News13 ವಾಟ್ಸ್ಯಾಪ್‌ ಗ್ರೂಪ್‌ಗೆ ಸೇರಿ


×
Home About Us Advertise With s Contact Us

ಕೇಂದ್ರದ ಕಾರ್ಯಗಳಲ್ಲಿ ಪಾರದರ್ಶಕತೆ, ಪ್ರಾಮಾಣಿಕತೆ ಇದೆ: ವಿರೇಂದ್ರ ಹೆಗ್ಗಡೆ

ನವದೆಹಲಿ: ರಾಜ್ಯಸಭೆಯ ನಾಮನಿರ್ದೇಶಿತ ಸದಸ್ಯರಾಗಿರುವ ಡಾ.ವಿರೇಂದ್ರ ಹೆಗ್ಗಡೆ ಅವರು ಇಂದು ರಾಜ್ಯಸಭೆ ಕಲಾಪದಲ್ಲಿ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರ ಭಾಷಣದ ಮೇಲೆ ಭಾಷಣ ಮಾಡಿದರು.

ಬಸವಣ್ಣನವರ ಕಾಯಕವೇ ಕೈಲಾಸದಡಿ ಕೇಂದ್ರ ಸರ್ಕಾರ ಅಭಿವೃದ್ಧಿ ಕಾರ್ಯ ಮಾಡುತ್ತಿದೆ. ಪಾಶ್ಚಾತ್ಯ ಸಂಸ್ಕೃತಿ ಭಾರತ ಮೇಲೆ ಪ್ರಭಾವ ಬೀರಿದೆ. ಅದೇ ರೀತಿ ಭಾರತದ ಆರ್ಯವೇದ, ಯೋಗ ಪಾಶ್ಚಾತ್ಯದಲ್ಲಿ ಪ್ರಚಾರವಾಗುತ್ತಿದೆ. ಪ್ರಧಾನಿ ನರೇಂದ್ರ ಮೋದಿಯವರ ನೇತೃತ್ವದಲ್ಲಿ ಯೋಗ ಪ್ರಚಾರ ಪಡೆಯುತ್ತಿದೆ” ಎಂದರು.

ದೇಶದ ಧಾರ್ಮಿಕ ಕ್ಷೇತ್ರದಲ್ಲಿ ಬದಲಾವಣೆಯಾಗುತ್ತಿದೆ. ಅಯೋಧ್ಯೆ, ಕೇದಾರ, ವಾರಣಾಸಿಯಲ್ಲಿ ಅಭಿವೃದ್ಧಿಗಳಾಗಿವೆ. ಇಲ್ಲಿ ಬದಲಾವಣೆಯನ್ನು ಭಕ್ತರು ಕಂಡಿದ್ದಾರೆ. ಮಾತ್ರವಲ್ಲದೆ, ಸರ್ಕಾರ ಶಿಕ್ಷಣಕ್ಕೂ ಒತ್ತು ನೀಡುತ್ತಿದೆ. ಏಕ್ ಭಾರತ್ ಶ್ರೆಷ್ಠ ಭಾರತ್ ಸಂದೇಶದಂತೆ ಪ್ರಧಾನಿ ನರೇಂದ್ರ ಮೋದಿ ಕೆಲಸ ಮಾಡುತ್ತಿದ್ದಾರೆ ಎಂದರು.

ಕೇಂದ್ರ ಸರ್ಕಾರದ ಕಾರ್ಯವೈಖರಿಗಳಲ್ಲಿ ಪ್ರಾಮಾಣಿಕತೆ ಮತ್ತು ಪಾರದರ್ಶಕತೆ ಎರಡನ್ನು ಕಾಣಬಹುದು. ಭಾರತಕ್ಕೆ ಉತ್ತಮ ಭವಿಷ್ಯವಿದೆ. ಸರ್ಕಾರದಿಂದ ಮತ್ತಷ್ಟು ಅಭಿವೃದ್ಧಿಪರ ಯೋಜನೆಗಳು ಆಗಲಿ ಎಂದು ಜನತೆ ಹಾರೈಸುತ್ತಿದ್ದಾರೆ ಎಂದಿದ್ದಾರೆ.

ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.

News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.

Recent News

Back To Top