News13 ವಾಟ್ಸ್ಯಾಪ್‌ ಗ್ರೂಪ್‌ಗೆ ಸೇರಿ


×
Home About Us Advertise With s Contact Us

ತ್ರಿಪುರಾ ವಿಧಾನಸಭಾ ಚುನಾವಣಾ ಪ್ರಚಾರ ಇಂದು ಸಂಜೆ ಮುಕ್ತಾಯ

ನವದೆಹಲಿ: ತ್ರಿಪುರಾದಲ್ಲಿ ವಿಧಾನಸಭೆ ಚುನಾವಣೆಯ ಪ್ರಚಾರ ಇಂದು ಸಂಜೆ ಮುಕ್ತಾಯವಾಗಲಿದೆ. ಗುರುವಾರ ಮತದಾನ ನಡೆಯಲಿದೆ. ಶಾಂತಿಯುತ ಮತದಾನಕ್ಕೆ ಚುನಾವಣಾ ಆಯೋಗ ಎಲ್ಲಾ ಅಗತ್ಯ ಕ್ರಮಗಳನ್ನು ಕೈಗೊಂಡಿದೆ. ಮತದಾನದ ಹಿನ್ನೆಲೆಯಲ್ಲಿ ಭಾರತ-ಬಾಂಗ್ಲಾದೇಶ ಗಡಿ ಮತ್ತು ಅಂತರರಾಜ್ಯ ಗಡಿಗಳನ್ನು ಮುಚ್ಚಲಾಗಿದೆ. ಕಾನೂನು ಸುವ್ಯವಸ್ಥೆ ಕಾಪಾಡಲು ರಾಜ್ಯಾದ್ಯಂತ ಹೆಚ್ಚುವರಿ ಭದ್ರತಾ ಪಡೆಗಳನ್ನು ನಿಯೋಜಿಸಲಾಗಿದೆ.

22 ಮಹಿಳಾ ಅಭ್ಯರ್ಥಿಗಳು ಸೇರಿದಂತೆ ಒಟ್ಟು 259 ಅಭ್ಯರ್ಥಿಗಳು ಕಣದಲ್ಲಿದ್ದಾರೆ. ಆಡಳಿತಾರೂಢ ಬಿಜೆಪಿ ಅತಿ ಹೆಚ್ಚು 55 ಸ್ಥಾನಗಳಲ್ಲಿ ಅಭ್ಯರ್ಥಿಗಳನ್ನು ಕಣಕ್ಕಿಳಿಸಿದ್ದು, ಉಳಿದ ಸ್ಥಾನಗಳನ್ನು ಐಪಿಎಫ್‌ಟಿಗೆ ನೀಡಲಾಗಿದೆ. ಸಿಪಿಐಎಂ 43 ಸ್ಥಾನಗಳಲ್ಲಿ ಸ್ಪರ್ಧಿಸುತ್ತಿದ್ದು, ಹೊಸ ಮಿತ್ರ ಪಕ್ಷ ಕಾಂಗ್ರೆಸ್ 13 ಸ್ಥಾನಗಳಲ್ಲಿ ಸ್ಪರ್ಧಿಸಲಿದೆ. ಪ್ರಾದೇಶಿಕ ಪಕ್ಷವಾದ ತಿಪ್ರಾ ಮೋಥಾ 42 ಕ್ಷೇತ್ರಗಳಲ್ಲಿ ಅಭ್ಯರ್ಥಿಗಳನ್ನು ನೀಡಿದ್ದು, ಟಿಎಂಸಿ 28 ಸ್ಥಾನಗಳಲ್ಲಿ ಸ್ಪರ್ಧಿಸುತ್ತಿದೆ.

2018 ರಲ್ಲಿ, ಬಿಜೆಪಿ 36 ಸ್ಥಾನಗಳನ್ನು ಗೆದ್ದಿತು ಮತ್ತು ಅದರ ಮಿತ್ರಪಕ್ಷವಾದ IPFT 8 ರಲ್ಲಿ ಸಿಪಿಐಎಂ 16 ಸ್ಥಾನಗಳನ್ನು ಗಳಿಸಿತು. ಅಭಿವೃದ್ಧಿ, ಉತ್ತಮ ಮೂಲಸೌಕರ್ಯ, ಸಾಮಾಜಿಕ ಭದ್ರತೆ, ಮಹಿಳಾ ಸಬಲೀಕರಣ, ಹಳೆಯ ಪಿಂಚಣಿ ಯೋಜನೆಯ ಪುನರುಜ್ಜೀವನ ಇವು ಚುನಾವಣಾ ಪ್ರಚಾರದ ಪ್ರಮುಖ ವಿಷಯಗಳಾಗಿವೆ.

ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.

News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.

Recent News

Back To Top