News13 ವಾಟ್ಸ್ಯಾಪ್‌ ಗ್ರೂಪ್‌ಗೆ ಸೇರಿ


×
Home About Us Advertise With s Contact Us

ಪದ್ಮಶ್ರೀ ಪುರಸ್ಕೃತ ಕಲಾವಿದ ಮುನಿವೆಂಕಟಪ್ಪರಿಗೆ ಬಿಜೆಪಿ ಎಸ್‍ಸಿ ಮೋರ್ಚಾದಿಂದ  ಸನ್ಮಾನ

ಬೆಂಗಳೂರು: ಎಸ್‍ಸಿ ಮೋರ್ಚಾ ರಾಜ್ಯ ಕಾರ್ಯಕಾರಿಣಿ ಸಭೆಯು ಇಂದು ಮಲ್ಲೇಶ್ವರದ ಬಿಜೆಪಿ ರಾಜ್ಯ ಕಾರ್ಯಾಲಯ “ಜಗನ್ನಾಥ ಭವನ”ದಲ್ಲಿ ನಡೆಯಿತು. ಪದ್ಮಶ್ರೀ ಪ್ರಶಸ್ತಿಗೆ ಆಯ್ಕೆಯಾದ ಹಿರಿಯ ತಮಟೆ ಕಲಾವಿದ ಚಿಕ್ಕಬಳ್ಳಾಪುರ ಜಿಲ್ಲೆಯ ಮುನಿವೆಂಕಟಪ್ಪ ಅವರನ್ನು ಸನ್ಮಾನಿಸಲಾಯಿತು.

ರಾಜ್ಯ ಬಿಜೆಪಿ ಎಸ್.ಸಿ. ಮೋರ್ಚಾ ಅಧ್ಯಕ್ಷ ಛಲವಾದಿ ನಾರಾಯಣಸ್ವಾಮಿ ಅವರು ಮಾತನಾಡಿ, ಪಕ್ಷವು ರಾಜ್ಯದಲ್ಲಿ ಅಸೆಂಬ್ಲಿ ಚುನಾವಣೆಯಲ್ಲಿ 140ರಿಂದ 150 ಸ್ಥಾನ ಪಡೆಯಲು ತೀರ್ಮಾನಿಸಿದೆ. ಅದಕ್ಕೆ ಅನುಗುಣವಾಗಿ ಎಸ್‍ಸಿ ಮೋರ್ಚಾ ತನ್ನ ಚಟುವಟಿಕೆಗಳನ್ನು ಮಾಡಲಿದೆ ಎಂದು ವಿವರಿಸಿದರು.

ಇವತ್ತು ಎಸ್‍ಸಿ ಮೋರ್ಚಾದ 8ನೇ ರಾಜ್ಯ ಕಾರ್ಯಕಾರಿಣಿ ಸಭೆ ನಡೆದಿದೆ. ರಥಯಾತ್ರೆ, ಸಮಾವೇಶಗಳಲ್ಲಿ ಎಸ್‍ಸಿ ಮೋರ್ಚಾವು ಸಕ್ರಿಯವಾಗಿ ಭಾಗವಹಿಸಲು ನಿರ್ಧರಿಸಲಾಗಿದೆ; ಪ್ರತಿ ಜಿಲ್ಲೆಗಳ ಸಮಾವೇಶದಲ್ಲಿ 25 ಸಾವಿರಕ್ಕೂ ಮೀರಿ ನಮ್ಮ ಕಾರ್ಯಕರ್ತರು ಭಾಗವಹಿಸುತ್ತಾರೆ ಎಂದು ತಿಳಿಸಿದರು.

ಎಸ್‍ಸಿ ಮೋರ್ಚಾ ರಾಷ್ಟ್ರೀಯ ಪ್ರಭಾರಿ ಸೋಗಲ್ ಕುಮಾರ್ ಅವರು ಆಗಮಿಸಿದ್ದಾರೆ. ಪದ್ಮಶ್ರೀ ಪ್ರಶಸ್ತಿ ಪಡೆದ ತಮಟೆ ಮುನಿವೆಂಕಟಪ್ಪ ಅವರು ಮತ್ತು ಪಕ್ಷದ ಮುಖಂಡರು ಉದ್ಘಾಟನೆ ನೆರವೇರಿಸಿದ್ದಾರೆ ಎಂದು ತಿಳಿಸಿದರು.

ಬಡತನದಲ್ಲಿರುವ ಕಲಾವಿದ ಮುನಿವೆಂಕಟಪ್ಪರಿಗೆ ಸನ್ಮಾನ ಮಾಡಿ 25 ಸಾವಿರ ರೂಪಾಯಿ ಗೌರವಧನವನ್ನಾಗಿ ನೀಡಿದ್ದೇವೆ. ಪ್ರಧಾನಿ ಆದರಣೀಯ ನರೇಂದ್ರ ಮೋದಿಜಿ ಅವರ ಸರಕಾರವು ಮುನಿವೆಂಕಟಪ್ಪ ಅವರನ್ನು ಗುರುತಿಸುವ ಮೂಲಕ ಇಡೀ ದಲಿತ ಸಮುದಾಯವನ್ನೇ ಗೌರವಿಸಿದಂತಾಗಿದೆ. ಮೋದಿಜಿ, ಪಕ್ಷಕ್ಕೆ ಧನ್ಯವಾದಗಳು ಎಂದು ತಿಳಿಸಿದರು.

ಚುನಾವಣೆಗೆ ಪಕ್ಷವನ್ನು ಸಿದ್ಧಗೊಳಿಸುವ ಉದ್ದೇಶದಿಂದ ಸಭೆ ನಡೆದಿದೆ. ಹೆಚ್ಚು ಮತದಾರರಿದ್ದು, ಹೆಚ್ಚಿನ ಪ್ರಮಾಣದಲ್ಲಿ ಮತದಾನ ಮಾಡುವ ದಲಿತ ಸಮುದಾಯಗಳು ಮನಸು ಮಾಡಿದರೆ ಬಿಜೆಪಿಯನ್ನು ಅಧಿಕಾರಕ್ಕೆ ತರಲು ಸಾಧ್ಯವಿದೆ. ಇದುವರೆಗೆ ಬೇರೆಬೇರೆ ಪಕ್ಷಗಳಿಗೆ ಅವರು ಮತದಾನ ಮಾಡುತ್ತಿದ್ದರು. ಈಗ ಅವರೆಲ್ಲರೂ ಬುದ್ಧಿವಂತರಾಗಿದ್ದಾರೆ. ಕಾಂಗ್ರೆಸ್ ಸುಡುವ ಮನೆ, ಅಲ್ಲಿ ನಿಮಗೆ ಭವಿಷ್ಯ ಇಲ್ಲ ಎಂದು ಡಾ. ಅಂಬೇಡ್ಕರರು ಹೇಳಿದ್ದನ್ನು ಗಮನಿಸಿ, ಬಾಬಾ ಸಾಹೇಬರನ್ನು ಗೌರವಿಸಿ ಬಿಜೆಪಿಯನ್ನು ಬೆಂಬಲಿಸುತ್ತಿದ್ದಾರೆ ಎಂದು ತಿಳಿಸಿದರು.

ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.

News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.

Recent News

Back To Top