ಶ್ರೀನಗರ: ಭಾರತ ವಿರೋಧಿ ಕೃತ್ಯದಲ್ಲಿ ತೊಡಗಿರುವ ಪ್ರತ್ಯೇಕತಾವಾದಿ ಸಂಘಟನೆ ದುಕ್ತರನ್-ಇ-ಮಿಲ್ಲತ್ನ ನಾಯಕಿ ಆಸಿಯಾ ಅಂದ್ರಭಿಯನ್ನು ಜಮ್ಮು ಕಾಶ್ಮೀರ ಪೊಲೀಸರು ಶುಕ್ರವಾರ ಬೆಳಿಗ್ಗೆ ಬಂಧಿಸಿದ್ದಾರೆ.
ಶ್ರೀನಗರದ ರಾಂಭಾಗ್ ಪ್ರದೇಶದಲ್ಲಿರುವ ಈಕೆಯ ನಿವಾಸದ ಮೇಲೆ ದಾಳಿ ನಡೆಸಿದ ಪೊಲೀಸರು ಈಕೆಯನ್ನು ಬಂಧನಕ್ಕೊಳಪಡಿಸಿದ್ದಾರೆ ಎಂದು ಮೂಲಗಳು ತಿಳಿಸಿವೆ.
ಈಕೆ ಮುಂಬಯಿ ದಾಳಿಯ ರುವಾರಿ ಹಫೀಝ್ ಸಯೀದ್ ಪಾಕಿಸ್ಥಾನದಲ್ಲಿ ನಡೆಸಿದ್ದ ಸಮಾವೇಶವನ್ನು ಉದ್ದೇಶಿಸಿ ದೂರವಾಣಿ ಮುಖಾಂತರ ಮಾತನಾಡಿದ್ದಳು. ಅಲ್ಲದೇ ಪಾಕ್ ಸ್ವಾತಂತ್ರ್ಯ ದಿನಾಚರಣೆಯಂದು ಕಾಶ್ಮೀರದಲ್ಲಿ ಪಾಕ್ ಧ್ವಜ ಹಾರಿಸಿದ್ದಳು, ಅಲ್ಲಿನ ರಾಷ್ಟ್ರಗೀತೆ ಹಾಡಿದ್ದಳು.
ಹೀಗಾಗಿ ಈಕೆಯ ವಿರುದ್ಧ ಕಾನೂನು ಬಾಹಿರ ಕೃತ್ಯಗಳ ತಡೆ ಕಾಯ್ದೆ ಅನ್ವಯ ಪ್ರಕರಣ ದಾಖಲು ಮಾಡಲಾಗಿತ್ತು. ಇದೀಗ ಆಕೆಯನ್ನು ಬಂಧನಕ್ಕೀಡು ಮಾಡಲಾಗಿದೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.