ನವದೆಹಲಿ: ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರು ಇಂದು ನವದೆಹಲಿಯ ಮೇಜರ್ ಧ್ಯಾನ್ ಚಂದ್ ರಾಷ್ಟ್ರೀಯ ಕ್ರೀಡಾಂಗಣದಲ್ಲಿ ಮೆಗಾ ರಾಷ್ಟ್ರೀಯ ಬುಡಕಟ್ಟು ಉತ್ಸವ- ಆದಿ ಮಹೋತ್ಸವವನ್ನು ಉದ್ಘಾಟಿಸಿದ್ದಾರೆ.
28 ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳ 1,000 ಬುಡಕಟ್ಟು ಕಲಾವಿದರು ಉತ್ಸವದಲ್ಲಿ ಭಾಗವಹಿಸುತ್ತಿದ್ದಾರೆ. 17 ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳ 39 ವನ್ ಧನ್ ವಿಕಾಸ ಕೇಂದ್ರಗಳು ಈ ಮಹೋತ್ಸವದಲ್ಲಿ ಭಾಗವಹಿಸುತ್ತಿವೆ.
ಉತ್ಸವವು ಬುಡಕಟ್ಟು ಕರಕುಶಲ ವಸ್ತುಗಳು, ಕೈಮಗ್ಗ, ವರ್ಣಚಿತ್ರಗಳು, ಆಭರಣಗಳು, ಬಿದಿರು, ಕುಂಬಾರಿಕೆ, ಆಹಾರ ಮತ್ತು ನೈಸರ್ಗಿಕ ಉತ್ಪನ್ನಗಳು ಮತ್ತು ಬುಡಕಟ್ಟು ಪಾಕಪದ್ಧತಿಗಳ ಪ್ರದರ್ಶನ ಮತ್ತು ಮಾರಾಟವನ್ನು ಒಳಗೊಂಡಿದೆ. ದೇಶಾದ್ಯಂತದ ಬುಡಕಟ್ಟು ಜನಾಂಗದ ಶ್ರೀಮಂತ ಮತ್ತು ವೈವಿಧ್ಯಮಯ ಪರಂಪರೆಯನ್ನು 200 ಕ್ಕೂ ಹೆಚ್ಚು ಮಳಿಗೆಗಳಲ್ಲಿ ಪ್ರದರ್ಶಿಸಲಾಗುತ್ತಿದೆ.
ಬುಡಕಟ್ಟು ಜನಲ ಸಂಸ್ಕೃತಿ, ಕರಕುಶಲ, ಪಾಕಪದ್ಧತಿ, ವಾಣಿಜ್ಯ ಮತ್ತು ಸಾಂಪ್ರದಾಯಿಕ ಕಲೆ ಸೇರಿದಂತೆ ಬುಡಕಟ್ಟು ಜನಾಂಗದ ಉತ್ಸಾಹವನ್ನು ಆಚರಿಸುವ ಹಬ್ಬವು ಈ ತಿಂಗಳ 27 ರವರೆಗೆ ಮುಂದುವರಿಯಲಿದೆ. ಅಂತರಾಷ್ಟ್ರೀಯ ಸಿರಿಧಾನ್ಯ ವರ್ಷದ ಆಚರಣೆಗೆ ಅನುಗುಣವಾಗಿ, ಮಹೋತ್ಸವದಲ್ಲಿ ವಿಶೇಷವಾಗಿ ಆದಿವಾಸಿಗಳು ಬೆಳೆಸಿದ ಶ್ರೀ ಅನ್ನವನ್ನು ಪ್ರದರ್ಶಿಸಲಾಗುತ್ತದೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.