News13 ವಾಟ್ಸ್ಯಾಪ್‌ ಗ್ರೂಪ್‌ಗೆ ಸೇರಿ


×
Home About Us Advertise With s Contact Us

ಮುದ್ರಾ ಯೋಜನೆಯಡಿ 39 ಕೋಟಿ ಸಾಲ ನೀಡಲಾಗಿದೆ: ಕೇಂದ್ರ

ನವದೆಹಲಿ: ಪ್ರಧಾನ ಮಂತ್ರಿ ಮುದ್ರಾ ಯೋಜನೆಯಡಿ ಜನವರಿ 27 ರವರೆಗೆ ಸುಮಾರು 39 ಕೋಟಿ ಸಾಲವನ್ನು ವಿಸ್ತರಿಸಲಾಗಿದೆ ಎಂದು ಸರ್ಕಾರ ಇಂದು ತಿಳಿಸಿದೆ.

ಮುದ್ರಾ ಯೋಜನೆಯನ್ನು 2015 ರಲ್ಲಿ ಪರಿಚಯಿಸಲಾಯಿತು. ಸಣ್ಣ ಉದ್ಯಮಗಳನ್ನು ಆರಂಭಿಸಲು ಬಯಸುವವರಿಗೆ ಈ ಯೋಜನೆ ಹಣಕಾಸು ನೆರವು ಒದಗಿಸುತ್ತದೆ.

ಇಂದು ಲೋಕಸಭೆಯಲ್ಲಿ ಲಿಖಿತ ಉತ್ತರ ನೀಡಿದ ಹಣಕಾಸು ಖಾತೆ ರಾಜ್ಯ ಸಚಿವ ಡಾ.ಭಾಗವತ್ ಕರದ್, 39 ಕೋಟಿ ಸಾಲಗಳ  ಪೈಕಿ 26 ಕೋಟಿ ಸಾಲವನ್ನು ಮಹಿಳಾ ಉದ್ಯಮಿಗಳಿಗೆ ಮತ್ತು ಸುಮಾರು 20 ಕೋಟಿ ಸಾಲವನ್ನು ಎಸ್‌ಸಿ, ಎಸ್‌ಟಿ, ಹಿಂದುಳಿದ  ಸಮುದಾಯದವರಿಗೆ ನೀಡಲಾಗಿದೆ ಎಂದರು.

ಈ ಯೋಜನೆಯು 2015 ರಿಂದ 2018 ರವರೆಗೆ ದೇಶದಲ್ಲಿ 1 ಕೋಟಿ 12 ಲಕ್ಷ ನಿವ್ವಳ ಹೆಚ್ಚುವರಿ ಉದ್ಯೋಗವನ್ನು ಸೃಷ್ಟಿಸಲು ಸಹಾಯ ಮಾಡಿದೆ ಎಂದು ಅವರು ಮಾಹಿತಿ ನೀಡಿದ್ದಾರೆ.

ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.

News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.

Recent News

Back To Top