ನವದೆಹಲಿ: ಭುವನೇಶ್ವರದ ಏಮ್ಸ್ ವೈದ್ಯರು ರೋಗಿ ಒಬ್ಬರಿಗೆ ಯಶಸ್ವಿಯಾಗಿ ಕ್ವಾಡ್ರುಪಲ್ ಜಾಯಿಂಟ್ ರಿಪ್ಲೇಸ್ಮೆಂಟ್ ಸರ್ಜರಿ ನಡೆಸಿದ್ದು, ಈ ಮೂಲಕ ವೈದ್ಯಕೀಯ ವಲಯದಲ್ಲಿ ಮಹತ್ವದ ಮೈಲಿಗಲ್ಲು ಸಾಧಿಸಿದ್ದಾರೆ.
ವೈದ್ಯರ ಈ ಸಾಧನೆಯನ್ನು ಪ್ರಧಾನಿ ನರೇಂದ್ರ ಮೋದಿಯವರು ಶ್ಲಾಘಿಸಿದ್ದಾರೆ.
ವೈದ್ಯರು ಆವಿಷ್ಕಾರದಲ್ಲಿ ಮುಂಚೂಣಿಯಲ್ಲಿದ್ದಾರೆ ಮತ್ತು ವೈದ್ಯಕೀಯ ಜಗತ್ತಿನಲ್ಲಿ ಹೊಸ ಬದಲಾವಣೆಗಳನ್ನು ಅಳವಡಿಸಿಕೊಂಡಿದ್ದಾರೆ ಎಂದು ಮೋದಿ ಅಭಿನಂದಿಸಿದ್ದಾರೆ.
ಭುವನೇಶ್ವರ ಏಮ್ಸ್ ರೋಗಿಗೆ ಯಶಸ್ವಿ ಕ್ವಾಡ್ರುಪಲ್ ಜಾಯಿಂಟ್ ರಿಪ್ಲೇಸ್ಮೆಂಟ್ ಸರ್ಜರಿ ನಡೆಸಿದ ನಂತರ ಮಾಡಿದ ಟ್ವೀಟ್ಗೆ ಪ್ರತಿಕ್ರಿಯೆಯಾಗಿ, ವೈದ್ಯರ ಈ ಕೌಶಲ್ಯವು ಭಾರತವನ್ನು ಹೆಮ್ಮೆಪಡುವಂತೆ ಮಾಡುತ್ತದೆ ಎಂದು ಮೋದಿ ಹೇಳಿದ್ದಾರೆ.
ಇದು ದೇಶದಲ್ಲಿ ನಡೆದ ಈ ರೀತಿಯ ಮೊದಲ ಪ್ರಕರಣವಾಗಿದೆ ಮತ್ತು ಜಾಗತಿಕವಾಗಿ ವರದಿಯಾದ ಎರಡನೇ ಪ್ರಕರಣವಾಗಿದೆ. ಇಲ್ಲಿ ವೈದ್ಯರು 37 ವರ್ಷ ವಯಸ್ಸಿನ ಮಹಿಳೆಯ ಸೊಂಟ ಮತ್ತು ಮೊಣಕಾಲಿನ ಕೀಲುಗಳಿಗೆ ಒಂದೇ ವ್ಯವಸ್ಥೆಯಲ್ಲಿ ಶಸ್ತ್ರಚಿಕಿತ್ಸೆ ನಡೆಸಿದ್ದಾರೆ.
Compliments to our doctors for always being at the forefront of innovation and embracing new changes in the medical world. Their dexterity makes us proud! https://t.co/TsCaHhAxJP
— Narendra Modi (@narendramodi) February 13, 2023
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.