News13 ವಾಟ್ಸ್ಯಾಪ್‌ ಗ್ರೂಪ್‌ಗೆ ಸೇರಿ


×
Home About Us Advertise With s Contact Us

ಮೋದಿ ವಿರುದ್ಧ ರಾಹುಲ್‌ ಆಧಾರರಹಿತ, ನಾಚಿಕೆಯಿಲ್ಲದ ಆರೋಪ: ಬಿಜೆಪಿ ವಾಗ್ದಾಳಿ

ನವದೆಹಲಿ: ಲೋಕಸಭೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ವಿರುದ್ಧ ಗಂಭೀರ ಆರೋಪ ಮಾಡಿದ ಕಾಂಗ್ರೆಸ್ ಮತ್ತು ಸಂಸದ ರಾಹುಲ್ ಗಾಂಧಿ ವಿರುದ್ಧ ಬಿಜೆಪಿ ಹಿರಿಯ ನಾಯಕ ರವಿಶಂಕರ್ ಪ್ರಸಾದ್  ತಿರುಗೇಟು ನೀಡಿದ್ದಾರೆ.

ಕಳೆದ ತಿಂಗಳು ಹಿಂಡೆಬರ್ಗ್ ವರದಿ ಬಿಡುಗಡೆಯಾದಾಗಿನಿಂದ ಸ್ಟಾಕ್ ಮ್ಯಾನಿಪ್ಯುಲೇಷನ್, ಅಸಮರ್ಥ ಸಾಲ ಮತ್ತು ತೆರಿಗೆ ವಂಚನೆ ಆರೋಪಗಳನ್ನು ಎದುರಿಸುತ್ತಿರುವ ಉದ್ಯಮಿ ಗೌತಮ್ ಅದಾನಿ ಅವರೊಂದಿಗೆ ಪ್ರಧಾನಿ ಮೋದಿ ನಿಕಟ ಸಂಪರ್ಕ ಹೊಂದಿದ್ದಾರೆ ಎಂದು ರಾಹುಲ್ ಗಾಂಧಿ‌ ಇಂದು ಲೋಕಸಭೆಯಲ್ಲಿ ಆರೋಪಿಸಿದ್ದಾರೆ.

ರಾಹುಲ್ ಗಾಂಧಿ ಅವರು ಪ್ರಧಾನಿ ಮೋದಿ ವಿರುದ್ಧ ಆಧಾರರಹಿತ, ನಾಚಿಕೆಯಿಲ್ಲದ ಮತ್ತು ಅಜಾಗರೂಕ ಆರೋಪಗಳನ್ನು ಮಾಡಿದ್ದಾರೆ ಎಂದು ರವಿಶಂಕರ್‌ ವಾಗ್ದಾಳಿ ನಡೆಸಿದ್ದಾರೆ.

“ಕಾಂಗ್ರೆಸ್, ಅದರ ನಾಯಕರು ಎಲ್ಲಾ ದೊಡ್ಡ ಹಗರಣಗಳಲ್ಲಿ ಭಾಗಿಯಾಗಿದ್ದಾರೆ, ಇದು ಭಾರತದ ಇಮೇಜ್ ಅನ್ನು ಕಳಂಕಗೊಳಿಸಿದೆ” ಎಂದಿದ್ದಾರೆ.

ಭ್ರಷ್ಟಾಚಾರದ ಬಗ್ಗೆ ರಾಹುಲ್ ಗಾಂಧಿಯವರ ನೆನಪನ್ನು ಮತ್ತೆ ಮರುಕಳಿಸುವಂತೆ ಮಾಡುವ ಸಮಯ ಇದು. ರಾಹುಲ್ ಗಾಂಧಿ, ಅವರ ತಾಯಿ ಸೋನಿಯಾ ಗಾಂಧಿ ಮತ್ತು ಅವರ ಅಳಿಯ ರಾಬರ್ಟ್ ವಾದ್ರಾ ಜಾಮೀನಿನ ಮೇಲೆ ಇದ್ದಾರೆ ಎಂಬುದು ಅವರಿಗೆ ನೆನಪಿರಲಿ ಎಂದಿದ್ದಾರೆ

ಕಾಂಗ್ರೆಸ್ ಪಕ್ಷವು ಭ್ರಷ್ಟಾಚಾರದ ಮತ್ತು ಭ್ರಷ್ಟರನ್ನು ರಕ್ಷಿಸುವ ಅವಳಿ ಸ್ತಂಭಗಳ ಮೇಲೆ ನಿಂತಿದೆ ಎಂದು ಅವರು ಹೇಳಿದರು.

ಭ್ರಷ್ಟಾಚಾರ ಮತ್ತು ಭ್ರಷ್ಟರಿಗೆ ರಕ್ಷಣೆ ನೀಡುವುದು ರಾಹುಲ್ ಗಾಂಧಿ ಮತ್ತು ಅವರ ಕುಟುಂಬದ ಇತಿಹಾಸವಾಗಿದೆ ಎಂದು ಪ್ರಸಾದ್ ಹೇಳಿದ್ದಾರೆ.

ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.

News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.

Recent News

Back To Top