ನವದೆಹಲಿ: ಭಾರತವು ಟರ್ಕಿಯ ಜನರೊಂದಿಗೆ ದೃಢವಾಗಿ ನಿಂತಿದೆ. ಆಪರೇಷನ್ ದೋಸ್ತ್ ಅಡಿಯಲ್ಲಿ ಗರಿಷ್ಠ ಸಂಖ್ಯೆಯ ಜೀವಗಳನ್ನು ಉಳಿಸಲು ಶ್ರಮಿಸಲಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ.
ಟರ್ಕಿ ಮತ್ತು ಸಿರಿಯಾ ದೇಶಗಳು ಭೂಕಂಪಕ್ಕೆ ಅಕ್ಷರಶಃ ನಲುಗಿ ಹೋಗಿದ್ದು, ಸಾವಿನ ಸಂಖ್ಯೆ 23 ಸಾವಿರಕ್ಕೆ ಏರಿಕೆಯಾಗಿದೆ. ಉಂಟಾದ ಆಸ್ತಿಪಾಸ್ತಿ ನಷ್ಟ ಊಹೆಗೂ ಮೀರಿದ್ದು ಎಂದು ಹೇಳಲಾಗುತ್ತಿದೆ. ಇಂತಹ ಕಠಿಣ ಸಂದರ್ಭದಲ್ಲಿ ಭಾರತವು ಆಪರೇಷನ್ ದೋಸ್ತ್ ಅಡಿಯಲ್ಲಿ ರಕ್ಷಣಾ ತಂಡವನ್ನು ಮತ್ತು ಸಾಮಾಗ್ರಿಗಳನ್ನು ಕಳುಹಿಸಿಕೊಟ್ಟು ತನ್ನಿಂದಾದ ಸಹಾಯ ಮಾಡುತ್ತಿದೆ.
ಈ ಸಂದಿಗ್ಧ ಸಮಯದಲ್ಲಿ ಭಾರತವು ಟರ್ಕಿಯ ಜನರೊಂದಿಗೆ ದೃಢವಾಗಿ ನಿಂತಿದೆ ‘ಆಪರೇಷನ್ ದೋಸ್ತ್’ ಅಡಿಯಲ್ಲಿ ಭಾರತವು ಗರಿಷ್ಠ ಸಂಖ್ಯೆಯ ಜೀವಗಳನ್ನು ಉಳಿಸಲು ಪ್ರಯತ್ನಿಸುತ್ತದೆ ಎಂದು ಮೋದಿ ವಿದೇಶಾಂಗ ವ್ಯವಹಾರಗಳ ಸಚಿವಾಲಯದ ಟ್ವೀಟ್ಗೆ ಪ್ರತಿಕ್ರಿಯೆಯಾಗಿ ಟ್ವಿಟ್ ಮಾಡಿದ್ದಾರೆ.
“ನಮ್ಮ ತಂಡಗಳು ‘ಆಪರೇಷನ್ ದೋಸ್ತ್’ ನ ಭಾಗವಾಗಿ ಹಗಲಿರುಳು ಕೆಲಸ ಮಾಡುತ್ತಿವೆ. ಗರಿಷ್ಠ ಜೀವಗಳು ಮತ್ತು ಆಸ್ತಿಯನ್ನು ಉಳಿಸುವುದನ್ನು ಖಚಿತಪಡಿಸಿಕೊಳ್ಳಲು ಅವರು ತಮ್ಮ ಕೈಲಾದಷ್ಟು ಸಹಾಯ ಮಾಡುತ್ತಲೇ ಇರುತ್ತಾರೆ. ಈ ನಿರ್ಣಾಯಕ ಸಮಯದಲ್ಲಿ, ಭಾರತವು ತುರ್ಕಿಯೆ ಜನರೊಂದಿಗೆ ದೃಢವಾಗಿ ನಿಂತಿದೆ” ಎಂದಿದ್ದಾರೆ.
ಟರ್ಕಿಯಲ್ಲಿ ಭಾರತ ತಂಡವು ನಿರ್ವಹಿಸುತ್ತಿರುವ ಪಾತ್ರದ ಕುರಿತು ವಿದೇಶಾಂಗ ಸಚಿವಾಲಯ ನಿರಂತರವಾಗಿ ಟ್ವಿಟ್ ಮೂಲಕ ಮಾಹಿತಿ ನೀಡುತ್ತಿದೆ.
Our teams are working day and night as a part of ‘Operation Dost.’ They will keep giving their best to ensure maximum lives and property are saved. In this critical time, India stands firmly with the people of Türkiye. https://t.co/FJT9ve4TYj
— Narendra Modi (@narendramodi) February 10, 2023
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.