News13 ವಾಟ್ಸ್ಯಾಪ್‌ ಗ್ರೂಪ್‌ಗೆ ಸೇರಿ


×
Home About Us Advertise With s Contact Us

ಕನ್ನಡ ಚಿತ್ರರಂಗದ ದಿಗ್ಗಜರನ್ನು ಭೇಟಿಯಾದ ಮೋದಿ

ನವದೆಹಲಿ: ʼಏರೋ ಇಂಡಿಯಾ 2023ʼ ಉದ್ಘಾಟನೆಗಾಗಿ ಬೆಂಗಳೂರಿಗೆ ಆಗಮಿಸಿರುವ ಪ್ರಧಾನಿ ನರೇಂದ್ರ ಮೋದಿಯವರು ಕನ್ನಡ ಚಿತ್ರರಂಗದ ದಿಗ್ಗಜರನ್ನು ಇಂದು ಭೇಟಿಯಾಗಿದ್ದಾರೆ.

ಕಾಂತಾರ ಖ್ಯಾತಿಯ ರಿಷಬ್‌ ಶೆಟ್ಟಿ, ಕೆಜಿಎಫ್‌ ಸ್ಟಾರ್‌ ಯಶ್‌, ದಿವಂಗತ ನಟ ಪುನೀತ್‌ ರಾಜ್‌ ಕುಮಾರ್‌ ಅವರ ಪತ್ನಿ ಅಶ್ವಿನಿ, ಸಾಮಾಜಿಕ ಜಾಲತಾಣಗಳಲ್ಲಿ ಖ್ಯಾತಿ ಪಡೆದಿರುವ ಶ್ರದ್ಧಾ ಮೋದಿಯವರನ್ನು ಭೇಟಿಯಾಗಿದ್ದಾರೆ.

ನರೇಂದ್ರ ಮೋದಿ ಅವರು ಕನ್ನಡ ಚಿತ್ರರಂಗದ ಗಣ್ಯರನ್ನು ಭೇಟಿಯಾಗಿ ಅವರೊಂದಿಗೆ ಕರ್ನಾಟಕದ ಸಾಂಸ್ಕೃತಿಕ ಚಿತ್ರಣ ಮತ್ತು ನವ ಭಾರತ ಹಾಗೂ ಪ್ರಗತಿಪರ ಕರ್ನಾಟಕದ ನಿರ್ಮಾಣಕ್ಕೆ ಅವರು ನೀಡಬಹುದಾದ ಕೊಡುಗೆಗಳ ಬಗ್ಗೆ ಚರ್ಚಿಸಿದ್ದಾರೆ.

ಮೋದಿ ಅವರು ಇಂದು ಬೆಂಗಳೂರಿನಲ್ಲಿ ಏರೋ ಇಂಡಿಯಾ 2023 ಕ್ಕೆ ಚಾಲನೆ ನೀಡಿದರು ಮತ್ತು ಇದರ ಸ್ಮರಣಾರ್ಥ ಅಂಚೆ ಚೀಟಿ ಬಿಡುಗಡೆ ಮಾಡಿದರು. ಇದು ಏಷ್ಯಾದ ಅತೀದೊಡ್ಡ ಏರ್‌ ಶೋ ಆಗಿದೆ. ಈ ಸಂದರ್ಭದಲ್ಲಿ  ಮುಖ್ಯಮಂತ್ರಿ ಬಸವರಾಜ ಎಸ್.‌ ಬೊಮ್ಮಾಯಿ, ಕೇಂದ್ರ ರಕ್ಷಣಾ ಸಚಿವರಾದ  ರಾಜನಾಥ ಸಿಂಗ್‌, ಕರ್ನಾಟಕದ ರಾಜ್ಯಪಾಲರು, ಕೇಂದ್ರ ಸಚಿವರು ಉಪಸ್ಥಿತರಿದ್ದರು.

 

ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.

News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.

Recent News

Back To Top