ಬೆಂಗಳೂರು: ಪಕ್ಷದ ವಿವಿಧ ಮೋರ್ಚಾಗಳ ಸಮಾವೇಶದ ಮೂಲಕ ರಾಜ್ಯದ ಅಸೆಂಬ್ಲಿ ಚುನಾವಣೆಯಲ್ಲಿ ಬಿಜೆಪಿಗೆ ಗೆಲುವು ಸಿಗಲಿದೆ. ಆದ್ದರಿಂದ ಸಮಾವೇಶಗಳ ಯಶಸ್ಸಿಗೆ ಪ್ರತಿಯೊಬ್ಬರೂ ಶ್ರಮಿಸಬೇಕು ಎಂದು ಬಿಜೆಪಿ ರಾಜ್ಯ ಉಪಾಧ್ಯಕ್ಷ ಮತ್ತು ಬಿಜೆಪಿ ವಿವಿಧ ಮೋರ್ಚಾಗಳ ಸಮಾವೇಶಗಳ ಸಂಚಾಲಕ ಬಿ.ವೈ.ವಿಜಯೇಂದ್ರ ಅವರು ತಿಳಿಸಿದರು.
ಮಲ್ಲೇಶ್ವರದ ಬಿಜೆಪಿ ರಾಜ್ಯ ಕಾರ್ಯಾಲಯ “ಜಗನ್ನಾಥ ಭವನ”ದಲ್ಲಿ ಇಂದು ಯುವ ಮೋರ್ಚಾ, ಎಸ್ಸಿ ಮೋರ್ಚಾ, ಎಸ್ಟಿ ಮೋರ್ಚಾ, ಒಬಿಸಿ ಮೋರ್ಚಾ, ಮಹಿಳಾ ಮೋರ್ಚಾ, ರೈತ ಮೋರ್ಚಾ ಮತ್ತು ಅಲ್ಪಸಂಖ್ಯಾತ ಮೋರ್ಚಾಗಳ ರಾಜ್ಯ ಪದಾಧಿಕಾರಿಗಳ ಮತ್ತು ಆಹ್ವಾನಿತರ ಸಭೆಯಲ್ಲಿ ಮಾತನಾಡಿದ ಅವರು, ಜಿಲ್ಲೆಗಳಲ್ಲಿ ಒಟ್ಟು 200ಕ್ಕೂ ಹೆಚ್ಚು ಸಮಾವೇಶಗಳು ನಡೆಯಲಿವೆ. ಆಯಾ ಸಮುದಾಯದ, ಸಮಾಜಗಳ ಜನರನ್ನು ಸಂಪರ್ಕಿಸಿ ಸಮಾವೇಶದಲ್ಲಿ ಭಾಗವಹಿಸುವಂತೆ ಮಾಡಬೇಕು. ಸಾಂಸ್ಕೃತಿಕ, ಕಲಾ ಪ್ರದರ್ಶನದ ಮೂಲಕ ಸಮಾವೇಶ ವೈಶಿಷ್ಟ್ಯಪೂರ್ಣವಾಗಿ ಇರುವಂತೆ ನೋಡಿಕೊಳ್ಳಬೇಕಿದೆ ಎಂದು ಕಿವಿಮಾತು ಹೇಳಿದರು.
ಎಲ್ಲ ವರ್ಗಗಳ, ಎಲ್ಲ ಸಮುದಾಯದ ಜನರು ಈ ಸಮಾವೇಶದಲ್ಲಿ ಪಾಲ್ಗೊಳ್ಳಬೇಕು ಎಂದು ಅವರು ಮನವಿ ಮಾಡಿದರು. ಮೊಹಲ್ಲಾಗಳು, ಕಾಲೋನಿಗಳು ಸೇರಿ ಎಲ್ಲ ವರ್ಗದ ಜನರನ್ನು ಸಂಪರ್ಕಿಸಲು ಯೋಜನೆ ರೂಪಿಸಿ ಅನುಷ್ಠಾನಕ್ಕೆ ತರಲು ತಿಳಿಸಿದರು.
ಸಮುದಾಯಗಳ ಮುಖಂಡರು, ಧಾರ್ಮಿಕ ಕೇಂದ್ರಗಳ ಮುಖ್ಯಸ್ಥರು, ಸಂಘ ಸಂಸ್ಥೆಗಳು ಸೇರಿದಂತೆ ಸಮಾಜದ ಎಲ್ಲರನ್ನು ಸೇರಿಸಲು ತಿಳಿಸಿದರು.
ಅದ್ಧೂರಿ ಮೆರವಣಿಗೆ, ಬೈಕ್ ರ್ಯಾಲಿ, ಮಹಾಪುರುಷರ ಪುತ್ಥಳಿಗೆ ಗೌರವ ಸಮರ್ಪಣೆ ಮಾಡಲು ನಿರ್ಧರಿಸಲಾಯಿತು. ಸಾಂಸ್ಕøತಿಕ ಮೆರುಗನ್ನು ಹೊಂದಿರಬೇಕು. ಸಾಂಪ್ರದಾಯಿಕ ಉಡುಗೆ ತೊಡುಗೆಗಳನ್ನು ಧರಿಸಿ ಸಮಾವೇಶದಲ್ಲಿ ಭಾಗವಹಿಸಲು ತೀರ್ಮಾನಿಸಲಾಯಿತು.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.