದು ಅವರು ಹೇಳಿದರು.

2017 ರಿಂದ ಜೈಪುರ ಗ್ರಾಮಾಂತರದ ಲೋಕಸಭಾ ಸಂಸದ ರಾಜ್ಯವರ್ಧನ್ ಸಿಂಗ್ ರಾಥೋಡ್ ಅವರು ಜೈಪುರದಲ್ಲಿ ಜೈಪುರ ಮಹಾಖೇಲ್ ಅನ್ನು ಆಯೋಜಿಸುತ್ತಾ ಬಂದಿದ್ದಾರೆ. ಈ ವರ್ಷ ಕಬಡ್ಡಿ ಸ್ಪರ್ಧೆಯನ್ನು ಕೇಂದ್ರೀಕರಿಸಿ ಮಹಾಖೇಲ್ ಅನ್ನು ರಾಷ್ಟ್ರೀಯ ಯುವ ದಿನದ ಸಂದರ್ಭದಲ್ಲಿ ಜನವರಿ 12 ರಂದು ಪ್ರಾರಂಭಿಸಲಾಗಿದೆ.

ಜೈಪುರ ಗ್ರಾಮಾಂತರ ಲೋಕಸಭಾ ಕ್ಷೇತ್ರದ ಎಲ್ಲಾ ಎಂಟು ವಿಧಾನಸಭಾ ಕ್ಷೇತ್ರಗಳ 450 ಕ್ಕೂ ಹೆಚ್ಚು ಗ್ರಾಮ ಪಂಚಾಯತ್‌ಗಳು, ಪುರಸಭೆಗಳು ಮತ್ತು ವಾರ್ಡ್‌ಗಳಿಂದ 6,400 ಕ್ಕೂ ಹೆಚ್ಚು ಯುವಕರು ಮತ್ತು ಕ್ರೀಡಾಪಟುಗಳ ಭಾಗವಹಿಸುವಿಕೆಗೆ ಇದು ಸಾಕ್ಷಿಯಾಗಿದೆ.

ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.

News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.

Recent News

Back To Top