ಶ್ರೀನಗರ: ಜಮ್ಮು ಕಾಶ್ಮೀರ ಗಡಿಯಲ್ಲಿ ಶುಕ್ರವಾರ ಭಯೋತ್ಪಾದನ ವಿರೋಧಿ ಕಾರ್ಯಾಚರಣೆ ನಡೆಸಿರುವ ಸೇನಾ ಪಡೆಗಳು ಒಟ್ಟು ಐವರು ಉಗ್ರರನ್ನು ಹತ್ಯೆ ಮಾಡುವಲ್ಲಿ ಯಶಸ್ವಿಯಾಗಿದ್ದಾರೆ.
ಉತ್ತರ ಕಾಶ್ಮೀರದ ಗ್ರಾಮವೊಂದರಲ್ಲಿ ಭಾರತದೊಳಗೆ ಒಳನುಸುಳಲು ಈ ಉಗ್ರರು ಪ್ರಯತ್ನಿಸುತ್ತಿದ್ದ ವೇಳೆ ಕಾರ್ಯಾಚರಣೆ ನಡೆಸಿ ಭಾರತೀಯ ಸೇನೆ ಇವರನ್ನು ಹತ್ಯೆ ಮಾಡಿದೆ. ಗುರೆಝ್ ಸೆಕ್ಟರ್ನ ಕಂಝಲ್ವಲ್ನಲ್ಲಿ ಈ ಘಟನೆ ನಡೆದಿದೆ.
ರಾಕೆಟ್ ತಿರುಗಣಿ ಗ್ರೆನೇಡ್, ಎಕೆ47 ರೈಫಲ್ಗಳನ್ನು ಈ ಉಗ್ರರಿಂದ ವಶಪಡಿಸಿಕೊಳ್ಳಲಾಗಿದೆ.
ಅಕ್ರಮವಾಗಿ ಒಳನುಸುಳಿ ವಾಸ್ತ ಗಡಿರೇಖೆಯ ಬಳಿ ದಾಳಿ ನಡೆಸಲು ಈ ಉಗ್ರರು ಸಂಚು ರೂಪಿಸಿದ್ದರು ಎಂದು ಸೇನೆ ತಿಳಿಸಿದೆ.
ಇನ್ನೊಂದೆಡೆ ಪೂಂಚ್ನಲ್ಲಿ ಕದನವಿರಾಮ ಉಲ್ಲಂಘಿಸಿ ಪಾಕ್ ಸೈನಿಕರು ಒರ್ವ ಭಾರತೀಯ ಯೋಧನನ್ನು ಘಾಸಿಗೊಳಿಸಿದ್ದಾರೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.