ಬೆಂಗಳೂರು: ಪ್ರಬಲ ಭೂಕಂಪಕ್ಕೆ ತತ್ತರಿಸಿ ಹೋಗಿರುವ ಟರ್ಕಿಯ ನೆರವಿಗೆ ಭಾರತ ನಿಲ್ಲುತ್ತದೆ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ.
ಭಾರತ ಇಂಧನ ಸಪ್ತಾಹ–2023ಕ್ಕೆ ಚಾಲನೆ ನೀಡಿದ ಮಾತನಾಡಿದ ಅವರು, ಟರ್ಕಿಯಲ್ಲಿ ಸಂಭವಿಸಿದ ವಿನಾಶಕಾರಿ ದುರಂತದ ಬಗ್ಗೆ ತೀವ್ರ ವಿಷಾದ ವ್ಯಕ್ತಪಡಿಸಿದರು ಮತ್ತು ಭೂಕಂಪ ಸಂತ್ರಸ್ತರಿಗೆ ಭಾರತವು ಸಾಧ್ಯವಾಗುವ ಎಲ್ಲ ರೀತಿಯಲ್ಲಿಯೂ ನೆರವು ನೀಡಲಿದೆ ಎಂದು ಭರವಸೆ ನೀಡಿದರು.
ಟರ್ಕಿಯಲ್ಲಿ ಸಂಭವಿಸಿದ ವಿನಾಶಕಾರಿ ಭೂಕಂಪವನ್ನು ನಾವೆಲ್ಲರೂ ನೋಡುತ್ತಿದ್ದೇವೆ. ಹಲವಾರು ಜನರ ಸಾವು ಹಾಗೂ ಹಾನಿಗಳು ವರದಿಯಾಗಿವೆ. ಟರ್ಕಿಯ ಸಮೀಪವಿರುವ ದೇಶಗಳಲ್ಲಿಯೂ ಕೂಡ ಹಾನಿ ಸಂಭವಿಸಿದೆ. ಭೂಕಂಪ ಪೀಡಿತ ಸಂತ್ರಸ್ತರ ಜೊತೆಗೆ ಭಾರತದ 140 ಕೋಟಿ ಜನರ ಸಹಾನುಭೂತಿಯಿದೆ. ಭಾರತೀಯರು ಭೂಕಂಪ ಪೀಡಿತ ಜನರೊಂದಿಗೆ ಇದ್ದಾರೆ. ಸಂತ್ರಸ್ತರಿಗೆ ಸಾಧ್ಯವಿರುವ ಎಲ್ಲಾ ರೀತಿಯ ನೆರವು ನೀಡಲು ಭಾರತ ಸಿದ್ಧವಿದೆ ಎಂದು ಮೋದಿ ಹೇಳಿದ್ದಾರೆ.
Anguished by the loss of lives and damage of property due to the Earthquake in Turkey. Condolences to the bereaved families. May the injured recover soon. India stands in solidarity with the people of Turkey and is ready to offer all possible assistance to cope with this tragedy. https://t.co/vYYJWiEjDQ
— Narendra Modi (@narendramodi) February 6, 2023
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.