ಟೊರೊಂಟೊ: ಕೆನಡಾದಲ್ಲಿ ಹಿಂದೂ ದೇವಾಲಯವನ್ನು ವಿರೂಪಗೊಳಿಸಿದ ಮತ್ತೊಂದು ಘಟನೆ ನಡೆದಿದೆ. ಇದನ್ನು ಬಲವಾಗಿ ಖಂಡಿಸಿರುವ ಭಾರತ, ಘಟನೆಯ ಬಗ್ಗೆ ತನಿಖೆ ನಡೆಸುವಂತೆ ಮತ್ತು ದುಷ್ಕರ್ಮಿಗಳ ವಿರುದ್ಧ ಶೀಘ್ರ ಕ್ರಮ ಕೈಗೊಳ್ಳುವಂತೆ ಆ ದೇಶದ ಅಧಿಕಾರಿಗಳಿಗೆ ಕೇಳಿಕೊಂಡಿದೆ.
ಮಿಸ್ಸಿಸೌಗಾ ನಗರದ ರಾಮಮಂದಿರವನ್ನು ಭಾರತ ವಿರೋಧಿ ಘೋಷಣೆಗಳೊಂದಿಗೆ ವಿರೂಪಗೊಳಿಸಲಾಗಿದೆ, ಇದು ಭಾರತೀಯ ಸಮುದಾಯದಲ್ಲಿ ಆತಂಕ ಮೂಡಿಸಿದೆ.
“ಭಾರತ ವಿರೋಧಿ ಬರಹದ ಮೂಲಕ ಮಿಸ್ಸಿಸೌಗಾದಲ್ಲಿ ರಾಮಮಂದಿರವನ್ನು ವಿರೂಪಗೊಳಿಸಿರುವುದನ್ನು ನಾವು ಬಲವಾಗಿ ಖಂಡಿಸುತ್ತೇವೆ. ಘಟನೆಯ ಬಗ್ಗೆ ತನಿಖೆ ನಡೆಸಲು ಮತ್ತು ದುಷ್ಕರ್ಮಿಗಳ ಮೇಲೆ ತ್ವರಿತ ಕ್ರಮ ಕೈಗೊಳ್ಳುವಂತೆ ನಾವು ಕೆನಡಾದ ಅಧಿಕಾರಿಗಳಿಗೆ ವಿನಂತಿಸಿದ್ದೇವೆ” ಎಂದು ಟೊರೊಂಟೊದಲ್ಲಿರುವ ಭಾರತೀಯ ಕಾನ್ಸುಲೇಟ್ ಜನರಲ್ ಬುಧವಾರ ಮುಂಜಾನೆ ಟ್ವೀಟ್ ಮಾಡಿದ್ದಾರೆ.
“ಮಿಸ್ಸಿಸೌಗಾದ ರಾಮಮಂದಿರ ದೇವಸ್ಥಾನದಲ್ಲಿ ದ್ವೇಷ ಪ್ರೇರಿತ ವಿಧ್ವಂಸಕ ಕೃತ್ಯವನ್ನು ಕೇಳಿ ನನಗೆ ಬೇಸರವಾಗಿದೆ. ಅಪರಿಚಿತ ಶಂಕಿತರು ದೇವಾಲಯದ ಹಿಂಭಾಗದ ಗೋಡೆಗಳಿಗೆ ಬಣ್ಣ ಎರಚಿದ್ದಾರೆ. ಈ ಪ್ರದೇಶದಲ್ಲಿ ಈ ರೀತಿಯ ದ್ವೇಷಕ್ಕೆ ಸ್ಥಳವಿಲ್ಲ” ಎಂದು ಅಲ್ಲಿನ ಮೇಯರ್ ಬ್ರೌನ್ ಟ್ವೀಟ್ ಮಾಡಿದ್ದಾರೆ.
We strongly condemn the defacing of Ram Mandir in Missisauga with anti-India graffiti. We have requested Canadian authorities to investigate the incident and take prompt action on perpetrators.
— IndiainToronto (@IndiainToronto) February 14, 2023
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.