News13 ವಾಟ್ಸ್ಯಾಪ್‌ ಗ್ರೂಪ್‌ಗೆ ಸೇರಿ


×
Home About Us Advertise With s Contact Us

ಫೆ.16ರಂದು ರಾಷ್ಟ್ರೀಯ ಆದಿ ಮಹೋತ್ಸವ ಉದ್ಘಾಟಿಸಲಿದ್ದಾರೆ ಮೋದಿ

ನವದೆಹಲಿ: ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಗುರುವಾರ ನವದೆಹಲಿಯ ಮೇಜರ್ ಧ್ಯಾನ್ ಚಂದ್ ರಾಷ್ಟ್ರೀಯ ಕ್ರೀಡಾಂಗಣದಲ್ಲಿ ರಾಷ್ಟ್ರೀಯ ಆದಿ ಮಹೋತ್ಸವವನ್ನು ಉದ್ಘಾಟಿಸಲಿದ್ದಾರೆ.

ನವದೆಹಲಿಯಲ್ಲಿ ಪತ್ರಿಕಾಗೋಷ್ಠಿಯನ್ನುದ್ದೇಶಿಸಿ ಮಾತನಾಡಿದ ಬುಡಕಟ್ಟು ವ್ಯವಹಾರಗಳ ಸಚಿವ ಅರ್ಜುನ್ ಮುಂಡಾ, 28 ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳ ಒಂದು ಸಾವಿರ ಬುಡಕಟ್ಟು ಕುಶಲಕರ್ಮಿಗಳು ಮತ್ತು ಕಲಾವಿದರು ಉತ್ಸವದಲ್ಲಿ ಭಾಗವಹಿಸಲಿದ್ದಾರೆ. ಆತ್ಮನಿರ್ಭರ ಭಾರತದ ದೃಷ್ಟಿಯನ್ನು ಸಾಕಾರಗೊಳಿಸುವಲ್ಲಿ ಬುಡಕಟ್ಟು ಸಮುದಾಯಗಳ ಸಂಪೂರ್ಣ ಭಾಗವಹಿಸುವಿಕೆ ಮತ್ತು ಒಳಗೊಳ್ಳುವಿಕೆಯನ್ನು ಖಚಿತಪಡಿಸಿಕೊಳ್ಳಲು ಬುಕಟ್ಟು ಸಚಿವಾಲಯವು ಎಲ್ಲಾ ಪ್ರಯತ್ನಗಳನ್ನು ಮಾಡುತ್ತಿದೆ ಎಂದು ಮುಂಡಾ ಹೇಳಿದ್ದಾರೆ.

ಆದಿ ಮಹೋತ್ಸವವು ಬುಡಕಟ್ಟು ಉತ್ಪನ್ನಗಳನ್ನು ರಾಷ್ಟ್ರೀಯ ಮತ್ತು ಅಂತರಾಷ್ಟ್ರೀಯ ಮಾರುಕಟ್ಟೆಗಳಲ್ಲಿ ಉತ್ತೇಜಿಸಲು ಪ್ರಮುಖ ವೇದಿಕೆಯಾಗಿದೆ ಎಂದು ಸಚಿವರು ಹೇಳಿದರು. ಪ್ರಮುಖ ನಗರಗಳಲ್ಲಿ ಆದಿ ಮಹೋತ್ಸವವನ್ನು ಆಯೋಜಿಸುವ ಪರಿಕಲ್ಪನೆಯು ಮಧ್ಯವರ್ತಿಗಳನ್ನು ತೊಡೆದುಹಾಕಲು ಮತ್ತು ದೊಡ್ಡ ಮಾರುಕಟ್ಟೆಗಳಿಗೆ ನೇರ ಪ್ರವೇಶವನ್ನು ಒದಗಿಸುವ ಮೂಲಕ ಬುಡಕಟ್ಟು ಕುಶಲಕರ್ಮಿಗಳಿಗೆ ವರದಾನವಾಗಿದೆ.

ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.

News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.

Recent News

Back To Top