ನವದೆಹಲಿ: ಭೂಕಂಪದಿಂದ ತತ್ತರಿಸಿ ಹೋಗಿರುವ ಟರ್ಕಿಯಲ್ಲಿ ಭಾರತದ ರಾಷ್ಟ್ರೀಯ ವಿಪತ್ತು ನಿರ್ವಹಣಾ ಪಡೆ (ಎನ್ಡಿಆರ್ಎಫ್) ರಕ್ಷಣಾ ಕಾರ್ಯಾಚರಣೆಗಳನ್ನು ನಡೆಸುತ್ತಿದ್ದು, ಈಗಾಗಲೇ ಹಲವು ಮಂದಿಯ ಜೀವ ಉಳಿಸಿದೆ.
ಆಪರೇಷನ್ ದೋಸ್ತ್ ಅಡಿ ಟರ್ಕಿಗೆ ಬೇಕಾದ ಎಲ್ಲಾ ನೆರವನ್ನು ಭಾರತ ರವಾನಿಸಿದೆ. ಭಾರತೀಯ ಸೇನೆ ಫೀಲ್ಡ್ ಆಸ್ಪತ್ರೆಯನ್ನು ಸ್ಥಾಪಿಸಿ ಗಾಯಾಳುಗಳಿಗೆ ಚಿಕಿತ್ಸೆಯನ್ನು ನೀಡುವ ಕಾರ್ಯ ಮಾಡುತ್ತಿದೆ.
ಕೇಂದ್ರ ಸಚಿವ ಅಮಿತ್ ಶಾ ಅವರು ಟರ್ಕಿಯಲ್ಲಿ ಎನ್ಡಿಆರ್ಎಫ್ ನಡೆಸುತ್ತಿರುವ ರಕ್ಷಣಾ ಕಾರ್ಯಾಚರಣೆ ಬಗೆಗಿನ ವಿಡಿಯೋವನ್ನು ಹಂಚಿಕೊಂಡಿದ್ದು, ಇದರಲ್ಲಿ ಸಿಬ್ಬಂದಿಗಳು 9 ವರ್ಷದ ಮಗುವನ್ನು ದೊಡ್ಡ ದೊಡ್ಡ ಕಲ್ಲುಗಳ ನಡುವಿನಿಂದ ರಕ್ಷಣೆ ಮಾಡುತ್ತಿರುವುದನ್ನು ಕಾಣಬಹುದು. ಮಾತ್ರವಲ್ಲದೇ ಎನ್ಡಿಆರ್ಎಫ್ ಸಿಬ್ಬಂದಿಗಳು ಅಲ್ಲಿ ನಡೆಸುತ್ತಿರುವ ಮಾನವೀಯ ಕಾರ್ಯಗಳ ಬಗ್ಗೆಯೂ ವಿಡಿಯೋ ತೋರಿಸಿದೆ.
“ನಮ್ಮ NDRF ಬಗ್ಗೆ ಹೆಮ್ಮೆ ಇದೆ. ಟರ್ಕಿಯಲ್ಲಿನ ರಕ್ಷಣಾ ಕಾರ್ಯಾಚರಣೆಯಲ್ಲಿ IND-11 ತಂಡವು ಗಾಜಿಯಾಂಟೆಪ್ ನಗರದಲ್ಲಿ ಆರು ವರ್ಷದ ಬಾಲಕಿ ಬೆರೆನ್ನ ಜೀವವನ್ನು ಉಳಿಸಿದೆ. ಪ್ರಧಾನಿ ನರೇಂದ್ರ ಮೋದಿಯವವರ ಮಾರ್ಗದರ್ಶನದಲ್ಲಿ, ನಾವು ಎನ್ಡಿಆರ್ಎಫ್ ಅನ್ನು ವಿಶ್ವದ ಪ್ರಮುಖ ವಿಪತ್ತು ಪ್ರತಿಕ್ರಿಯೆ ಪಡೆಯಾಗಿ ಮಾಡಲು ಬದ್ಧರಾಗಿದ್ದೇವೆ” ಎಂದಿದ್ದಾರೆ.
Proud of our NDRF.
In the rescue operations in Türkiye, Team IND-11 saved the life of a six-year-old girl, Beren, in Gaziantep city.
Under the guidance of PM @narendramodi, we are committed to making @NDRFHQ the world’s leading disaster response force. #OperationDost pic.twitter.com/NfvGZB24uK
— Amit Shah (@AmitShah) February 9, 2023
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.