ನವದೆಹಲಿ: ಜವಾಹರಲಾಲ್ ನೆಹರು ವಿಶ್ವವಿದ್ಯಾಲಯ (ಜೆಎನ್ಯು)ದಲ್ಲಿ ಛತ್ರಪತಿ ಶಿವಾಜಿ ಮಹಾರಾಜರ ಭಾವಚಿತ್ರವನ್ನು ಧ್ವಂಸಗೊಳಿಸಲಾಗಿದೆ. ಎಡಪಂಥೀಯ ಕಾರ್ಯಕರ್ತರು ಈ ಕೃತ್ಯ ಎಸಗಿದ್ದಾರೆ ಎಂದು ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ (ಎಬಿವಿಪಿ) ಸದಸ್ಯರು ಆರೋಪಿಸಿದ್ದಾರೆ.
ಎಡಪಂಥೀಯ ಕಾರ್ಯಕರ್ತರು ಛತ್ರಪತಿ ಶಿವಾಜಿ ಮಹಾರಾಜರನ್ನು ಅವಮಾನಿಸಿದ್ದಾರೆ ಎಂದು ಆರೋಪಿಸಿ ಎಬಿವಿಪಿ ಕಾರ್ಯಕರ್ತರು ಪ್ರತಿಭಟನೆಯನ್ನೂ ನಡೆಸಿದ್ದಾರೆ.
ಶಿವಾಜಿ ಮಹಾರಾಜರ ಜನ್ಮದಿನದ ಹಿನ್ನಲೆಯಲ್ಲಿ ವಿದ್ಯಾರ್ಥಿಗಳ ಚಟುವಟಿಕೆ ಕೇಂದ್ರದ ಗೋಡೆಗಳ ಮೇಲೆ ಶಿವಾಜಿ ಮಹಾರಾಜರ ಭಾವಚಿತ್ರವನ್ನು ಭಾನುವಾರ ಇರಿಸಲಾಗಿತ್ತು. ಆದರೆ ಎಡಪಂಥೀಯರ ಗುಂಪು ಭಾವಚಿತ್ರ ವಿರೂಪ ಮಾಡಿ ವಿಧ್ವಂಸಕ ಕೃತ್ಯ ನಡೆಸಿದೆ ಎಂದು ಎಬಿವಿಪಿ ಸದಸ್ಯರು ಆರೋಪಿಸಿದ್ದಾರೆ.
ಎಬಿವಿಪಿ ಜೆಎನ್ಯು ಕಾರ್ಯದರ್ಶಿ ಉಮೇಶಚಂದ್ರ ಅಜ್ಮೀರ ಮಾತನಾಡಿ, ‘ಇಂದು ಛತ್ರಪತಿ ಶಿವಾಜಿ ಮಹಾರಾಜರ ಜನ್ಮದಿನವಾಗಿದ್ದು, ವಿದ್ಯಾರ್ಥಿ ಚಟುವಟಿಕೆ ಕೇಂದ್ರದ ಹೊರಭಾಗದ ಗೋಡೆಗಳ ಮೇಲೆ ಶಿವಾಜಿ ಮಹಾರಾಜರ ಭಾವಚಿತ್ರವನ್ನು ಇರಿಸಿದ ಶ್ರದ್ಧಾಂಜಲಿ ಅರ್ಪಿಸಿದ್ದೆವು. ಆದರೆ ಜೆಎನ್ಯುನ ಕಮ್ಯುನಿಸ್ಟರಿಗೆ ಅದನ್ನು ಅರಗಿಸಿಕೊಳ್ಳಲು ಸಾಧ್ಯವಾಗಲಿಲ್ಲ. `100 ಫ್ಲವರ್ಸ್ ಗ್ರೂಪ್’ ಮತ್ತು ಎಸ್ಎಫ್ಐನ ಜನರು ಬಂದು ಶಿವಾಜಿ ಮಹಾರಾಜರ ಭಾವಚಿತ್ರವನ್ನು ಧ್ವಂಸಗೊಳಿಸಿದ್ದಾರೆ” ಎಂದು ಆರೋಪಿಸಿದ್ದಾರೆ.
ಘಟನೆಯಲ್ಲಿ ಭಾಗಿಯಾದ ಹಲವರು ಹೊರಗಿನವರು. ಅನುಮತಿಯಿಲ್ಲದೆ ಕಾಲೇಜು ಆವರಣಕ್ಕೆ ಪ್ರವೇಶಿಸಿದ್ದಾರೆ. ನಾವು ಪ್ರಶ್ನೆ ಮಾಡಿದಾಗ ನಾವು ಇಂತಹ ಕೃತ್ಯವನ್ನು ಮಾಡೇ ಮಾಡುತ್ತೇವೆ, ನಾವು ಶಿವಾಜಿಯನ್ನು ನಂಬುವುದಿಲ್ಲ, ನಾವು ಮಾರ್ಕ್ಸ್ವಾದಿಗಳು ಮತ್ತು ಲೆನಿನಿಸ್ಟ್ ಸಿದ್ಧಾಂತವನ್ನು ಮಾತ್ರ ನಂಬುತ್ತೇವೆ ಎಂದು ಹೇಳಿದ್ದಾರೆ. ಅವರು ತಮ್ಮ ಗುರುತಿನ ಚೀಟಿಗಳನ್ನು ತೋರಿಸಲು ವಿಫಲರಾಗಿದ್ದಾರೆ ಎಂದು ಅಜ್ಮೀರಾ ಆರೋಪಿಸಿದ್ದಾರೆ.
ಆರೋಪಿಗಳ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕು ಮತ್ತು ವಿಶ್ವವಿದ್ಯಾನಿಲಯದ ವಾತಾವರಣಕ್ಕೆ ಅಡ್ಡಿಪಡಿಸುವ ಕಿಡಿಗೇಡಿಗಳನ್ನು ತಡೆಯಬೇಕು ಎಂದು ಎಬಿವಿಪಿ ಕಾರ್ಯದರ್ಶಿ ಜೆಎನ್ಯು ಆಡಳಿತವನ್ನು ಒತ್ತಾಯಿಸಿದ್ದಾರೆ.
“ಆರೋಪಿಗಳ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವಂತೆ ನಾವು ಜೆಎನ್ಯು ಆಡಳಿತವನ್ನು ವಿನಂತಿಸುತ್ತೇವೆ. ಕ್ಯಾಂಪಸ್ಗೆ ಅಕ್ರಮ ವಿದ್ಯಾರ್ಥಿಗಳು ಪ್ರವೇಶಿಸಿ ತೊಂದರೆ ಸೃಷ್ಟಿಸುವುದನ್ನು ತಡೆಯಬೇಕು ಎಂದು ನಾವು ಆಡಳಿತವನ್ನು ಒತ್ತಾಯಿಸುತ್ತೇವೆ. ಇವರುಗಳು ವಿಶ್ವವಿದ್ಯಾನಿಲಯಕ್ಕೆ ಕೆಟ್ಟ ಹೆಸರು ತರುವುದನ್ನು ನಿಲ್ಲಿಸಬೇಕು” ಎಂದು ಅಜ್ಮೀರಾ ಹೇಳಿದ್ದಾರೆ.
Delhi | ABVP members in JNU alleged portrait of Shivaji Maharaj was vandalised (19.02)
On the occasion of Shivaji Jayanti, we kept a portrait at student activity centre, but students from SFI threw it outside the room while garland was thrown in the dustbin: JNU ABVP Secretary pic.twitter.com/kuY7i0Izbw
— ANI (@ANI) February 19, 2023
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.