News13 ವಾಟ್ಸ್ಯಾಪ್‌ ಗ್ರೂಪ್‌ಗೆ ಸೇರಿ


×
Home About Us Advertise With s Contact Us

ಆಂಧ್ರ, ಮಹಾರಾಷ್ಟ್ರ ಸೇರಿದಂತೆ ಹಲವು ರಾಜ್ಯಗಳಿಗೆ ನೂತನ ರಾಜ್ಯಪಾಲರ ನೇಮಕ

ನವದೆಹಲಿ: ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಮಹಾರಾಷ್ಟ್ರದ ರಾಜ್ಯಪಾಲ ಭಗತ್ ಸಿಂಗ್ ಕೊಶ್ಯಾರಿ ಮತ್ತು ಲಡಾಖ್‌ನ ಲೆಫ್ಟಿನೆಂಟ್ ಗವರ್ನರ್ ರಾಧಾ ಕೃಷ್ಣನ್ ಮಾಥುರ್ ಅವರ ರಾಜೀನಾಮೆಯನ್ನು ಅಂಗೀಕರಿಸಿದ್ದಾರೆ.

ಇದೀಗ ಜಾರ್ಖಂಡ್ ರಾಜ್ಯಪಾಲ ರಮೇಶ್ ಬೈಸ್ ಮಹಾರಾಷ್ಟ್ರದ ನೂತನ ರಾಜ್ಯಪಾಲರಾಗಿ ನೇಮಕವಾಗಿದ್ದು, ಅರುಣಾಚಲ ಪ್ರದೇಶದ ರಾಜ್ಯಪಾಲ ಬ್ರಿಗೇಡಿಯರ್ ಬಿ.ಡಿ. ಮಿಶ್ರಾ ಅವರನ್ನು ಲಡಾಖ್‌ನ ಹೊಸ ಲೆಫ್ಟಿನೆಂಟ್ ಗವರ್ನರ್ ಆಗಿ ನೇಮಿಸಲಾಗಿದೆ. ಇತರ ಹನ್ನೊಂದು ರಾಜ್ಯಗಳ ಗವರ್ನರ್ ಮತ್ತು ಲೆಫ್ಟಿನೆಂಟ್ ಗವರ್ನರ್ ಕೂಡ ಬದಲಾಯಿಸಲಾಗಿದೆ.

ರಾಷ್ಟ್ರಪತಿಗಳ ಸಚಿವಾಲಯದ ಅಧಿಕೃತ ಪ್ರಕಟಣೆಯ ಪ್ರಕಾರ, ಆಂಧ್ರಪ್ರದೇಶಕ್ಕೆ ಕನ್ನಡಿಗರಾದ ನ್ಯಾಯಮೂರ್ತಿ (ನಿವೃತ್ತ) ಎಸ್. ಅಬ್ದುಲ್ ನಜೀರ್ ಅವರನ್ನು ನೇಮಿಸಲಾಗಿದೆ ಮತ್ತು ಛತ್ತೀಸ್‌ಗಢದ ರಾಜ್ಯಪಾಲರಾದ ಸುಶ್ರೀ ಅನುಸೂಯಾ ಉಯಿಕ್ಯೆ ಅವರು ಮಣಿಪುರದ ರಾಜ್ಯಪಾಲರಾಗಿ ಅಧಿಕಾರ ವಹಿಸಿಕೊಳ್ಳಲಿದ್ದಾರೆ. ಬಿಸ್ವ ಭೂಷಣ್ ಹರಿಚಂದನ್ ಅವರು ಛತ್ತೀಸ್‌ಗಢದ ನೂತನ ರಾಜ್ಯಪಾಲರಾಗಲಿದ್ದಾರೆ.  ಲಕ್ಷ್ಮಣ್ ಪ್ರಸಾದ್ ಆಚಾರ್ಯ ಸಿಕ್ಕಿಂಗೆ,  ಜಾರ್ಖಂಡ್‌ಗೆ ಸಿ.ಪಿ. ರಾಧಾಕೃಷ್ಣನ್, ಹಿಮಾಚಲ ಪ್ರದೇಶಕ್ಕೆ ಶಿವಪ್ರತಾಪ್ ಶುಕ್ಲಾ, ಅಸ್ಸಾಂಗೆ ಗುಲಾಬ್ ಚಂದ್ ಕಟಾರಿಯಾ ನೇಮಕವಾಗಿದೆ.

ನಾಗಾಲ್ಯಾಂಡ್‌ಗೆ ಗಣೇಶನ್, ಮೇಘಾಲಯಕ್ಕೆ ಬಿಹಾರದ ರಾಜ್ಯಪಾಲ ಫಾಗು ಚೌಹಾಣ್, ಬಿಹಾರಕ್ಕೆ ಹಿಮಾಚಲ ಪ್ರದೇಶದ ರಾಜ್ಯಪಾಲ ರಾಜೇಂದ್ರ ವಿಶ್ವನಾಥ್ ಅರ್ಲೇಕರ್ ಅವರನ್ನು ನೇಮಕ ಮಾಡಲಾಗಿದೆ.

ಈ ನೇಮಕಗಳು ಆಯಾ ಕಚೇರಿಗಳ ಪ್ರಭಾರವನ್ನು ವಹಿಸಿಕೊಂಡ ದಿನಾಂಕದಿಂದ ಜಾರಿಗೆ ಬರುತ್ತವೆ.

ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.

News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.

Recent News

Back To Top